Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್: ನೆತನ್ಯಾಹು ಸರಕಾರದ ವಿರುದ್ಧ...

ಇಸ್ರೇಲ್: ನೆತನ್ಯಾಹು ಸರಕಾರದ ವಿರುದ್ಧ ಬೃಹತ್ ರ‍್ಯಾಲಿ

15 Jan 2023 11:16 PM IST
share
ಇಸ್ರೇಲ್: ನೆತನ್ಯಾಹು ಸರಕಾರದ ವಿರುದ್ಧ ಬೃಹತ್ ರ‍್ಯಾಲಿ

ಟೆಲ್ ಅವೀವ್, ಜ.15: ಕಾನೂನು ವ್ಯವಸ್ಥೆಯಲ್ಲಿ ಮಾರ್ಪಾಡು ಮತ್ತು ಸುಪ್ರೀಂಕೋರ್ಟ್ ಅನ್ನು ದುರ್ಬಲಗೊಳಿಸುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಯೋಜನೆಯನ್ನು ವಿರೋಧಿಸಿ ಶನಿವಾರ ಸಾವಿರಾರು ಇಸ್ರೇಲಿಯನ್ನರು ಸೆಂಟ್ರಲ್ ಟೆಲ್ಅವೀವ್ನಲ್ಲಿ ಜಮಾಯಿಸಿ ಬೃಹತ್ ರ್ಯಾಲಿ ನಡೆಸಿ ಪ್ರತಿಭಟಿಸಿದರು ಎಂದು ವರದಿಯಾಗಿದೆ.

ನೆತನ್ಯಾಹು ಸರಕಾರದ ಈ ಕ್ರಮಗಳು, ಅಧಿಕಾರ ವಿಕೇಂದ್ರೀಕರಣದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲಿದೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರೆ ಅಥವಾ ಫೆಲೆಸ್ತೀನ್ ಧ್ವಜ ಪ್ರದರ್ಶಿಸಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನೆತನ್ಯಾಹು ಮತ್ತು ಅವರ ಸರಕಾರದ  ಅತಿರಾಷ್ಟ್ರವಾದಿ ರಾಷ್ಟ್ರೀಯ ಭದ್ರತಾ ಸಚಿವ ಇತಮರ್ ಬೆಂಗ್ವಿರ್ ಪೊಲೀಸರಿಗೆ ನೀಡಿದ ಆದೇಶಕ್ಕೆ ಸವಾಲೆಸೆದು ಬೃಹತ್ ಪ್ರತಿಭಟನಾ ರ್ಯಾಲಿ ನಡೆದಿದೆ. ಟೆಲ್ಅವೀವ್ನ ಹಬೀಮಾ ವೃತ್ತದ ಬಳಿ ನಡೆದ ರ್ಯಾಲಿಯಲ್ಲಿ ಸೇರಿದ್ದ ಕನಿಷ್ಟ 80,000  ಮಂದಿ ಇಸ್ರೇಲ್ನ ಧ್ವಜವನ್ನು ಬೀಸುತ್ತಾ `ಕ್ರಿಮಿನಲ್ ಸರಕಾರ, ಪ್ರಜಾಪ್ರಭುತ್ವದ ಅಂತ್ಯ' ಇತ್ಯಾದಿ ಘೋಷಣೆ ಕೂಗುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲ್ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಅವರು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ಇದು ಸಾಧ್ಯವಾಗದು. ಇಸ್ರೇಲ್ನ ಪ್ರಜಾಪ್ರಭುತ್ವವನ್ನು ರಕ್ಷಿಸಿಕೊಳ್ಳಲು ನಾವು ಅಂತಿಮ ಕ್ಷಣದವರೆಗೂ ಹೋರಾಡುತ್ತೇವೆ ಎಂದು ಪ್ರತಿಭಟನಾಕಾರರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಆದರೆ ಇದಕ್ಕೆ ವ್ಯತಿರಿಕ್ತ ವರದಿ ಮಾಡಿರುವ ಇಸ್ರೇಲ್ ಮಾಧ್ಯಮಗಳು

