Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ...

ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಚೀನಿ ಸೈನಿಕರ ಸಂಖ್ಯೆಯಲ್ಲಿ ತುಸು ಹೆಚ್ಚಳ: ಜ.ಪಾಂಡೆ‌

12 Jan 2023 8:39 PM IST
share
ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಚೀನಿ ಸೈನಿಕರ ಸಂಖ್ಯೆಯಲ್ಲಿ ತುಸು ಹೆಚ್ಚಳ: ಜ.ಪಾಂಡೆ‌

ಹೊಸದಿಲ್ಲಿ, ಜ.12: ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಚೀನಿ ಸೈನಿಕರ ಸಂಖ್ಯೆಯಲ್ಲಿ ತುಸು ಹೆಚ್ಚ ಕಂಡುಬಂದಿದೆಯೆಂದು ಸೇನಾ ವರಿಷ್ಠ ಮನೋಜ್ ಪಾಂಡೆ ಗುರುವಾರ ತಿಳಿಸಿದ್ದಾರೆ.

‘‘ನಮ್ಮ ಪೂರ್ವ ಕಮಾಂಡ್ನಲ್ಲಿ ಚೀನಿ ಸೈನಿಕರ ಸಂಖ್ಯೆಯಲ್ಲಿ ತುಸು ಹೆಚ್ಚಳವುಂಟಾಗಿದೆ. ಅವರ ಚಲನವಲನಗಳ ಬಗ್ಗೆ ನಾವುನಿಕಟವಾದ ಕಣ್ಗಾವಲಿರಿಸಿದ್ದೇವೆ ’’ ಎಂದು ಜನರಲ್ ಮನೋಜ್ ಪಾಂಡೆ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಮಂಗಳವಾರ ನಡೆದ ವಾರ್ಷಿಕ ಸೇನಾದಿನದ ಸಂದರ್ಭದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಛಿಯಲ್ಲಿ ಅವರು ಮಾತನಾಡುತ್ತಿದ್ದರು.

ಚೀನಾಕ್ಕೆ ತಾಗಿಕೊಂಡಿರುವ ಭಾರತದ ಉತ್ತರ ಗಡಿಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆಯಾದರೂ, ಊಹಿಸಲು ಸಾಧ್ಯವಾಗದು ಎಂದವರು ಹೇಳಿದ್ದಾರೆ. ಉಭಯದೇಶಗಳ ಸಶಸ್ತ್ರ ಪಡೆಗಳ ನಡುವೆ ತಲೆದೋರಿರುವ ಏಳು ಜಟಿಲವಾದ ವಿವಾದಗಳನ್ನು ಚರ್ಚೆಗೆ ಮಂಡಿಸಲಾಗಿದೆ ಎಂದವರು ಹೇಳಿದ್ದಾರೆ.

‘‘ಉತ್ತರದ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಊಹಿಸಲು ಸಾಧ್ಯವಿಲ್ಲವಾದರೂ, ನಿಯಂತ್ರಣದಲ್ಲಿದೆ. ಉಭಯದೇಶಗಳ ಸೇನಾಪಡೆಗಳ ನಡುವೆ ನಡೆದ ಮಾತುಕತೆ ಸಂದರ್ಭದಲ್ಲಿ ಚರ್ಚೆಗೆ ಬಂದ ಏಳು ವಿವಾದಾತ್ಮಕ ವಿಷಯಗಳಲ್ಲಿ ಐದನ್ನು ಬಗೆಹರಿಸಲಾಗಿದೆ’’ ಎಂದು ಸೇನಾ ವರಿಷ್ಠರು ತಿಳಿಸಿದ್ದಾರೆ.

ಪಾಕಿಸ್ತಾನದ ಗಡಿಯಲ್ಲಿ ಕದನವಿರಾಮ ಜಾರಿಯಲ್ಲಿದೆಯಾದರೂ, ಭಾರತವು ಕಟ್ಟೆಚ್ಚರದಲ್ಲಿಯೇ ಉಳಿಯಬೇಕಾಗಿದೆ ಎಂದವರು ಹೇಳಿದರು. ಆದರೂ, ಭಯೋತ್ಪಾದಕ ಮೂಲಸೌಕರ್ಯಗಳು ಹಾಗೂ ಭಯೋತ್ಪಾದಕ ಗುಂಪುಗಳಿಗೆ ಪಾಕಿಸ್ತಾನದ ಬೆಂಬಲವು ಈಗಲೂ ಉಳಿದುಕೊಂಡಿದೆ ಎಂದವರು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಸೇನೆಯು ಕೈಗೊಂಡ ಕಲ್ಯಾಣಕಾರ್ಯಕ್ರಮಗಳನ್ನು ವಿವರಿಸಿದ ಅವರು, ಗಡಿ ರಸ್ತೆಗಳ ಸಂಘಟನೆ (ಬಿಆರ್ಓ) ಉತ್ತರ ಗಡಿಯುದ್ದಕ್ಕೂ2100 ಕಿ.ಮೀ. ವಿಸ್ತೀರ್ಣದ ರಸ್ತೆಗಳು ಹಾಗೂ 7450 ಮೀಟರ್ ವಿಸ್ತೀರ್ಣದ ಸೇತುವೆಗಳನ್ನು ಕಳೆದ ಐದು ವರ್ಷಗಳಲ್ಲಿ ನಿರ್ಮಿಸಿದೆ ಎಂದರು.
ಅರುಣಾಚಲ ಪ್ರದೇಶದ ಗಡಿಮುಂಚೂಣಿ ಪ್ರದೇಶದ ಹೆದ್ದಾರಿಯಲ್ಲಿಯೂ ಕೆಲವು ಕಾಮಗಾರಿ ಕೆಲಸಗಳು ಪ್ರಗತಿಯಲ್ಲಿದೆ ಎಂದು ಜ. ಮನೋಜ್ ಪಾಂಡೆ ತಿಳಿಸಿದರು.

ಶೀಘ್ರದಲ್ಲೇ ಫಿರಂಗಿ ದಳಕ್ಕೆ ಮಹಿಳಾ ಸೇನಾಧಿಕಾರಿಗಳ ಸೇರ್ಪಡೆ ಭಾರತೀಯ ಸೇನಾಪಡೆಯ ಫಿರಂಗಿ ದಳಕ್ಕೂ ಶೀಘ್ರದಲ್ಲಿಯೇ ಮಹಿಳಾ ಸೇನಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಹೇಳಿದ ಅವರು ಈ ಬಗ್ಗೆ ಒಪ್ಪಿಗೆಗಾಗಿ ಕೇಂದ್ರ ಸರಕಾಕ್ಕೆ ಪ್ರಸ್ತಾವನೆಯೊಂದನ್ನು ಕಳುಹಿಸಲಾಗುವುದೆಂದು ಅವರು ತಿಳಿಸಿದರು.

ವಾಸ್ತವಿಕ ಗಡಿನಿಯಂತ್ರಣರೇಖೆಯ ಯಥಾಸ್ಥಿತಿಯನ್ನು ಬದಲಾಯಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಭಾರತ ಸೇನೆಯು ತಡೆಗಟ್ಟಿದೆಯೆಂದು ಜ. ಪಾಂಡೆ ಅವರು ಚೀನಾವನ್ನು ಉಲ್ಲೇಖಿಸದೆ ಹೇಳಿದರು.

share
Next Story
X