Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಧ್ಯಕ್ಷರ ಆದೇಶಕ್ಕೆ ವಿರೋಧ:...

ಅಧ್ಯಕ್ಷರ ಆದೇಶಕ್ಕೆ ವಿರೋಧ: ಇಂಡೋನೇಶ್ಯದಲ್ಲಿ ಸಾವಿರಾರು ಕಾರ್ಮಿಕರ ಪ್ರತಿಭಟನೆ

14 Jan 2023 11:26 PM IST
share

ಜಕಾರ್ತ, ಜ.14: ಕಾರ್ಮಿಕರ ಹಕ್ಕುಗಳು ಮತ್ತು ಪರಿಸರ ಸಂರಕ್ಷಣೆಯನ್ನು ಕಸಿದುಕೊಳ್ಳುತ್ತದೆ ಎಂಬ ಟೀಕೆಗೆ ಒಳಗಾಗಿರುವ ಅಧ್ಯಕ್ಷರ ಆದೇಶವನ್ನು ಸಂಸತ್ತು ತಿರಸ್ಕರಿಬೇಕೆಂದು ಆಗ್ರಹಿಸಿ ಸಾವಿರಾರು ಕಾರ್ಮಿಕರು ಶನಿವಾರ ಇಂಡೋನೇಶ್ಯದ ರಾಜಧಾನಿ ಜಕಾರ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ದೇಶದ ಉದ್ಯೋಗ ಕಾನೂನನ್ನು ಬದಲಿಸಿ ಕಳೆದ ವಾರ ಅಧ್ಯಕ್ಷ ಜೋಕೊ ವಿಡೋಡೊ ತುರ್ತು ಆದೇಶ ಹೊರಡಿಸಿದ್ದರು. ಇದು ನ್ಯಾಯಾಲಯದ ಆದೇಶವನ್ನು ಉಲ್ಲಂಸುತ್ತದೆ ಎಂದು ಕಾನೂನುತಜ್ಞರು ಹೇಳಿದ್ದರು.

ಅಧ್ಯಕ್ಷರು ಹೊರಡಿಸಿದ ಆದೇಶವು ಉದ್ಯೋಗ ಕಾನೂನಿನ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ಸರಕಾರದ ತಂತ್ರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಈ ಕಾನೂನು ಕಾರ್ಮಿಕರ ಕಲ್ಯಾಣವನ್ನು ಕೆಳದರ್ಜೆಗೆ ಇಳಿಸುತ್ತದೆ, ಕಾರ್ಮಿಕರ ರಕ್ಷಣೆಯನ್ನು ಕಡಿಮೆಗೊಳಿಸುತ್ತದೆ ಮತ್ತು ಕೃಷಿ ಸಮಸ್ಯೆ, ಪರಿಸರ, ಮಹಿಳೆಯರ ರಕ್ಷಣೆ ಸೇರಿದಂತೆ ವ್ಯಾಪಕ ಹಾನಿಯೆಸಗಲಿದೆ. 

ಉದ್ಯೋಗ ಸೃಷ್ಟಿ ಕಾರ್ಮಿಕರ ಕಲ್ಯಾಣ ಸುಧಾರಣೆಗೆ ಅನುಗುಣವಾಗಿರಬೇಕು. ಆದರೆ ಈ ಆದೇಶ ಅದಕ್ಕೆ ವಿರುದ್ಧವಾಗಿದೆ. ಆದ್ದರಿಂದಲೇ ನಾವಿದನ್ನು ವಿರೋಧಿಸುತ್ತಿದ್ದೇವೆ’ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ‘ಹೊರಗುತ್ತಿಗೆಗೆ ನಮ್ಮ ವಿರೋಧವಿದೆ’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಕಾನೂನನ್ನು ಅಂಗೀಕರಿಸುವ ಮೊದಲು ಸಾಕಷ್ಟು ಸಾರ್ವಜನಿಕ ಚರ್ಚೆ ನಡೆದಿಲ್ಲ ಎಂದು ಹೇಳಿದ್ದ ಸಾಂವಿಧಾನಿಕ ನ್ಯಾಯಾಲಯ 2020ರ ಉದ್ಯೋಗ ಸೃಷ್ಟಿ ಕಾನೂನು ದೋಷಪೂರಿತವಾಗಿದೆ ಎಂದು ತೀರ್ಪು ನೀಡಿತ್ತು ಹಾಗೂ ನವೀಕೃತ ಪ್ರಕ್ರಿಯೆಯನ್ನು ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಸದರಿಗೆ ಆದೇಶಿಸಿತ್ತು.

ಉದ್ಯೋಗ ಸೃಷ್ಟಿ ತುರ್ತು ಆದೇಶದ ಅಗತ್ಯವೇ ಇಲ್ಲ, ಯಾಕೆಂದರೆ ಇಲ್ಲಿ ಅಂತಹ ತುರ್ತು ಸ್ಥಿತಿ ನಿರ್ಮಾಣವಾಗಿಲ್ಲ. ಅಧ್ಯಕ್ಷರ ಆದೇಶವು ಕಾರ್ಮಿಕರಲ್ಲಿ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಏಕೆಂದರೆ ಅವರನ್ನು ಸುಲಭವಾಗಿ ವಜಾಗೊಳಿಸಬಹುದು ಎಂದು ಕಾರ್ಮಿಕರು ಹೇಳಿದ್ದಾರೆ.

ಉದ್ಯೋಗ ಹೊರಗುತ್ತಿಗೆ ನೀಡುವುದು ಮತ್ತು ಕನಿಷ್ಠ ವೇತನ ನಿಯಮದ ಬಗ್ಗೆ ಹೆಚ್ಚಿನ ಕಳವಳವಿದೆ. ಕಾರ್ಮಿಕರ ಕಲ್ಯಾಣವನ್ನು ದುರ್ಬಲಗೊಳಿಸಲು ಕೊಳಕು ಉದ್ಯಮಿಗಳ ಏಜೆಂಟರಂತೆ ಸರಕಾರ ವರ್ತಿಸಬಾರದು ಎಂದು ನಾವು ಬಯಸುತ್ತೇವೆ ಎಂದು ಲೇಬರ್ ಪಕ್ಷದ ಅಧ್ಯಕ್ಷ ಸಯೀದ್ ಇಕ್ಬಾಲ್ ಹೇಳಿದ್ದಾರೆ. ಉದ್ಯೋಗ ಸೃಷ್ಟಿ ಕಾನೂನಿನಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂದು ವಿದೇಶಿ ಹೂಡಿಕೆದಾರರು ಸ್ವಾಗತಿಸಿದ್ದಾರೆ. ಈಗ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಅಧ್ಯಕ್ಷರ ಆದೇಶದ ಕಾನೂನು ಸ್ಥಿತಿಯನ್ನು ಸಂಸತ್ತು ಪರಿಶೀಲಿಸಲಿದೆ ಎಂದು ಉಪಸ್ಪೀಕರ್ ಹೇಳಿದ್ದಾರೆ.

share
Next Story
X