`ಬೆರಳೆಣಿಕೆಯಷ್ಟು ಪ್ರತಿಭಟನಾಕಾರರು ಟೆಲ್ಅವೀವ್ ಹೆದ್ದಾರಿಯನ್ನು ತಡೆಯಲು ಪ್ರಯತ್ನಿಸಿ ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು ಎಂದು ಪ್ರತಿಪಾದಿಸಿವೆ. ಪ್ರತಿಭಟನಾ ರ್ಯಾಲಿಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿಭಟನಾಕಾರರೊಂದಿಗೆ ಮೃದುವಾಗಿ ವರ್ತಿಸುವಂತೆ ಮತ್ತು ಶಾಂತರೀತಿಯಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡುವಂತೆ ಪೊಲೀಸರಿಗೆ ಸೂಚಿಸಲಾಗಿತ್ತು. ಆದರೆ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದರೆ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿತ್ತು ಎಂದು ವರದಿ ಹೇಳಿದೆ. ಜೆರುಸಲೇಂ ಮತ್ತು ಹೈಫಾ ನಗರದಲ್ಲೂ  ಪ್ರತಿಭಟನೆ ನಡೆದಿದೆ.

ಭ್ರಷ್ಟಾಚಾರ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ಪ್ರಧಾನಿ ನೆತನ್ಯಾಹು, ದೇಶದ ಕಾನೂನುವ್ಯವಸ್ಥೆಯಲ್ಲಿ ಮಾರ್ಪಾಡು ಮಾಡುವುದಾಗಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ಬಲಪಂಥೀಯ ರಾಷ್ಟ್ರೀಯತಾವಾದಿ ಮತ್ತು ಸಂಪ್ರದಾಯವಾದಿ ಪಕ್ಷಗಳ ನೆರವಿನಿಂದ ಮೈತ್ರಿಸರಕಾರ ರಚಿಸಿರುವ ನೆತನ್ಯಾಹು, ಅಧಿಕಾರ ಸ್ವೀಕರಿಸಿದ ಎರಡು ವಾರದಲ್ಲೇ ಸುಪ್ರೀಂಕೋರ್ಟ್ನ ಅಧಿಕಾರ ದುರ್ಬಲಗೊಳಿಸುವ ಯೋಜನೆಯನ್ನು ಪ್ರಸ್ತಾವಿಸಿದ್ದಾರೆ.

ಸುಪ್ರೀಂಕೋರ್ಟ್ನ ಆದೇಶವನ್ನು  ಸರಳ ಬಹುಮತದೊಂದಿಗೆ ರದ್ದುಗೊಳಿಸುವ ಅಧಿಕಾರವನ್ನು ಸಂಸತ್ತಿಗೆ ನೀಡುವ, ನ್ಯಾಯಾಧೀಶರ ನೇಮಕ ಪ್ರಕ್ರಿಯೆಯ ನಿಯಂತ್ರಣವನ್ನು  ಸಂಸತ್ತಿಗೆ ನೀಡುವ, ಕಾನೂನು ಸಲಹೆಗಾರರ ಸ್ವಾತಂತ್ರ್ಯವನ್ನು ಕಡಿಮೆಗೊಳಿಸುವ  ಈ ಪ್ರಸ್ತಾವನೆಗೆ ವಿಪಕ್ಷ ಮುಖಂಡರಿಂದ, ಮಾಜಿ ಅಟಾರ್ನಿ ಜನರಲ್ಗಳಿಂದ ಮತ್ತು ಇಸ್ರೇಲ್ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶರ ಸಹಿತ ವ್ಯಾಪಕ  ವಿರೋಧ ವ್ಯಕ್ತವಾಗಿದೆ. ಕಾನೂನಿನಲ್ಲಿ ಮಾರ್ಪಾಡಾದರೆ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನೆತನ್ಯಾಹುಗೆ ಅನುಕೂಲವಾಗಲಿದೆ. 

