Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮನೆಗೆ ನುಗ್ಗಿದ್ದ...

ಬೆಂಗಳೂರು: ಮನೆಗೆ ನುಗ್ಗಿದ್ದ ದರೋಡೆಕೋರರನ್ನು ಕೋಣೆಯೊಳಗೆ ಕೂಡಿ ಹಾಕಿದ ಯುವಕ, ತಪ್ಪಿದ ಅನಾಹುತ

13 Jan 2023 11:47 PM IST
share
ಬೆಂಗಳೂರು: ಮನೆಗೆ ನುಗ್ಗಿದ್ದ ದರೋಡೆಕೋರರನ್ನು ಕೋಣೆಯೊಳಗೆ ಕೂಡಿ ಹಾಕಿದ ಯುವಕ, ತಪ್ಪಿದ ಅನಾಹುತ

ಬೆಂಗಳೂರು, ಜ.13: ಒಂಟಿ ಮನೆಗೆ ದರೋಡೆ ಮಾಡಲು ನುಗ್ಗಿದ್ದ ಗುಂಪನ್ನು ಮನೆಯ ಯುವಕನ ತೋರಿದ ಜಾಣ್ಮೆಯಿಂದ ಅನಾಹುತವೊಂದು ತಪ್ಪಿದ್ದು, ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ತಲಘಟ್ಟಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿಯ ಶಿಕಾರಿ ಪಾಳ್ಯದ ಶೇಕ್ ಕಲೀಂ(22)ಬಿಹಾರದ ಆಜಂನಗರದ ನಿಯಾಝ್(21) ಉತ್ತರಪ್ರದೇಶದ ಗೋಸ್‍ತಾಣದ ಇಮ್ರಾನ್ ಶೇಖ್ (24), ಲಕ್ನೋದ ಫೈಝಲ್(23), ರಾಜಸ್ಥಾನ ಮೂಲದ ಶಿಕಾರಿಪಾಳ್ಯದ ರಾಮ್ ಬಿಲಾಸ್(27), ಮದ್ಯಪ್ರದೇಶದ ರಾಣಾಪುರದ ಸುನಿಲ್ ಡಾಂಗಿ(20) ಹಾಗೂ ಒಡಿಶಾದ ಬಲೇಶ್ವರ್ ಜಿಲ್ಲೆಯ ರಜತ್ ಮಲ್ಲಿಕ್(21) ಬಂಧಿತ ದುಷ್ಕರ್ಮಿಗಳು ಎಂದು ಪೊಲೀಸರು ಹೇಳಿದ್ದಾರೆ.

ಅವಲಹಳ್ಳಿಯ ಕನಕಪುರ ರಸ್ತೆಯ ನಾರಾಯಣನಗರದ ಶಾಂತಿನಿವಾಸ ಲೇಔಟ್‍ನ ರಾಹುಲ್ ರಾಮಗೋಪಾಲ್ ಅವರ ಒಂಟಿ ಮನೆಯನ್ನೆ ಗುರಿಯಾಗಿಸಿಕೊಂಡು ದೋಚಲು ಹಲವು ದಿನಗಳ ಕಾಲ ಸಂಚು ರೂಪಿಸಿದ್ದ ಗುಂಪು ಮನೆಯಲ್ಲಿ ಮನೆ ಮಂದಿ ಇರುವುದು ಗೊತ್ತಿದ್ದು ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಮುಂದಾಗಿತ್ತು. 

ದರೋಡೆಕೋರರು ಮನೆಗೆ ನುಗ್ಗಿರುವ ಅರಿವಿಲ್ಲದೆ ಎಂದಿನಂತೆ 5 ಗಂಟೆಗೆ ಮನೆ ಮಂದಿ ನಿದ್ದೆಯಿಂದ ಎದ್ದಿದ್ದರು. ಈ ವೇಳೆ ತಂದೆಗೆ ಚಹಾ ಮಾಡಿಕೊಡಲು ಎದ್ದ ಮಗನ ಕಣ್ಣಿಗೆ ಚೆಲ್ಲಾಪಿಲ್ಲಿಯಾಗಿದ್ದ ವಸ್ತುಗಳು ಕಂಡಿದೆ. ಏನಿದು ಮನೆಗೆ ಯಾರೋ ಬಂದಿದ್ದಾರೆ ಎಂದು ಮನೆಯ ಪರಿಸ್ಥಿತಿ ನೋಡಿ ಒಮ್ಮೆ ಗಾಬರಿ ಆಗಿದ್ದಾನೆ.

ಬಳಿಕ ಮನೆಯಲ್ಲಿರುವ ಮೂರು ಜನ ಯಾರು ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದೆಂದು ನೋಡಲು ಅನುಮಾನದಿಂದ ಮೊಬೈಲ್‍ನಲ್ಲಿ ಸಿಸಿಟಿವಿ ಪರಿಶೀಲನೆ ಮಾಡಿದ್ದಾನೆ. ಸಿಸಿಟಿವಿ ನೋಡುತ್ತಿಂತೆ ಮನೆಯ ಮೂಲೆ ಮೂಲೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ದುಷ್ಕರ್ಮಿಗಳ ಗುಂಪು ನಿಂತಿತ್ತು. ಕೂಡಲೇ ಎಚ್ಚೆತ್ತ ರಾಹುಲ್  ದರೋಡೆಕೋರರು ಒಂದು ಕೋಣೆಗೆ ಹೋಗುವವರೆಗೂ ಕಾದು ಕುಳಿತು ಅವರು ಒಂದು ಕೋಣೆಗೆ ಹೋಗುತ್ತಿದ್ದಂತೆ ಕೊಠಡಿ ಬಾಗಿಲು ಬಂದ್ ಮಾಡಿ ಕೂಡಿ ಹಾಕಿದ್ದಾನೆ.

ಬಳಿಕ ಭೀತಿಯಲ್ಲಿ ಮತ್ತೊಂದು ಕೊಠಡಿಗೆ ತೆರಳಿ 112ಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾನೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ತಲಘಟ್ಟಪುರ ಪೊಲೀಸರು ಮನೆಯನ್ನು ಸುತ್ತುವರಿದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರು ವಿಚಾರಣೆಯಲ್ಲಿ ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಮತ್ತಿಬ್ಬರನ್ನು ಬಂಧಿಸಿ ಒಟ್ಟು 7 ಮಂದಿಯ ವಿಚಾರಣೆ ಮುಂದುವರೆಸಲಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ. 

share
Next Story
X