Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಂಚನೆಗೊಳಗಾಗಿ ಮಿಲಿಯನ್‌ಗಟ್ಟಲೆ ಡಾಲರ್...

ವಂಚನೆಗೊಳಗಾಗಿ ಮಿಲಿಯನ್‌ಗಟ್ಟಲೆ ಡಾಲರ್ ಕಳೆದುಕೊಂಡ ಉಸೇನ್ ಬೋಲ್ಟ್: ಜಮೈಕಾ ಮೂಲದ ಕಂಪನಿ ವಿರುದ್ಧ ತನಿಖೆ

15 Jan 2023 11:40 AM IST
share
ವಂಚನೆಗೊಳಗಾಗಿ ಮಿಲಿಯನ್‌ಗಟ್ಟಲೆ ಡಾಲರ್ ಕಳೆದುಕೊಂಡ ಉಸೇನ್ ಬೋಲ್ಟ್: ಜಮೈಕಾ ಮೂಲದ ಕಂಪನಿ ವಿರುದ್ಧ ತನಿಖೆ

ಜಮೈಕಾ: ವಿಶ್ವವಿಖ್ಯಾತ ಅಥ್ಲೀಟ್ ಹಾಗೂ 2016ರ ಒಲಿಪಿಂಕ್ಸ್ ಕ್ರೀಡಾ ಕೂಟದ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಜಯಿಸಿದ್ದ ಜಮೈಕಾ ದೇಶದ ಉಸೇನ್ ಬೋಲ್ಟ್ ವಂಚಕ ಕಂಪನಿಯೊಂದರ ಜಾಲಕ್ಕೆ ಸಿಲುಕಿ, ಮಿಲಿಯನ್‌ಗಟ್ಟಲೆ ಡಾಲರ್ ಕಳೆದುಕೊಂಡಿದ್ದಾರೆ ಎಂದು indianexpress.com ವರದಿ ಮಾಡಿದೆ.

ಉಸೇನ್ ಬೋಲ್ಟ್‌ರ ಹೂಡಿಕೆ ವ್ಯವಹಾರಗಳನ್ನು ನಿಭಾಯಿಸುವ ಕಂಪನಿಯೊಂದು ಮಾಜಿ ವೇಗದ ಓಟಗಾರ ಬೋಲ್ಟ್ ವಂಚನೆಗೊಳಗಾಗಿ ಮಿಲಿಯನ್‌ಗಟ್ಟಲೆ ಡಾಲರ್ ನಷ್ಟ ಅನುಭವಿಸಿದ್ದಾರೆ ಎಂಬ ಸಂಗತಿಯನ್ನು ಬಹಿರಂಗಗೊಳಿಸಿದ್ದು, ಇದರ ಬೆನ್ನಿಗೇ ಸದರಿ ಕಂಪನಿಯ ಕಾರ್ಯನಿರ್ವಹಣೆ ಪ್ರಶ್ನೆಗೊಳಗಾಗಿದೆ. ಉಸೇನ್ ಅವರ ಹೂಡಿಕೆ ವ್ಯವಹಾರಗಳನ್ನು ಸದರಿ ಆರ್ಥಿಕ ಕಂಪನಿಯು ಕಳೆದ ಒಂದು ದಶಕದಿಂದ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಉಸೇನ್ ಬೋಲ್ಟ್‌ರ ವ್ಯವಸ್ಥಾಪಕ ನ್ಯೂಜೆಂಟ್ ವಾಕರ್, ಪ್ರಕರಣದ ಕುರಿತು ದೇಶದ ಆರ್ಥಿಕ ವ್ಯವಹಾರಗಳ ತನಿಖಾ ಸಂಸ್ಥೆಯಾದ ಆರ್ಥಿಕ ತನಿಖಾ ವಿಭಾಗ ತನಿಖೆ ನಡೆಸುತ್ತಿದ್ದು, ಈ ತನಿಖೆಗೆ ಪ್ರಶ್ನೆಗೊಳಗಾಗಿರುವ ಸ್ಟಾಕ್ಸ್ ಆ್ಯಂಡ್ ಸೆಕ್ಯೂರಿಟೀಸ್ ಲಿಮಿಟೆಡ್ ಪೊಲೀಸರೊಂದಿಗೆ ಸಹಕರಿಸುತ್ತಿದೆ ಎಂದು ತಿಳಿಸಿದ್ದಾರೆ.

"ಉಸೇನ್ ಬೋಲ್ಟ್ ಅವರು ಕಳೆದ ಒಂದು ದಶಕದಿಂದ ಈ ಸಂಸ್ಥೆಯೊಂದಿಗೆ ವ್ಯವಹರಿಸುತ್ತಿದ್ದು, ಅವರ ಸಂಪೂರ್ಣ ವ್ಯವಹಾರಗಳನ್ನು ಪುನರ್ ಪರಿಶೀಲನೆಗೊಳಪಡಿಸಲಾಗುವುದು" ಎಂದು ವಾಕರ್ ಹೇಳಿದ್ದಾರೆ.

"ಈ ಪ್ರಕರಣದ ಆಳಕ್ಕಿಳಿಯಲು ಎಲ್ಲ ಬಗೆಯ ಪ್ರಸ್ತುತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ" ಎಂದು ತಿಳಿಸಿರುವ ವಾಕರ್, ತನಿಖೆಯು ಪ್ರಗತಿಯಲ್ಲಿರುವುದರಿಂದ, ಎಷ್ಟು ಮೊತ್ತವನ್ನು ಕಳೆದುಕೊಳ್ಳಲಾಗಿದೆ ಎಂದು ಬಯಲು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಮುನ್ನ ಬುಧವಾರದಂದು ತಮ್ಮ ಖಾತೆಯಿಂದ ಮಿಲಿಯನ್‌ಗಟ್ಟಲೆ ಹಣ ಕಾಣೆಯಾಗಿರುವುದು ಉಸೇನ್ ಬೋಲ್ಟ್ ಗಮನಕ್ಕೆ ಬಂದಿತ್ತು‌.

ಪ್ರಕರಣದಲ್ಲಿ ಪ್ರಶ್ನೆಗೊಳಗಾಗಿರುವ ಉದ್ಯೋಗಿಯನ್ನು ಕಂಪನಿಯು ಈಗಾಗಲೇ ವಜಾಗೊಳಿಸಿದ್ದು, ಉಸೇನ್ ಬೋಲ್ಟ್ ಒಳಗೊಂಡಂತೆ ತಳಮಟ್ಟದಲ್ಲಿ ವ್ಯಾಪಕ ವಂಚನೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ವಜಾಗೊಂಡಿರುವ ಉದ್ಯೋಗಿ ಪರ ವಕೀಲರು, ಆಕೆ ಉಸೇನ್ ಬೋಲ್ಟ್‌ರೊಂದಿಗೆ ಕಳೆದ ಎರಡು ವಾರಗಳಿಂದ ಮಾತ್ರ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾಳೆ ಮತ್ತು ಈ ಕುರಿತು ಮಾತುಕತೆ ಮುಂದುವರಿದಿದೆ. ನನ್ನ ಕಕ್ಷಿದಾರರು ಸ್ಟಾಕ್ಸ್ ಆ್ಯಂಡ್ ಸೆಕ್ಯೂರಿಟೀಸ್ ಕಂಪನಿ ಹಾಗೂ ಆ ಕಂಪನಿಯನ್ನು ಪ್ರತಿನಿಧಿಸುವ ವಕೀಲರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ" ಎಂದು ತಿಳಿಸಿದ್ದಾರೆ.

share
Next Story
X