ಹೊಸಳ್ಳಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಶನ್ ನಿಂದ ನೂತನ ಮದ್ರಸ ನಿರ್ಮಾಣಕ್ಕೆ ಶಿಲಾನ್ಯಾಸ
ಶಿವಮೊಗ್ಗ, ಜ.16: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಶನ್(ಎಸ್.ಎಂ.ಎ.) ರಾಜ್ಯ ಸಮಿತಿಯ ವತಿಯಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ರೀಜಿನಲ್ ಗೊಳಪಟ್ಟ ಹೊಸಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಮದ್ರಸ ಕಟ್ಟಡಕ್ಕೆ ಖಾಝಿ ಖುರ್ರತುಸ್ಸಾದಾತ್ ಸೈಯದ್ ಕೂರ ತಂಙಳ್ ಶಿಲಾನ್ಯಾಸ ನೆರವೇರಿಸಿದರು.
ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನ ಎನ್.ಕೆ.ಎಂ.ಶಾಫಿ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು. ಎಸ್.ಎಂ.ಎ. ರಾಜ್ಯಾಧ್ಯಕ್ಷ ಉಜಿರೆ ಸೈಯದ್ ಇಸ್ಮಾಯೀಲ್ ಅಲ್-ಹಾದಿ ತಂಙಳ್ ಮದನಿ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಜೆಪ್ಪು ಅಬ್ದುರ್ರಹ್ಮಾನ್ ಮದನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಕ್ಷೇಮ ಕಾರ್ಯ ವಿಭಾಗದ ಕಾರ್ಯದರ್ಶಿ ಮೂಡಡ್ಕ ಅಶ್ರಫ್ ಸಖಾಫಿ ಮುಖ್ಯ ಭಾಷಣ ಮಾಡಿದರು. ಎಸ್.ಎಂ.ಎ. ರಾಜ್ಯ ಕೋಶಾಧಿಕಾರಿ ಕೊಡುಂಗಾಯಿ ಅಬ್ದುಲ್ ಹಮೀದ್ ಹಾಜಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ಕಡ್ತೂರು ಇಬ್ರಾಹೀಂ ಹಾಜಿ ಶುಭಾಶಂಸಗೈದರು.
ವೇದಿಕೆಯಲ್ಲಿ ಸೈಯದ್ ಬಾಷಾ ತಂಙಳ್ ಸಾಗರ, ರಾಜ್ಯ ಕ್ಷೇಮ ಕಾರ್ಯ ವಿಭಾಗದ ಅಧ್ಯಕ್ಷ ಎ.ಕೆ.ಅಹ್ಮದ್, ಟ್ರೈನಿಂಗ್ ವಿಭಾಗದ ಅಧ್ಯಕ್ಷ ಬೆಜ್ಜವಳ್ಳಿ ಹನೀಫ್, ಪಬ್ಲಿಕ್ ರಿಲೇಶನ್ ಕಾರ್ಯದರ್ಶಿ ಪಿ.ಎಂ.ಮುಹಮ್ಮದ್ ಮದನಿ ಪೂಡಲ್, ಎಸ್.ಎಂ.ಎ. ದ.ಕ. ವೆಸ್ಟ್ ಜಿಲ್ಲಾಧ್ಯಕ್ಷ ಅಡ್ಯಾರ್ ಪದವು ಇಸ್ಮಾಯೀಲ್ ಉಪಸ್ಥಿತರಿದ್ದರು.
ಎಸ್.ಎಂ.ಎ. ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಬಿ.ಎಂ. ಸಾದಿಕ್ ಮಲೆಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ಸ್ವಾಗತಿಸಿದರು. ತೀರ್ಥಹಳ್ಳಿ ರೀಜನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಮದನಿ ಕಡ್ತೂರು ವಂದಿಸಿದರು.