Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಬುಧಾಬಿ ದೊರೆ ಕುಟುಂಬದ ಉದ್ಯೋಗಿ ಎಂದು...

ಅಬುಧಾಬಿ ದೊರೆ ಕುಟುಂಬದ ಉದ್ಯೋಗಿ ಎಂದು ನಟಿಸಿ ಹೋಟೆಲ್‌ ನಲ್ಲಿ ರೂ. 23 ಲಕ್ಷ ಬಿಲ್ ಬಾಕಿಯುಳಿಸಿ ವ್ಯಕ್ತಿ ಪರಾರಿ

17 Jan 2023 7:12 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಬುಧಾಬಿ ದೊರೆ ಕುಟುಂಬದ ಉದ್ಯೋಗಿ ಎಂದು ನಟಿಸಿ ಹೋಟೆಲ್‌ ನಲ್ಲಿ ರೂ. 23 ಲಕ್ಷ ಬಿಲ್ ಬಾಕಿಯುಳಿಸಿ ವ್ಯಕ್ತಿ ಪರಾರಿ

ಹೊಸದಿಲ್ಲಿ: ಅಬುಧಾಬಿ ದೊರೆಗಳ ಕುಟುಂಬದ ಉದ್ಯೋಗಿ ಎಂದು ಸೋಗು ಹಾಕಿದ್ದ ವ್ಯಕ್ತಿಯೊಬ್ಬ ದಿಲ್ಲಿಯ ಐಷಾರಾಮಿ ಹೋಟೆಲ್‌ನಲ್ಲಿ ನಾಲ್ಕು ತಿಂಗಳ ಕಾಲ ವಾಸ್ತವ್ಯ ಹೂಡಿ, ರೂ. 23 ಲಕ್ಷ ಬಿಲ್ ಬಾಕಿಯುಳಿಸಿ ಪರಾರಿಯಾಗಿದ್ದಾನೆ ಎಂದು ndtv.com ವರದಿ ಮಾಡಿದೆ.

ಶನಿವಾರ ಈ ಕುರಿತು ಲೀಲಾ ಪ್ಯಾಲೇಸ್ ಹೋಟೆಲ್ ಆಡಳಿತ ಮಂಡಳಿ ಸಲ್ಲಿಸಿರುವ ದೂರನ್ನು ಆಧರಿಸಿ, ಮುಹಮ್ಮದ್ ಶರೀಫ್ ಎಂಬ ವ್ಯಕ್ತಿಯ ವಿರುದ್ಧ ವಂಚನೆ ಮತ್ತು ಕಳವು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, ಆತನಿಗಾಗಿ ಶೋಧ ಕೈಗೊಂಡಿದ್ದಾರೆ.

ಆಗಸ್ಟ್ 1ರಂದು ಲೀಲಾ ಪ್ಯಾಲೇಸ್‌ನ ಕೊಠಡಿ ಸಂಖ್ಯೆ 427ರಲ್ಲಿ ವಾಸ್ತವ್ಯ ಹೂಡಿರುವ ಶರೀಫ್, ನವೆಂಬರ್ 20ರಂದು ಯಾವುದೇ ಸುಳಿವು ನೀಡದೆ ಹೋಟೆಲ್‌ನಿಂದ ಪರಾರಿಯಾಗಿದ್ದಾನೆ. ಈ ವೇಳೆ ಕೊಠಡಿಯಲ್ಲಿದ್ದ ಬೆಳ್ಳಿ ಪಾತ್ರೆಗಳು ಮತ್ತು ಮುತ್ತಿನ ಹರಿವಾಣ ಸೇರಿದಂತೆ ಹಲವಾರು ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ಹೋಟೆಲ್ ಸಿಬ್ಬಂದಿ ದೂರಿದ್ದಾರೆ.

ಆಗಸ್ಟ್‌ನಲ್ಲಿ ಹೋಟೆಲ್‌ಗೆ ಬಂದಿರುವ ಶರೀಫ್, ತಾನು ಯುಎಇ ನಿವಾಸಿಯಾಗಿದ್ದು, ಅಬುಧಾಬಿ ದೊರೆಗಳ ಕುಟುಂಬಕ್ಕೆ ಸೇರಿದ ಶೇಖ್ ಫಲಾ ಬಿನ್ ಝಾಯೇದ್ ಅಲ್ ನಹ್ಯಾನ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ ತಾನು ಶೇಖ್ ಅವರೊಂದಿಗೆ ಖಾಸಗಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕೃತ ವ್ಯವಹಾರದ ನಿಮಿತ್ತ ಭಾರತಕ್ಕೆ ಬಂದಿದ್ದೇನೆ ಎಂದೂ ಹೇಳಿಕೊಂಡಿದ್ದಾನೆ. ತನ್ನ ಇತಿಹಾಸವನ್ನು ಪುಷ್ಟೀಕರಿಸಲು ಆತ ತನ್ನ ವ್ಯವಹಾರ ಚೀಟಿ, ಯುಎಇ ನಿವಾಸಿ ಚೀಟಿ ಮತ್ತಿತರ ದಾಖಲೆಗಳನ್ನು ಒದಗಿಸಿದ್ದಾನೆ. ತನ್ನ ಕತೆಗಳನ್ನು ನಂಬಿಸಲು ಆತ ತನ್ನ ಯುಎಇ ಬದುಕಿನ ಕುರಿತು ಹೋಟೆಲ್ ಸಿಬ್ಬಂದಿಯೊಂದಿಗೆ ಪ್ರತಿ ನಿತ್ಯ ಸಂಭಾಷಿಸಿದ್ದಾನೆ.

ಪೊಲೀಸರು ಆತ ಒದಗಿಸಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಅವು ನಕಲಿಯಾಗಿರಬಹುದು ಎಂದು ಶಂಕಿಸಿದ್ದಾರೆ.

ಆತನ ನಾಲ್ಕು ತಿಂಗಳ ಕೊಠಡಿ ವಾಸ್ತವ್ಯ ಹಾಗೂ ಸೇವೆಗಳ ಬಿಲ್ ಮೊತ್ತ ರೂ. 35 ಲಕ್ಷ ಆಗಿದ್ದು, ಈ ಪೈಕಿ ಕೇವಲ ರೂ. 1.5 ಲಕ್ಷ ಪಾವತಿಸಿರುವ ಆತ, ಉಳಿದ ಮೊತ್ತವನ್ನು ಬಾಕಿಯುಳಿಸಿ ಪರಾರಿಯಾಗಿದ್ದಾನೆ. ಆತ ಹೋಟೆಲ್ ಸಿಬ್ಬಂದಿಗೆ ನವೆಂಬರ್ 20ರ ದಿನಾಂಕ ನಮೂದಿಸಿರುವ ರೂ. 20 ಲಕ್ಷ ಮೊತ್ತದ ಚೆಕ್ ನೀಡಿದ್ದು, ಅಂದೇ ಆತ ಹೋಟೆಲ್‌ನಿಂದ ಪರಾರಿಯಾಗಿದ್ದಾನೆ.

ಆತನ ಗುರುತು ಪತ್ತೆ ಹಚ್ಚಲು ದಿಲ್ಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಬುರ್ಖಾ ಧರಿಸಿ, ಬೆನ್ನಿನ ಹಿಂಭಾಗಕ್ಕೆ ಸ್ವಿಗ್ಗಿ ಬ್ಯಾಗ್ ಹೇರಿಕೊಂಡು ಹೋಗುತ್ತಿರುವ ಮಹಿಳೆಯ ಬದುಕು ಹೀಗಿದೆ... 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X