Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಕರಾವಳಿಯ ನಾಲ್ವರು ಸಾಧಕರಿಗೆ...

ಮಣಿಪಾಲ: ಕರಾವಳಿಯ ನಾಲ್ವರು ಸಾಧಕರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ

ಬ್ಯಾಂಕಿಂಗ್ ಇಂದು ಕ್ರಿಯಾತ್ಮಕ ಮತ್ತು ಸವಾಲು: ಮಹಾಬಲೇಶ್ವರ ಎಂ.ಎಸ್.

14 Jan 2023 3:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಣಿಪಾಲ: ಕರಾವಳಿಯ ನಾಲ್ವರು ಸಾಧಕರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ
ಬ್ಯಾಂಕಿಂಗ್ ಇಂದು ಕ್ರಿಯಾತ್ಮಕ ಮತ್ತು ಸವಾಲು: ಮಹಾಬಲೇಶ್ವರ ಎಂ.ಎಸ್.

ಉಡುಪಿ: ಪ್ರಸಕ್ತ ದಿನದ ಬ್ಯಾಂಕಿಂಗ್ ಅತ್ಯಂತ ಕ್ರಿಯಾತ್ಮಕ ಹಾಗೂ ಸವಾಲಿನದಾಗಿದೆ. ಸದಾ ಬದಲಾಗುತ್ತಿರುವ ಮಾರುಕಟ್ಟೆ ಹಾಗೂ ಗ್ರಾಹಕರ ನಿರೀಕ್ಷೆಗಳಿಗೆ ಬ್ಯಾಂಕುಗಳು ಅತ್ಯಂತ ಕಡಿಮೆ ಅವಧಿಯಲ್ಲಿ  ಸ್ಪಂಧಿಸ ಬೇಕಾದ ಅನಿವಾರ್ಯತೆ ಇದೆ ಎಂದು ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಸಿಇಓ ಮಹಾಬಲೇಶ್ವರ ಎಂ.ಎಸ್. ಅಭಿಪ್ರಾಯ ಪಟ್ಟಿದ್ದಾರೆ.

ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್, ಮಣಿಪಾಲ ಎಜ್ಯುಕೇಷನ್ ಆ್ಯಂಡ್ ಮೆಡಿಕಲ್ ಗ್ರೂಫ್ ಬೆಂಗಳೂರು, ಮಣಿಪಾಲ ಮೀಡಿಯಾ ನೆಟ್‌ವರ್ಕ್ ಮಣಿಪಾಲ ಹಾಗೂ ಡಾ.ಟಿಎಂಎ ಪೈ ಫೌಂಡೇಷನ್ ಮಣಿಪಾಲ ಸಂಯುಕ್ತವಾಗಿ ಪ್ರತಿವರ್ಷ ಕರಾವಳಿಯ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ಹೊಸ ವರ್ಷದ ಪ್ರಶಸ್ತಿ (ನ್ಯೂ ಇಯರ್ ಅವಾರ್ಡ್) ಯನ್ನು ಇನ್ನೂ ಮೂವರು ಸಾಧಕರೊಂದಿಗೆ ಮಣಿಪಾಲದ ಫಾರ್ಚ್ಯೂನ್ ಇನ್ ವ್ಯಾಲಿವ್ಯೆನಲ್ಲಿ ಇಂದು ಸಂಜೆ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಕಂಪ್ಯೂಟರ್ ಬಳಕೆ ಅಪರೂಪವಾಗಿದ್ದ 1999-2000ನೇ ಸಾಲಿನಲ್ಲೇ ಕರ್ನಾಟಕ ಬ್ಯಾಂಕ್ ವ್ಯವಹಾರಕ್ಕೆ ಕಂಪ್ಯೂಟರ್ ಬಳಕೆಯನ್ನು ಅಳವಡಿಸಿ ಕೊಂಡಿತ್ತು. ತಾನು ಎಂಡಿ ಹಾಗೂ ಸಿಇಓ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕಿನ ಡಿಜಟಲೀಕರಣದ ಅಗತ್ಯವನ್ನು ಮನಗಂಡು ಕಾರ್ಯೋನ್ಮುಖನಾಗಿದ್ದು, ಬ್ಯಾಂಕ್ ಇಂದು ‘ಡಿಜಿಟಲ್ ಬ್ಯಾಂಕ್’ ಆಗಿ ಪರಿವರ್ತನೆಯಾಗಿದ್ದು, ಭವಿಷ್ಯದ ಸವಾಲಿಗೆ ಸಿದ್ಧವಾಗಿದೆ ಎಂದರು.

