Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೇ. 20ರಷ್ಟು ಉದ್ಯೋಗ ಕಡಿತ ಘೋಷಿಸಿದ...

ಶೇ. 20ರಷ್ಟು ಉದ್ಯೋಗ ಕಡಿತ ಘೋಷಿಸಿದ ಮತ್ತೊಂದು ಕಂಪೆನಿ

16 Jan 2023 6:19 PM IST
share
ಶೇ. 20ರಷ್ಟು ಉದ್ಯೋಗ ಕಡಿತ ಘೋಷಿಸಿದ ಮತ್ತೊಂದು ಕಂಪೆನಿ

ಹೊಸದಿಲ್ಲಿ: ಬಂಡವಾಳ ಹೂಡಿಕೆದಾರರು ಶೇರು ಮಾರುಕಟ್ಟೆ ಮೌಲ್ಯವು ಅನಿಶ್ಚಿತವಾಗಿರುವುದರಿಂದ ಕಳವಳಗೊಂಡಿದ್ದು, ಇದರಿಂದ ತಂತ್ರಜ್ಞಾನ ಕಂಪನಿಗಳು ವೆಚ್ಚ ಕಡಿತದ ಭಾಗವಾಗಿ ಉದ್ಯೋಗ ಕಡಿತ ಮಾಡುತ್ತಲೇ ಸಾಗಿವೆ. ಈ ಸಾಲಿಗೆ ತಂತ್ರಜ್ಞಾನ ದೈತ್ಯ ಸಂಸ್ಥೆಗಳಾದ ಗೂಗಲ್ ಹಾಗೂ ಟೆಮಾಸೆಕ್ ಬೆಂಬಲ ಹೊಂದಿರುವ ಸಾಮಾಜಿಕ ಮಾಧ್ಯಮ ShareChat ಹೊಸದಾಗಿ ಸೇರ್ಪಡೆಯಾಗಿದೆ. ಜಾಗತಿಕ ಆರ್ಥಿಕ ಹಿಂಜರಿತ ಸಾಧ್ಯತೆಯನ್ನು ಅಂದಾಜಿಸಿರುವ ShareChat, "ಬಂಡವಾಳ ಲಭ್ಯತೆ ಮೇಲೆ ಪರಿಣಾಮ ಬೀರಲಿರುವ ಹಲವಾರು ಬಾಹ್ಯ ಆರ್ಥಿಕ ಪರಿಸ್ಥಿತಿಗಳನ್ನು ಮೆಟ್ಟಿ ನಿಲ್ಲಲು" ಕಂಪನಿಯ ಶೇ. 20ರಷ್ಟು ಉದ್ಯೋಗ ಕಡಿತಗೊಳಿಸಲಾಗುವುದು ಎಂದು ಪ್ರಕಟಿಸಿದೆ.

ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಪ್ರೈ. ಲಿ. ಮಾಲೀಕತ್ವದ ShareChat ಹಾಗೂ ಅದರ ಕಿರುಚಿತ್ರಗಳ ತಂತ್ರಾಂಶ Moj ಸಂಸ್ಥೆಗಳು 500 ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ShareChat ಕಂಪನಿಯ ಮೌಲ್ಯವು 5 ಶತಕೋಟಿ ಡಾಲರ್ ಆಗಿದ್ದು, 2200ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ.

ಈ ಕುರಿತು ಸೋಮವಾರ ಪ್ರತಿಕ್ರಿಯಿಸಿರುವ ಕಂಪನಿಯ ವಕ್ತಾರರೊಬ್ಬರು, "ಒಂದು ಕಂಪನಿಯಾಗಿ ನಾವು ನಮ್ಮ ಇತಿಹಾಸದಲ್ಲೇ ಅತ್ಯಂತ ಕಠಿಣ ಮತ್ತು ನೋವಿನ ನಿರ್ಧಾರವನ್ನು ಕೈಗೊಳ್ಳಬೇಕಾಗಿದೆ. ನಮ್ಮ ನವೋದ್ಯಮ ಕಂಪನಿಯು ಪ್ರಾರಂಭವಾದಂದಿನಿಂದ ನಮ್ಮೊಂದಿಗಿದ್ದ ಶೇ. 20ರಷ್ಟು ಅದ್ಭುತ, ಪ್ರತಿಭಾವಂತ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿದ್ದೇವೆ" ಎಂದು ತಿಳಿಸಿದ್ದು, "ಬಂಡವಾಳ ಹೂಡಿಕೆಯು ದುಬಾರಿಯಾಗಿ ಪರಿಣಮಿಸಿದ್ದು, ಸಂಸ್ಥೆಯು ತನ್ನ ಲಾಭದ ಕಡೆ ಆದ್ಯತೆ ನೀಡಬೇಕಿದೆ ಮತ್ತು ಅತಿ ಹೆಚ್ಚು ಪರಿಣಾಮಕಾರಿ ಯೋಜನೆಗಳಲ್ಲಿ ಬಂಡವಾಳ ತೊಡಗಿಸಬೇಕಿದೆ" ಎಂದೂ ಹೇಳಿದ್ದಾರೆ.

ಡಿಸೆಂಬರ್, 2022ರಲ್ಲಿ ತನ್ನ ಆನ್‌ಲೈನ್ ಮೋಜಿನ ಕ್ರೀಡಾ ವೇದಿಕೆಯಾದ ಜೀತ್ 11 ಅನ್ನು ಸ್ಥಗಿತಗೊಳಿಸಿದ ಬೆನ್ನಿಗೇ ಮೊಹಿಲ್ಲಾ ಟೆಕ್ ಈ ದೊಡ್ಡ ನಿರ್ಧಾರವನ್ನು ಪ್ರಕಟಿಸಿದೆ. ಆಗ ಸುಮಾರು 100 ಉದ್ಯೋಗಿಗಳನ್ನು ವಜಾಗೊಳಿಸಲಾಗಿತ್ತು.

ಇದನ್ನೂ ಓದಿ: ಶತಕೋಟ್ಯಧಿಪತಿಗಳ ಮೇಲೆ ಶೇ. 5ರಷ್ಟು ತೆರಿಗೆ ವಿಧಿಸಿದರೂ ಎರಡು ಶತಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಬಹುದು: ವರದಿ

share
Next Story
X