Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ಉಷ್ಣತೆ ಮೈನಸ್ 4 ಡಿಗ್ರಿಗೆ...

ದಿಲ್ಲಿಯ ಉಷ್ಣತೆ ಮೈನಸ್ 4 ಡಿಗ್ರಿಗೆ ಕುಸಿತ?: ಸಾರ್ವಕಾಲಿಕ ದಾಖಲೆಯತ್ತ ಜನವರಿ ತಿಂಗಳ ಉತ್ತರ ಭಾರತದ ಉಷ್ಣತೆ

12 Jan 2023 8:03 PM IST
share
ದಿಲ್ಲಿಯ ಉಷ್ಣತೆ ಮೈನಸ್ 4 ಡಿಗ್ರಿಗೆ ಕುಸಿತ?: ಸಾರ್ವಕಾಲಿಕ ದಾಖಲೆಯತ್ತ ಜನವರಿ ತಿಂಗಳ ಉತ್ತರ ಭಾರತದ ಉಷ್ಣತೆ

ಹೊಸದಿಲ್ಲಿ, ಜ. 12: ಈ ವಾರ ಉತ್ತರ ಭಾರತದಲ್ಲಿನ ಉಷ್ಣತೆ ಕೊಂಚ ಏರಿಕೆ ಕಂಡಿದ್ದರೂ, 2023 ಜನವರಿ ಈ ವಲಯದ ಅತಿ ಶೀತಲ ತಿಂಗಳಾಗಿ ದಾಖಲೆಗೆ ಸೇರ್ಪಡೆಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ ಎಂದು ಹವಾಮಾನ ಪರಿಣತರು ಎಚ್ಚರಿಸಿದ್ದಾರೆ. ಈ ವಲಯದ ಬಯಲು ಸೀಮೆಯಲ್ಲಿ ಉಷ್ಣತೆ ಮುಂದಿನ ವಾರ ಮೈನಸ್ 4 ಡಿಗ್ರಿಗೆ ಕುಸಿಯುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.

ಜನವರಿ 14 ಮತ್ತು 19ರ ನಡುವಿನ ದಿನಗಳು ಅತ್ಯಂತ ಶೀತಲ ದಿನಗಳಾಗಿರುತ್ತವೆ, ಅದರಲ್ಲೂ ಮುಖ್ಯವಾಗಿ ಜನವರಿ 16ರಿಂದ 18ರವರೆಗೆ ಶೀತ ಮಾರುತದ ತೀವ್ರತೆಯು ಅತ್ಯಂತ ಭೀಕರವಾಗಿರುತ್ತದೆ ಎಂದು ಆನ್ಲೈನ್ ಹವಾಮಾನ ಮುನ್ಸೂಚನಾ ಕೇಂದ್ರ ‘ಲೈವ್ ವೆದರ್ ಆಫ್ ಇಂಡಿಯ’ದ ಸ್ಥಾಪಕ ನವದೀಪ್ ದಹಿಯ ಟ್ವೀಟ್ ಮಾಡಿದ್ದಾರೆ.

‘‘ಜನವರಿಯ ಈವರೆಗಿನ 11 ದಿನಗಳಲ್ಲಿ ದಾಖಲೆಯ ಚಳಿಯನ್ನು ನಾವು ಅನುಭವಿಸಿದ್ದೇವೆ. ಮುಂದಿನ ಕೆಲವು ದಿನಗಳು ಇನ್ನೂ ಶೀತಲವಾಗಿರುವಂತೆ ಕಾಣುತ್ತಿವೆ. 2023 ಜನವರಿ ಇತಿಹಾಸದಲ್ಲೇ, ಬಹುಷಃ 21ನೇ ಶತಮಾನದ ಅವಧಿಗೂ ಅತ್ಯಂತ ಶೀತಲ ತಿಂಗಳು ಆಗಬಹುದಾದ ಲಕ್ಷಣಗಳಿವೆ’’ ಎಂದು ದಹಿಯ ಹೇಳಿದ್ದಾರೆ. ಪಶ್ಚಿಮದಲ್ಲಿ ಉಂಟಾಗಿರುವ ಹವಾಮಾನ ವಿನ್ಯಾಸದಿಂದಾಗಿ ವಾಯುವ್ಯ ಭಾರತದ ಬಯಲು ಪ್ರದೇಶದಲ್ಲಿ ಕನಿಷ್ಠ ಉಷ್ಣತೆಯು ಶುಕ್ರವಾರದವರೆಗೆ 2ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚುವ ನಿರೀಕ್ಷೆಯಿದೆ. ಆದರೆ, ಅದರ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಹೊಸದಾಗಿ ಭೀಕರ ಶೀತ ಮಾರುತ ಬೀಸಲಿದೆ ಎಂದು ಹವಾಮಾನ ಮುನ್ನೆಚ್ಚರಿಕೆ ಹೇಳಿದೆ.

23 ವರ್ಷಗಳಲ್ಲೇ ಕನಿಷ್ಠ ಉಷ್ಣತೆಯನ್ನು ದಾಖಲಿಸಿದ ಬಳಿಕ, ದಿಲ್ಲಿಯ ಉಷ್ಣತೆಯು ಗುರುವಾರ 9.3 ಡಿಗ್ರಿ ಸೆಲ್ಸಿಯಸ್ನಲ್ಲಿ ನೆಲೆಗೊಂಡಿದೆ. ಕಳೆದ ವಾರ ಇಲ್ಲಿನ ಉಷ್ಣತೆಯು 1.9 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿತ್ತು.

share
Next Story
X