Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ಒಂದೂವರೆ ವರ್ಷಗಳಲ್ಲಿ ಜಮ್ಮು...

ಕಳೆದ ಒಂದೂವರೆ ವರ್ಷಗಳಲ್ಲಿ ಜಮ್ಮು ಪ್ರದೇಶದಲ್ಲಿನ ಎಲ್ಲ ಭಯೋತ್ಪಾದಕ ದಾಳಿಗಳ ತನಿಖೆ ಎನ್ಐಎ ನಡೆಸಲಿದೆ:‌ ಶಾ

13 Jan 2023 11:44 PM IST
share
ಕಳೆದ ಒಂದೂವರೆ ವರ್ಷಗಳಲ್ಲಿ ಜಮ್ಮು ಪ್ರದೇಶದಲ್ಲಿನ ಎಲ್ಲ ಭಯೋತ್ಪಾದಕ ದಾಳಿಗಳ ತನಿಖೆ ಎನ್ಐಎ ನಡೆಸಲಿದೆ:‌ ಶಾ

ಜಮ್ಮು,ಜ.13: ಕಳೆದ ಒಂದೂವರೆ ವರ್ಷಗಳಲ್ಲಿ ಜಮ್ಮು ಪ್ರದೇಶದಲ್ಲಿ ನಡೆದಿರುವ ಎಲ್ಲ ಭಯೋತ್ಪಾದಕ ದಾಳಿಗಳ ತನಿಖೆಯನ್ನು ಎನ್ಐಎ ನಡೆಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶುಕ್ರವಾರ ಇಲ್ಲಿ ತಿಳಿಸಿದರು. ತನಿಖೆಗಳಲ್ಲಿ ಜಮ್ಮ-ಕಾಶ್ಮೀರ ಪೊಲೀಸರು ಎನ್ಐಎಗೆ ನೆರವಾಗಲಿದ್ದಾರೆ ಎಂದೂ ಅವರು ಹೇಳಿದರು.

ಶಾ ಅವರ ಹೇಳಿಕೆಯಂತೆ ಜ.1 ಮತ್ತು 2ರಂದು ರಾಜೌರಿಯ ಧಾಂಗ್ರಿ ಗ್ರಾಮದಲ್ಲಿ ಏಳು ನಾಗರಿಕರನ್ನು ಬಲಿ ತೆಗೆದುಕೊಂಡಿದ್ದ ಭಯೋತ್ಪಾದಕ ದಾಳಿಗಳ ತನಿಖೆಯನ್ನೂ ಎನ್ಐಎ ನಡೆಸಲಿದೆ.

ಭದ್ರತಾ ಸ್ಥಿತಿಯ ಪುನರ್ಪರಿಶೀಲನೆಗಾಗಿ ಶುಕ್ರವಾರ ಇಲ್ಲಿಗೆ ಒಂದು ದಿನದ ಭೇಟಿ ನೀಡಿದ್ದ ಶಾ,ಮೂರು ತಿಂಗಳುಗಳಲ್ಲಿ ಜಮ್ಮು ವಿಭಾಗದ ಎಲ್ಲ ಪ್ರದೇಶಗಳಾದ್ಯಂತ ಭದ್ರತಾ ಜಾಲವನ್ನು ಬಿಗುಗೊಳಿಸಲು ಕಾಲಮಿತಿಯ ಕ್ರಿಯಾಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ರಾಜೌರಿ ಹಂತಕರ ಶೋಧ ಕಾರ್ಯಾಚರಣೆಯಲ್ಲಿ ಪೊಲೀಸರು 50ಕ್ಕೂ ಅಧಿಕ ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಾ ಅವರು ಭದ್ರತಾ ಸಂಸ್ಥೆಗಳು ಮತ್ತು ಜಮ್ಮು-ಕಾಶ್ಮೀರದ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಪುನರ್ಪರಿಶೀಲನಾ ಸಭೆಯಲ್ಲಿ ಲೆ.ಗ.ಮನೋಜ ಸಿನ್ಹಾ,ಮುಖ್ಯ ಕಾರ್ಯದರ್ಶಿ ಎ.ಕೆ.ಮೆಹ್ತಾ, ಉತ್ತರ ಸೇನಾ ವಿಭಾಗದ ಕಮಾಂಡರ್ ಲೆ.ಜ.ಉಪೇಂದ್ರ ದ್ವಿವೇದಿ ಮತ್ತು ಡಿಜಿಪಿ ದಿಲ್ಬಾಗ್ ಸಿಂಗ್ ಅವರೂ ಉಪಸ್ಥಿತರಿದ್ದರು. ಪ್ರದೇಶದಲ್ಲಿಯ ಪ್ರಚಲಿತ ಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಲಾಗಿದ್ದು,ಭಯೋತ್ಪಾದನೆ ಬೆಂಬಲ ವ್ಯವಸ್ಥೆಯ ಕುರಿತು ಎಳೆಎಳೆಯಾಗಿ ಚರ್ಚಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಲೋಪರಹಿತ ಭದ್ರತೆಯ ಬಗ್ಗೆ ಭದ್ರತಾ ಸಂಸ್ಥೆಗಳು ತನಗೆ ಭರವಸೆ ನೀಡಿವೆ ಎಂದು ಶಾ ತಿಳಿಸಿದರು.

ಧಾಂಗ್ರಿ ಗ್ರಾಮದಲ್ಲಿ ಭಯೋತ್ಪಾದಕರ ದಾಳಿಗಳಲ್ಲಿ ಮೃತರ ಕುಟುಂಬಗಳನ್ನು ಭೇಟಿಯಾಗುವುದು ಶಾ ಕಾರ್ಯಕ್ರಮದಲ್ಲಿ ಸೇರಿತ್ತಾದರೂ ಪ್ರತಿಕೂಲ ಹವಾಮಾನದಿಂದಾಗಿ ಅವರಿಗೆ ರಾಜೌರಿಗೆ ಪ್ರಯಾಣಿಸಲು ಸಾಧ್ಯವಾಗಲಿಲ್ಲ. ಆದರೂ ಜಮ್ಮುವಿನಿಂದ ದೂರವಾಣಿ ಮೂಲಕ ಸಂತ್ರಸ್ತ ಕುಟುಂಬಗಳೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.

‘ಮುಂದಿನ ಮೂರು ದಿನಗಳ ಪ್ರತಿಕೂಲ ಹವಾಮಾನವಿರಲಿದೆ ಎಂದು ವರದಿಯು ತಿಳಿಸಿದೆ. ನಾನು ಮತ್ತೆ ಬರುತ್ತೇನೆ ಮತ್ತು ಖಂಡಿತವಾಗಿಯೂ ರಾಜೌರಿ ದಾಳಿಯ ಸಂತ್ರಸ್ತರನ್ನು ಭೇಟಿಯಾಗುತ್ತೇನೆ. ಇಂದು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಎಲ್ಲ ಬೆಂಬಲವನ್ನು ಒದಗಿಸುವ ಭರವಸೆಯನ್ನು ನೀಡಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದರೂ ಭಯೋತ್ಪಾದನೆಯ ವಿರುದ್ಧ ಹೋರಾಡಲು ಅವರು ಸಿದ್ಧರಾಗಿದ್ದಾರೆ ’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾ ತಿಳಿಸಿದರು.

share
Next Story
X