ಬ್ಯಾಂಕ್‌ಗೆ ಶತಮಾನದ ಸಂಭ್ರಮ: ಕರ್ನಾಟಕ ಬ್ಯಾಂಕ್ ಇಂದು ಪಾನ್ ಇಂಡಿಯಾದಲ್ಲಿ ಗುರುತಿಸಿಕೊಂಡಿದ್ದು, ಭದ್ರ ಬುನಾದಿಯೊಂದಿಗೆ ನಿರಂತರವಾಗಿ ಉತ್ತಮ ಲಾಭವನ್ನು ಗಳಿಸುತ್ತಿದೆ. 2023ರ ಫೆ.18ರಂದು ಕರ್ನಾಟಕ ಬ್ಯಾಂಕ್ ಸ್ಥಾಪನೆಯ ಶತಮಾನಕ್ಕೆ ಕಾಲಿರಿಸಲಿದೆ. ದೇಶಕ್ಕೆ 100 ವರ್ಷಗಳ ಸೇವೆಯ ಸಂಭ್ರಮವನ್ನು ‘ಹೊಸ ಕೆಬಿಎಲ್’ ಮೂಲಕ ಅರ್ಥವತ್ತಾಗಿ ಆಚರಿಸಲು ಬದ್ಧರಾಗಿದ್ದೇವೆ ಎಂದರು.

ಕೃಷಿಯನ್ನು ತಿರಸ್ಕರಿಸಬೇಡಿ: ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಛಲದ ಕೃಷಿ ಬದುಕಿನ ಸಫಲ ಸಾಧಕ ಕೇಪು ಅಡ್ಯನಡ್ಕದ ಅಮೈ ಮಹಾಲಿಂಗ ನಾಯ್ಕ್, ಕುಡಿಯುವ ಒಂದು ಲೋಟ ನೀರಿಗಾಗಿ 3-4 ಫರ್ಲಾಂಗು ದೂರ ನಡೆಯಬೇಕಿದ್ದ ಪರಿಸ್ಥಿತಿಯನ್ನು ವಿವರಿಸಿ, ವಿವಿಧ ಅನಿವಾರ್ಯ ಕಾರಣಗಳಿಗಾಗಿ ಬೋಳುಗುಡ್ಡೆಯಲ್ಲಿ ನೀರು ಹುಡುಕುವ ಪ್ರಯತ್ನವನ್ನು ಇಳಿ ವಯಸ್ಸಿನಲ್ಲಿ ಪ್ರಾರಂಭಿಸಿದ್ದು, ಆರು ಸುರಂಗಗಳನ್ನು ಕೊರೆದ ಬಳಿಕ ಪ್ರಕೃತಿಯ ಮಡಿಲಲ್ಲಿ ಅಡಗಿರುವ ನೀರಿನ ಸೆಲೆಯನ್ನು ಹುಡುಕಿ ತೆಗೆದಿದ್ದೇನೆ. ಪ್ರಕೃತಿಯು ನನ್ನ ಶ್ರಮಕ್ಕೆ ಒಲಿದು ನೀಡಿರುವ ನೀರಿನ ಉಡುಗೊರೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂಬ ನನಗಿದೆ ಎಂದರು.