ಇಸ್ರೇಲ್ ಸೇನೆಯಿಂದ ಫೆಲೆಸ್ತೀನ್ ಪ್ರಜೆಯ ಹತ್ಯೆ

ಆಕ್ರಮಿತ ಪಶ್ಚಿಮದಂಡೆಯ ರಮಲ್ಲಾ ನಗರದ ಬಳಿ ಇಸ್ರೇಲ್ ಸೇನೆ ಫೆಲೆಸ್ತೀನ್ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಫೆಲೆಸ್ತೀನ್ನ ಆರೋಗ್ಯ ಇಲಾಖೆ ಹೇಳಿದೆ. ರಮಲ್ಲಾದ ಈಶಾನ್ಯದಲ್ಲಿರುವ ಸಿಲ್ವಾದ್ ನಗರದ ಚೆಕ್ಪಾಯಿಂಟ್ ಬಳಿ ಇಸ್ರೇಲ್ ಯೋಧರ ಜತೆ ವಾದ ಮಾಡಿದ ಅಹ್ಮದ್ ಕಹ್ಲಾ ಎಂಬ ವ್ಯಕ್ತಿಯನ್ನು ಕಾರಿನಿಂದ ಇಳಿಯುವಂತೆ ಸೂಚಿಸಿದ ಬಳಿಕ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಫೆಲೆಸ್ತೀನ್ನ `ವಫಾ' ಸುದ್ಧಿಸಂಸ್ಥೆ ವರದಿ ಮಾಡಿದೆ.

ಇದರೊಂದಿಗೆ ಈ ವರ್ಷದ ಆರಂಭದ 15 ದಿನದಲ್ಲೇ ಇಸ್ರೇಲ್ ಸೇನೆಯಿಂದ ಹತರಾದ ಫೆಲೆಸ್ತೀನೀಯರ ಸಂಖ್ಯೆ 13ಕ್ಕೇರಿದೆ. ಚೆಕ್ಪಾಯಿಂಟ್ ಬಳಿ ಅಧಿಕಾರಿಗಳ ಸೂಚನೆ ಧಿಕ್ಕರಿಸಿ ಅಹ್ಮದ್ ಕಹ್ಲಾ  ಯೋಧರನ್ನು ಚೂರಿಯಿಂದ ಇರಿಯಲು ಪ್ರಯತ್ನಿಸಿದಾಗ ಇಸ್ರೇಲ್ ಯೋಧರು ಗುಂಡು ಹಾರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲ್ ಯೋಧನ ಮೃತ್ಯು

ಈ ಮಧ್ಯೆ, ಆಕ್ರಮಿತ ಪಶ್ಚಿಮ ದಂಡೆಯ ಜೋರ್ಡನ್ ಕಣಿವೆಯಲ್ಲಿರುವ ಸೇನಾ ನೆಲೆಯಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಇಸ್ರೇಲ್ನ ಓರ್ವ ಯೋಧ ಮೃತಪಟ್ಟಿದ್ದು ಇತರ ಮೂರು ಯೋಧರು ಗಾಯಗೊಂಡಿರುವುದಾಗಿ ಸೇನೆ ಹೇಳಿದೆ.

ಇಸ್ರೇಲ್ ನ ಕೆಫಿರ್ ಬ್ರಿಗೇಡ್ನ ತರಬೇತಿ ಮೈದಾನದ ಬಳಿಯ ಯೋಧರ ವಸತಿ ಗೃಹದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಕಾರಣದ ಬಗ್ಗೆ ಮಿಲಿಟರಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಸೇನೆ ಹೇಳಿದೆ.

ಇದನ್ನು ಓದಿ: ವಂಚನೆಗೊಳಗಾಗಿ ಮಿಲಿಯನ್‌ಗಟ್ಟಲೆ ಡಾಲರ್ ಕಳೆದುಕೊಂಡ ಉಸೇನ್ ಬೋಲ್ಟ್: ಜಮೈಕಾ ಮೂಲದ ಕಂಪನಿ ವಿರುದ್ಧ ತನಿಖೆ

share
Next Story
X