Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಮಟ್ಟದ ಸಂದೇಶ ಪ್ರಶಸ್ತಿ ಪ್ರಕಟ

ರಾಜ್ಯ ಮಟ್ಟದ ಸಂದೇಶ ಪ್ರಶಸ್ತಿ ಪ್ರಕಟ

ಡಾ.ಚಿನ್ನಪ್ಪ ಗೌಡ, ಸಬೀಹಾ ಭೂಮಿಗೌಡ, ಶಿವಾಜಿ ಗಣೇಶನ್ ಸೇರಿದಂತೆ 9 ಮಂದಿಗೆ ಪುರಸ್ಕಾರ

18 Jan 2023 8:39 PM IST
share
ರಾಜ್ಯ ಮಟ್ಟದ ಸಂದೇಶ ಪ್ರಶಸ್ತಿ ಪ್ರಕಟ
ಡಾ.ಚಿನ್ನಪ್ಪ ಗೌಡ, ಸಬೀಹಾ ಭೂಮಿಗೌಡ, ಶಿವಾಜಿ ಗಣೇಶನ್ ಸೇರಿದಂತೆ 9 ಮಂದಿಗೆ ಪುರಸ್ಕಾರ

ಮಂಗಳೂರು: ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಸಾಹಿತ್ಯ, ಪತ್ರಿಕೋದ್ಯಮ, ಕಲೆ, ಶಿಕ್ಷಣ, ಸಂಗೀತ, ಮಾಧ್ಯಮ ಮತ್ತು ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ನೀಡುವ 2023ನೇ ರಾಜ್ಯ ಮಟ್ಟದ ಸಂದೇಶ ಪ್ರಶಸ್ತಿಗೆ 9 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ನಿರ್ದೇಶಕ ಫಾ.ಸುದೀಪ್ ಪೌಲ್ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಪ್ರಶಸ್ತಿಗೆ ಆಯ್ಕೆಯಾದವರ ವಿವರ ಪ್ರಕಟಿಸಿದರು.

ಸಂದೇಶ ಸಾಹಿತ್ಯ ಪ್ರಶಸ್ತಿ(ಕನ್ನಡ) -ರಾಘವೇಂದ್ರ ಪಾಟಿಲ್, ಸಂದೇಶ ಸಾಹಿತ್ಯ ಪ್ರಶಸ್ತಿ (ಕೊಂಕಣಿ)- ಆಂಡ್ರೂ ಎಲ್. ಡಿಕುನ್ಹಾ , ಸಂದೇಶ ಸಾಹಿತ್ಯ ಪ್ರಶಸ್ತಿ (ತುಳು) ಡಾ.ಕೆ.ಚಿನ್ನಪ್ಪಗೌಡ, ಸಂದೇಶ ಮಾಧ್ಯಮ ಪ್ರಶಸ್ತಿ (ಪತ್ರಿಕೋದ್ಯಮ) ಶಿವಾಜಿ ಗಣೇಶನ್ , ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ - ಜೋಯ್ಸಿ ಒಝಾರಿಯೋ, ಸಂದೇಶ ಕಲಾ ಪ್ರಶಸ್ತಿ - ಡಾ.ಎಂ.ಎಸ್.ಮೂರ್ತಿ , ಸಂದೇಶ ಶಿಕ್ಷಣ ಪ್ರಶಸ್ತಿ - ಕೋಟಿ ಗಾನಹಳ್ಳಿ ರಾಮಯ್ಯ, ಸಂದೇಶ ವಿಶೇಷ ಪ್ರಶಸ್ತಿ - ಪ್ರೇರಣಾ ರಿಸೋರ್ಸ್ ಸೆಂಟರ್, ಸಂದೇಶ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ - ಸಬೀಹಾ ಭೂಮಿಗೌಡ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಡಾ.ವಲೇರಿಯನ್ ರೋಡ್ರಿಗಸ್ (ಅಧ್ಯಕ್ಷ), ಡಾ.ನಾ.ದಾ.ಶೆಟ್ಟಿ, ಕನ್ಸೆಪ್ಟಾ ಆಳ್ವ, ಚಂದ್ರಕಲಾ ನಂದಾವರ ಮತ್ತು ರಫೀಕ್ ಮಾಸ್ಟರ್ ನೇತೃತ್ವದ ಆಯ್ಕೆ ಸಮಿತಿಯು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಈ ವರ್ಷದ ಪ್ರಶಸ್ತಿ ಕಾರ್ಯಕ್ರಮವು ಫೆಬ್ರವರಿ 7ರಂದು ಸಂಜೆ 5.30 ಕ್ಕೆ ನಂತೂರಿನ ಸಂದೇಶ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ಸಂದೇಶ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಬಳ್ಳಾರಿ ಬಿಷಪ್ ಅ ವಂ ಹೆನ್ರಿ ಡಿಸೋಜ ಪ್ರಶಸ್ತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನ ಮಾಡುವರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮುಖ್ಯ ಅತಿಥಿಯಾಗಿರುತ್ತಾರೆ. ಮಂಗಳೂರು ಬಿಷಪ್ ಅ. ವಂ. ಪೀಟರ್ ಪಾವ್ಲ್ ಸಲ್ಡಾನ್ಹ, ಉಡುಪಿ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ, ಸಂದೇಶ ಪ್ರತಿಷ್ಠಾನದ ವಿಶ್ವಸ್ಥ ರೊಯ್ ಕ್ಯಾಸ್ತಲಿನೊ ಹಾಗೂ ವಂ.ಫಾ. ಐವನ್ ಪಿಂಟೊ, ಸಂದೇಶ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ವಲೇರಿಯನ್ ರೋಡ್ರಿಗಸ್ ಭಾಗವಹಿಸಲಿದ್ದಾರೆ ಎಂದು ಸುದೀಪ್ ಪೌಲ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂದೇಶ ಪ್ರತಿಷ್ಠಾನದ ವಿಶ್ವಸ್ಥ ರೋಯ್ ಕ್ಯಾಸ್ತಲಿನೊ, ಸಂದೇಶ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಡಾ.ವಲೇರಿಯನ್ ರೊಡ್ರಿಗಸ್, ರಫೀಕ್ ಮಾಸ್ಟರ್, ಪ್ರಮುಖರಾದ ಸೈಮನ್ ಕುವೆಲ್ಲೊ ಉಪಸ್ಥಿತರಿದ್ದರು.

share
Next Story
X