ಕೃಷಿ ಪ್ರದಾನವಾದ ದೇಶದಲ್ಲಿ ಕೃಷಿಯನ್ನು ತಿರಸ್ಕರಿಸದೇ ಆಸಕ್ತಿಯಿಂದ ತೊಡಗಿಸಿಕೊಂಡಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಯುವ ಜನಾಂಗಕ್ಕೆ ಕಿವಿ ಮಾತು ಹೇಳಿದ ಮಹಾಲಿಂಗ ನಾಯ್ಕ್, ಕೃಷಿ ಭೂಮಿಯನ್ನು ಉಳುಮೆ ಮಾಡದೇ ಬಂಜರು ಬಿಡುವುದು ಅಪರಾಧ. ಕ್ಷಣಿಕವಾಗಿ ಶ್ರೀಮಂತನಾಗುವ ಕನಸು ಕೃಷಿಯಲ್ಲಿ ಕೈಗೂಡದಿದ್ದರೂ, ಅದರಲ್ಲಿರುವ ತೃಪ್ತಿ, ಜೀವನ ಉಲ್ಲಾಸ, ಆರೋಗ್ಯಕರ ಜೀವನ ಬೇರೆ ಯಾವುದರಲ್ಲೂ ಸಿಗುವುದಿಲ್ಲ ಎಂದರು.

ಮಣಿಪಾಲ ಕಸ್ತೂರ್‌ಬಾ ಮೆಡಿಕಲ್ ಕಾಲೇಜಿನ ಆರ್ಥೋಪೆಡಿಕ್ಸ್ ವಿಭಾಗದ ಪ್ರೊಪೆಸರ್ ಹಾಗೂ ಮಾಜಿ ಡೀನ್ ಡಾ.ಪಿ.ಶ್ರೀಪತಿ ರಾವ್ ಮತ್ತು ಮಣಿಪಾಲ ಮಾಹೆಯ ಮಾಜಿ ವಿದ್ಯಾರ್ಥಿ ವ್ಯವಹಾರ ನಿರ್ದೇಶಕಿ ಹಾಗೂ ಪಿಡಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪರಿ ಡಾ.ಪುಷ್ಪಾ ಜಿ.ಕಿಣಿ ಸಹ ಈ ಬಾರಿ ಹೊಸ ವರ್ಷದ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಂಇಎಂಜಿ ಚಯರ್‌ಮೆನ್ ಹಾಗೂ ಅಕಾಡೆಮಿಯ ರಿಜಿಸ್ಟ್ರಾರ್ ಡಾ.ರಂಜನ್ ಪೈ, ಮಣಿಪಾಲ ಮೀಡಿಯಾ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಸತೀಶ್ ಯು.ಪೈ, ಮಣಿಪಾಲ ಡಾ.ಟಿಎಂಎ ಪೈ ಫೌಂಡೇಷನ್‌ನ ಅಧ್ಯಕ್ಷ ಟಿ.ಅಶೋಕ ಪೈ, ಮಾಹೆಯ ಟ್ರಸ್ಟಿ ವಸಂತಿ ಆರ್. ಪೈ ಉಪಸ್ಥಿತರಿದ್ದರು.

ಮಾಹೆಯ ಪ್ರೊ ಚಾನ್ಸಲರ್ ಹಾಗೂ ಅಕಾಡೆಮಿಯ ಅಧ್ಯಕ್ಷ ಡಾ.ಎಚ್. ಎಸ್.ಬಲ್ಲಾಳ್ ಅತಿಥಿಗಳನ್ನು ಸ್ವಾಗತಿಸಿದರು. ಮಾಹೆ ಪ್ರೊವೈಸ್ ಚಾನ್ಸಲರ್ ಡಾ.ಶರತ್ ಕೆ.ರಾವ್ ಅಭಿನಂದನಾ ಭಾಷಣ ಮಾಡಿದರು.ಮುಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಮಣಿ ಶೆಟ್ಟಿ ವಂದಿಸಿದರೆ, ಪ್ರಿನ್ಸಿಯಾ ನಿಖಿತಾ ಡಯಾಸ್ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X