Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. KSRTCಯ ಮೊದಲ ಎಲೆಕ್ಟ್ರಿಕ್ ಬಸ್...

KSRTCಯ ಮೊದಲ ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ ಯಶಸ್ವಿ; ಜ.16ರಿಂದ ಬೆಂಗಳೂರು-ಮೈಸೂರು ಸಂಚಾರ

ವಿವಿಧ ನಗರಗಳಿಗೆ ಶೀಘ್ರವೇ ಎಲೆಕ್ಟ್ರಿಕ್ ಬಸ್ ಸಂಚಾರ

13 Jan 2023 9:16 PM IST
share
KSRTCಯ ಮೊದಲ ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ ಯಶಸ್ವಿ; ಜ.16ರಿಂದ ಬೆಂಗಳೂರು-ಮೈಸೂರು ಸಂಚಾರ
ವಿವಿಧ ನಗರಗಳಿಗೆ ಶೀಘ್ರವೇ ಎಲೆಕ್ಟ್ರಿಕ್ ಬಸ್ ಸಂಚಾರ

ಬೆಂಗಳೂರು, ಜ. 13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಸಾರ್ಟಿಸಿ)ನಿಗಮದ ಮೊದಲ ಅಂತರ್ ಜಿಲ್ಲಾ ಎಲೆಕ್ಟ್ರಿಕ್ ಬಸ್ ಬೆಂಗಳೂರಿನಿಂದ ಮೈಸೂರಿಗೆ ಜ.16ರಿಂದ ಸಂಚಾರ ಆರಂಭಿಸಲಿದೆ ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಕೆಎಸ್ಸಾರ್ಟಿಸಿ ಇ-ಬಸ್ (KSRTC Electric Bus)  ಪ್ರಾಯೋಗಿಕ ಸಂಚಾರ ಆರಂಭದ ನಂತರ ಮಾತನಾಡಿದ ಅವರು, ಸೋಮವಾರ ಬೆಳಗಿನಿಂದ ವಾಣಿಜ್ಯ ಸಂಚಾರ ಆರಂಭವಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹತ್ವ ಪೂರ್ಣ ಎಲೆಕ್ಟ್ರಿಕ್ ಬಸ್ ಪರಿಚಯಿಸುವ ಯೋಜನೆಯಡಿ ಒಟ್ಟು 50 ಬಸ್‍ಗಳನ್ನು ಸಂಚಾರಕ್ಕೆ ಬಿಡಲು ಸಿದ್ಧಗೊಂಡಿದೆ. ಅದರ ಭಾಗವಾಗಿ ಬೆಂಗಳೂರು-ಮೈಸೂರು ಎರಡು ನಗರಗಳ ನಡುವೆ ಎಕ್ಸ್ ಪ್ರೆಸ್  ವೇನಲ್ಲಿ ಎಲೆಕ್ಟ್ರಿಕ್ ಬಸ್ ಸಂಚರಿಸಲಿದೆ ಎಂದು ಹೇಳಿದರು.

ಎಲೆಕ್ಟ್ರಿಕ್ ಬಸ್ ವಿಶೇಷತೆ: ಎರಡೂವರೆ ಗಂಟೆ ಚಾರ್ಜ್ ಮಾಡಿದರೆ 300 ಕಿ.ಮೀ ಕ್ರಮಿಸುವಷ್ಟು ಸಾಮಥ್ರ್ಯವನ್ನು ಎಲೆಕ್ಟ್ರಿಕ್ ಬಸ್ ಹೊಂದಿದೆ. ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿಂದ ಕೂಡಿದ್ದು, ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಸಲಾಗಿದೆ. ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರೀಚಾರ್ಜ್ ಆಗುವ ರಿ ಜನರೇಟಿವ್ ಸಿಸ್ಟಮ್ ಇದಾಗಿದೆ. ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ. ಮನರಂಜನೆಗಾಗಿ ಬಸ್‍ನಲ್ಲಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ. ಬಸ್‍ನಲ್ಲಿ 43+2 ಆಸನ ಸಾಮಥ್ರ್ಯ ಹೊಂದಿದ್ದು, ಬಸ್ ಸಂಪೂರ್ಣ ಸೆನ್ಸಾರ್ ಹಿಡಿತದಲ್ಲಿರುತ್ತದೆ. ಪ್ರಮುಖವಾಗಿ ರಾಜ್ಯದಲ್ಲಿ ಪರಿಸರ ಸ್ನೇಹಿ ಬಸ್‍ಗಳ ಕಾರ್ಯಾಚರಣೆ ಚಿಂತನೆಗೆ, ಯೋಜನೆ ರೂಪಿಸಲು ಇದು ನಾಂದಿ ಹಾಡಲಿದೆ ಎಂದು ಹೇಳಿದರು.

ಇ-ಬಸ್‍ನ ಪ್ರಯಾಣದ ಬೆಲೆ, ಸಾಮಾನ್ಯ ಸಾರಿಗೆಗಿಂತ ಹೆಚ್ಚು, ಹಾಗೂ ಮಲ್ಟಿ ಆ್ಯಕ್ಸಲ್ ಬಸ್ ದರಕ್ಕಿಂತ ಕಡಿಮೆ ದರ ನಿಗದಿ ಮಾಡಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತೀರಿ ಎಂದಾದರೆ ಒಬ್ಬರಿಗೆ 300 ರೂ. ಆಸುಪಾಸಲ್ಲಿ ದರ ನಿಗದಿ ಆಗುವ ಸಾಧ್ಯತೆ ಇದೆ ಎಂದು ಅನ್ಬುಕುಮಾರ್ ಮಾಹಿತಿ ನೀಡಿದರು.

ವಿವಿಧ ನಗರಗಳಿಗೆ ಶೀಘ್ರವೇ ಎಲೆಕ್ಟ್ರಿಕ್ ಬಸ್ ಸಂಚಾರ: ಸಾರ್ವಜನಿಕರು ‘ಇವಿ ಪವರ್ ಪ್ಲಸ್'ನಲ್ಲಿ ಅತ್ಯುತ್ತಮ ಅನುಭವ ಪಡೆಯಬಹುದು ಎನ್ನುವ ವಿಶ್ವಾಸವಿದೆ. ಜೊತೆಗೆ ಶೀಘ್ರದಲ್ಲೇ ಇ-ಬಸ್‍ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ನಗರಗಳಿಗೆ ಸಂಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲೆಕ್ಟ್ರಿಕ್ ಬಸ್‍ಗಳಿಗೆ ಚಾರ್ಜಿಂಗ್ ಕೇಂದ್ರವನ್ನು ಈಗಾಗಲೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಿರ್ಮಿಸಲಾಗಿದ್ದು, ಉಳಿದ ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ಇವಿ ಚಾಚಿರ್ಂಗ್ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಅನ್ಬುಕುಮಾರ್ ತಿಳಿಸಿದರು.

share
Next Story
X