Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಕ್ಷಿಣ ಅಮೆರಿಕದಲ್ಲಿ ಸುಂಟರಗಾಳಿಯ...

ದಕ್ಷಿಣ ಅಮೆರಿಕದಲ್ಲಿ ಸುಂಟರಗಾಳಿಯ ಅಬ್ಬರ; 7 ಮಂದಿ ಮೃತ್ಯು

13 Jan 2023 11:59 PM IST
share
ದಕ್ಷಿಣ ಅಮೆರಿಕದಲ್ಲಿ ಸುಂಟರಗಾಳಿಯ ಅಬ್ಬರ; 7 ಮಂದಿ ಮೃತ್ಯು

ವಾಷಿಂಗ್ಟನ್, ಜ.13: ದಕ್ಷಿಣ ಅಮೆರಿಕಾದಲ್ಲಿ ಚಂಡಮಾರುತದ ರೂಪು ಪಡೆಯುವ ಸಾಧ್ಯತೆಯಿರುವ ತೀವ್ರ ಸುಂಟರಗಾಳಿಯ ಅಬ್ಬರದಿಂದ ವ್ಯಾಪಕ ನಾಶ ಮತ್ತು ನಷ್ಟವಾಗಿದ್ದು ಜಾರ್ಜಿಯಾ ಮತ್ತು ಅಲಬಾಮಾ ನಗರಗಳಲ್ಲಿ ಕನಿಷ್ಟ 7 ಮಂದಿ ಮೃತಪಟ್ಟಿದ್ದಾರೆ. ಐತಿಹಾಸಿಕ ನಗರ ಸೆಲ್ಮಾದಲ್ಲಿ ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು ರಸ್ತೆಯಲ್ಲಿ ನಿಲ್ಲಿಸಿದ ಕಾರುಗಳು ಉರುಳಿಬಿದ್ದಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಗುರುವಾರ ರಾತ್ರಿಯಿಂದ ಸುಂಟರಗಾಳಿಯ ಪ್ರಕೋಪ ತಗ್ಗಿದ್ದರೂ ಜಾರ್ಜಿಯಾ ಮತ್ತು ಅಲಬಾಮಾ ನಗರಗಳಲ್ಲಿ ವಿದ್ಯುತ್ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು ಸಾವಿರಾರು ಮಂದಿ ತೊಂದರೆಗೆ ಒಳಗಾಗಿದ್ದಾರೆ.

ಸುಂಟರಗಾಳಿಯಿಂದ ಆಗಿರುವ ನಾಶನಷ್ಟದ ಪ್ರಮಾಣದ ಬಗ್ಗೆ ಇನ್ನಷ್ಟೇ ಸ್ಪಷ್ಟಚಿತ್ರಣ ದೊರಕಬೇಕಿದೆ. ನಾಗರಿಕ ಹಕ್ಕುಗಳ ಚಳವಳಿಯ ಇತಿಹಾಸ ಹೊಂದಿರುವ ಸೆಲ್ಮಾ ನಗರದಲ್ಲಿ ವಿದ್ಯುತ್ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಮೊಬೈಲ್ಫೋನ್ಗಳ ಬೆಳಕಿನಲ್ಲಿ ಸಭೆ ನಡೆಸಿದ ನಗರಸಮಿತಿಯ ಅಧಿಕಾರಿಗಳು ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಈ ಪ್ರದೇಶದಲ್ಲಿ ಸುಂಟರಗಾಳಿಯ ಹೊಡೆತಕ್ಕೆ ಭೂಮಿ ಬಿರುಕುಬಿಟ್ಟಿದ್ದು ಹಲವು ಮರಗಳು ಉರುಳಿ ಬಿದ್ದಿವೆ. ಮನೆಗಳ ಗೋಡೆ ಶಿಥಿಲಗೊಂಡಿವೆ. ಹಲವು ಮಂದಿ ಗಾಯಗೊಂಡಿದ್ದು ಈ ಪ್ರದೇಶದಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಸಿದ ಬಳಿಕ ನಾಶ ನಷ್ಟದ ಮಾಹಿತಿ ದೊರಕಲಿದೆ ಎಂದು ಸೆಲ್ಮಾ ನಗರದ ಮೇಯರ್ ಜೇಮ್ಸ್ ಪರ್ಕಿನ್ಸ್ ಹೇಳಿದ್ದಾರೆ.

ಅಲಾಬಾಮದ ಅಟೌಗಾ ಕೌಂಟಿಯಲ್ಲಿ 6 ಮಂದಿ ಸಾವನ್ನಪ್ಪಿದ್ದರೆ ಸುಮಾರು 40 ಮನೆಗಳಿಗೆ ಹಾನಿಯಾಗಿದೆ. ಕನಿಷ್ಟ 12 ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಲ್ಲಿ ಉರುಳಿಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು ಗಾಯಾಳುಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಕೌಂಟಿಯ ತುರ್ತು ನಿರ್ವಹಣಾ ಪಡೆಯ ನಿರ್ದೇಶಕ ಎರ್ನೀ ಬ್ಯಾಗೆಟ್ ಹೇಳಿದ್ದಾರೆ.

 ಜಾರ್ಜಿಯಾದ ಜಾಕ್ಸನ್ ಪ್ರದೇಶದಲ್ಲಿ ರಸ್ತೆ ಮೇಲೆ ಸಾಗುತ್ತಿದ್ದ ವಾಹನದ ಮೇಲೆ ಮರ ಉರುಳಿ ಬಿದ್ದು ವಾಹನದಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾನೆ. ಸುಂಟರಗಾಳಿಯ ಹೊಡೆತಕ್ಕೆ ಸಿಲುಕಿದ ಗೂಡ್ಸ್ ರೈಲೊಂದು ಹಳಿತಪ್ಪಿದೆ. ಅಟ್ಲಾಂಟಾದ ದಕ್ಷಿಣದಲ್ಲಿರುವ ಗ್ರಿಫಿತ್ನಲ್ಲಿ ಮರಗಳು ಅಪಾರ್ಟ್ಮೆಂಟ್ ಮೇಲೆ ಉರುಳಿಬಿದ್ದು ಹಲವರು ಅದರಡಿ ಸಿಲುಕಿದ್ದಾರೆ. ಇದೇ ನಗರದ ಮಾಲ್ ಒಂದರ ಛಾವಣಿ ಹಾರಿಹೋಗಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗಿನ ತನಕ ಕರ್ಫ್ಯೂ ವಿಧಿಸಲಾಗಿತ್ತು ಎಂದು ವರದಿಯಾಗಿದೆ.

share
Next Story
X