Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಭೂಭಾಗಕ್ಕೆ ಬಾಂಬ್‌ ಹಾಕಿದ...

ಭಾರತದ ಭೂಭಾಗಕ್ಕೆ ಬಾಂಬ್‌ ಹಾಕಿದ ಮ್ಯಾನ್ಮಾರ್‌ ಸೇನೆ !

12 Jan 2023 6:52 PM IST
share
ಭಾರತದ ಭೂಭಾಗಕ್ಕೆ ಬಾಂಬ್‌ ಹಾಕಿದ ಮ್ಯಾನ್ಮಾರ್‌ ಸೇನೆ !

ಹೊಸದಿಲ್ಲಿ: ಮಿಜೋರಾಂನ ಚಂಫಾಯಿ ಜಿಲ್ಲೆಗೆ ಹತ್ತಿರದಲ್ಲಿರುವ ತನ್ನ ಬಂಡುಕೋರರ ತರಬೇತಿ ಶಿಬಿರದ ಮೇಲೆ ಮ್ಯಾನ್ಮಾರ್‌ ಮಿಲಿಟರಿ ಮಂಗಳವಾರ ವಾಯುದಾಳಿ ನಡೆಸುವ ವೇಳೆ ಭಾರತೀಯ ಭೂಪ್ರದೇಶದ ಮೇಲೆ ಬಾಂಬ್‌ ಹಾಕಿದೆ ಎಂದು ಘಟನೆಯ ಪ್ರತ್ಯಕ್ಷದರ್ಶಿ ಸಾಕ್ಷಿ ಹಾಗೂ ಭಾರತೀಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮ್ಯಾನ್ಮಾರ್‌ನ ಸೇನೆಯು ಮಂಗಳವಾರ ಚಿನ್‌ ನ್ಯಾಷನಲ್‌ ಆರ್ಮಿ ಇದರ ಮುಖ್ಯ ಕಾರ್ಯಾಲಯವಾದ ಕ್ಯಾಂಪ್‌ ವಿಕ್ಟೋರಿಯಾ ಮೇಲೆ ದಾಳಿ ನಡೆಸಿತ್ತು. ಈ ಜನಾಂಗೀಯ ಸಶಸ್ತ್ರ ಗುಂಪು ಮ್ಯಾನ್ಮಾರ್‌ ಮಿಲಿಟರಿಯೊಂದಿಗೆ ಸಂಘರ್ಷ ನಡೆಸಿದ ಇತಿಹಾಸ ಹೊಂದಿದೆ. ಕ್ಯಾಂಪ್‌ ವಿಕ್ಟೋರಿಯಾ ಟಿಯಾವು ನದಿಯಾಚೆ ಭಾರತ-ಮ್ಯಾನ್ಮಾರ್‌ ಗಡಿಯಲ್ಲಿದೆ. ಇಲ್ಲಿ ಎರಡೂ ದೇಶಗಳನ್ನು ಒಂದು ಸಣ್ಣ ಸೇತುವೆ ಜೋಡಿಸುತ್ತದೆ.

ಮಂಗಳವಾರ ಅಪರಾಹ್ನ 3,30 ಕ್ಕೆ ಮ್ಯಾನ್ಮಾರ್‌ ಯುದ್ಧ ವಿಮಾನಗಳು ಬಾಂಬ್‌ ದಾಳಿ ಆರಂಭಿಸಿದ ನಂತರ  ತನ್ನ ಗ್ರಾಮದ ವಫಾಯಿ ಎಂಬಲ್ಲಿ ಸ್ಫೋಟದ ಸದ್ದುಗಳು ಕೇಳಿಸಿದ್ದವು, ಈ ಗ್ರಾಮವು ಕ್ಯಾಂಪ್‌ ವಿಕ್ಟೋರಿಯಾಗೆ ಸನಿಹದಲ್ಲಿದೆ ಎಂದು ಸ್ಥಳೀಯ ನಿವಾಸಿ ಮಾಯೆಂಗ ಹೇಳಿದ್ದಾರೆ.

"ಒಂದು ಬಾಂಬ್‌ ಮಿಜೋರಾಂ ಕಡೆ ಬಿದ್ದರೆ ಇನ್ನೊಂದು ಭಾರತೀಯ ಭಾಗದ ಟಿಯಾವು ನದಿಯಿಂದ ಸುಮಾರು 30 ಮೀಟರ್‌ ದೂರದಲ್ಲಿ ಬಿತ್ತು," ಎಂದು ಆ ನಿವಾಸಿ ಹೇಳಿದ್ದಾರೆ.

ಚಂಫಾಯಿ ಇಲ್ಲಿನ ಹಿರಿಯ ಅಧಿಕಾರಿ ಕೂಡ ಈ ಘಟನೆಯನ್ನು ದೃಢೀಕರಿಸಿದ್ದಾರೆ. ಫರ್ಕವನ್‌ ಗ್ರಾಮ ಮತ್ತು ಸುತ್ತಲಿನ ಸ್ಥಳಗಳ ನಿವಾಸಿಗಳಿಗೆ ಸ್ಫೋಟದ ಸದ್ದುಗಳು ಕೇಳಿಸಿದ್ದವು. ಕೆಲವೊಂದು ಬಾಂಬ್‌ ಚೂರುಗಳು ನದಿಯಲ್ಲಿ ಬಿದ್ದಿದ್ದವು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಘಟನೆ ಗಡಿ ಭಾಗದ ಗ್ರಾಮಗಳಲ್ಲಿ ಭೀತಿ ಸೃಷ್ಟಿಸಿದೆ. ಬುಧವಾರ ಕೂಡ ಇನ್ನೂ ಎರಡು ಬಾಂಬ್‌ಗಳು ಬಿದ್ದಿವೆ ಎಂದು ಯಂಗ್‌ ಮಿಝೋ ಅಸೋಸಿಯೇಶನ್‌ ಸದಸ್ಯ ಮಾಂಗ ಎಂಬವರು ಹೇಳಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಹಾಗೂ ಕಾರ್ಮಿಕರು ಕೆಲಸದ ಸ್ಥಳಗಳಿಗೆ ಹೋಗಲು ಹೆದರುತ್ತಿದ್ದಾರೆ. ಬಾರತ ಮ್ಯಾನ್ಮಾರ್‌ಗೆ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.

ಮಂಗಳವಾರದ ವಾಯು ದಾಳಿಯಲ್ಲಿ ಚಿನ್‌ ನ್ಯಾಷನಲ್‌ ಆರ್ಮಿಯ ಐದು ಕೇಡರ್‌ಗಳು ಹತ್ಯೆಗೀಡಾಗಿದ್ದಾರೆ ಎಂದು ತಿಳಿದು ಬಂದಿಲ್ಲ.

ಭಾರತ ಸರ್ಕಾರ ಈ ಬೆಳವಣಿಗೆ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

share
Next Story
X