Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಮ್ಮು ಸಿರಪ್ ಸೇವಿಸಿ ಉಝ್ಬೆಕಿಸ್ತಾನ...

ಕೆಮ್ಮು ಸಿರಪ್ ಸೇವಿಸಿ ಉಝ್ಬೆಕಿಸ್ತಾನ ಮಕ್ಕಳ ಸಾವು ಪ್ರಕರಣ: ಮರಿಯೋನ್ ಬಯೋಟೆಕ್ ನ ಉತ್ಪಾದನಾ ಪರವಾನಿಗೆ ಸ್ಥಗಿತ

12 Jan 2023 10:17 PM IST
share
ಕೆಮ್ಮು ಸಿರಪ್ ಸೇವಿಸಿ ಉಝ್ಬೆಕಿಸ್ತಾನ ಮಕ್ಕಳ ಸಾವು ಪ್ರಕರಣ: ಮರಿಯೋನ್ ಬಯೋಟೆಕ್ ನ ಉತ್ಪಾದನಾ ಪರವಾನಿಗೆ ಸ್ಥಗಿತ

ಹೊಸದಿಲ್ಲಿ, ಜ. 12: ನೋಯಿಡದಲ್ಲಿರುವ ಔಷಧ ತಯಾರಿಕಾ ಕಂಪೆನಿ ಮರಿಯೋನ್ ಬಯೋಟೆಕ್ ಗೆ ನೀಡಲಾಗಿರುವ ಉತ್ಪಾದನಾ ಪರವಾನಿಗೆಯನ್ನು ಅಮಾನತಿನಲ್ಲಿಡಲಾಗಿದೆ ಹಾಗೂ ಅದರ ವಿವಾದಾಸ್ಪದ ಕೆಮ್ಮು ಸಿರಪ್‌ನ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಎಂದು ಉತ್ತರಪ್ರದೇಶದ ಔಷಧ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ. ಈ ಕಂಪೆನಿಯ ಕೆಮ್ಮು ಸಿರಪ್ ಸೇವಿಸಿ ಉಝ್ಬೆಕಿಸ್ತಾನದಲ್ಲಿ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಆರೋಪಿಸಲಾಗಿದೆ.

‘ಆಂಬ್ರೊನೊಲ್’ ಮತ್ತು ‘ಡೋಕ್-1 ಮ್ಯಾಕ್ಸ್’ ಸಿರಪ್ಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್ಒ)ಯು ವೈದ್ಯಕೀಯ ಎಚ್ಚರಿಕೆ ಹೊರಡಿಸಿದ ಒಂದು ದಿನದ ಬಳಿಕ, ಕೇಂದ್ರೀಯ ಸಂಸ್ಥೆಗಳು ಮತ್ತು ಉತ್ತರಪ್ರದೇಶದ ಔಷಧ ವಿಭಾಗದ ಅಧಿಕಾರಿಗಳ ತಂಡವೊಂದು ಗುರುವಾರ ನೋಯಿಡದಲ್ಲಿರುವ ಮರಿಯೋನ್ ಬಯೋಟೆಕ್ ಕಚೇರಿಯಲ್ಲಿ ಹೊಸದಾಗಿ ತಪಾಸಣೆ ನಡೆಸಿತು. ಈ ಎರಡೂ ಸಿರಪ್ಗಳನ್ನು ಮರಿಯೋನ್ ಬಯೋಟೆಕ್ ತಯಾರಿಸಿದೆ.

ಉಝ್ಬೆಕಿಸ್ತಾನದಲ್ಲಿ ಸಂಭವಿಸಿದ 18 ಮಕ್ಕಳ ಸಾವಿಗೆ ಮರಿಯೋನ್ ಬಯೋಟೆಕ್ ಕಂಪೆನಿಯ ಕೆಮ್ಮು ಸಿರಪ್ ಕಾರಣ ಎಂಬ ಆರೋಪ ಕೇಳಿಬಂದ ಬಳಿಕ, ಭಾರತದ ಔಷಧ ಮತ್ತು ವೈದ್ಯಕೀಯ ಸಾಧನಗಳ ನಿಯಂತ್ರಣ ಸಂಸ್ಥೆಯಾಗಿರುವ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ)ಯು ಡಿಸೆಂಬರ್ನಲ್ಲಿ ತನಿಖೆ ಆರಂಭಿಸಿತ್ತು.

ಸಾವಿಗೀಡಾಗಿರುವ ಮಕ್ಕಳು ಈ ಕೆಮ್ಮು ಸಿರಪ್ಗಳನ್ನು ಸೇವಿಸಿದ್ದರು ಎಂದು ಉಝ್ಬೆಕಿಸ್ತಾನದ ಆರೋಗ್ಯ ಸಚಿವಾಲಯ ಹೇಳಿತ್ತು. ಕೇಂದ್ರೀಯ ಮತ್ತು ರಾಜ್ಯ ತಂಡಗಳು, ಇದಕ್ಕೂ ಮೊದಲು, ಡಿಸೆಂಬರ್ 29ರಂದು ಕಂಪೆನಿಯ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಡೋಕ್-1 ಮ್ಯಾಕ್ಸ್ ಸಿರಪ್ನ ಆರು ಮಾದರಿಗಳನ್ನು ಪರೀಕ್ಷೆಗಾಗಿ ಒಯ್ದಿದ್ದವು. ಗುರುವಾರ, ಅವುಗಳು ಪುನಃ ಆಂಬ್ರನೋಲ್ ಸಿರಪ್ನ ನಾಲ್ಕು ಮಾದರಿಗಳನ್ನು ಒಯ್ದುವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
Next Story
X