Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನಕಲಿ’ ವಿಷಯಗಳನ್ನು ಆನ್‌ಲೈನ್‌ ನಲ್ಲಿ...

‘ನಕಲಿ’ ವಿಷಯಗಳನ್ನು ಆನ್‌ಲೈನ್‌ ನಲ್ಲಿ ಹಾಕುವಂತಿಲ್ಲ: ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಹೊಸ ನಿಯಮ

18 Jan 2023 8:59 PM IST
share
‘ನಕಲಿ’ ವಿಷಯಗಳನ್ನು ಆನ್‌ಲೈನ್‌ ನಲ್ಲಿ ಹಾಕುವಂತಿಲ್ಲ: ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಹೊಸ ನಿಯಮ

ಹೊಸದಿಲ್ಲಿ, ಜ. 18: ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಗಳು ಯವುದೇ ವಿಷಯವನ್ನು ‘ನಕಲಿ’ ಎಂಬುದಾಗಿ ತೀರ್ಮಾನಿಸಿದರೆ ಅದನ್ನು ಭಾರತದಲ್ಲಿ ಕಾರ್ಯಾಚರಿಸುತ್ತಿರುವ ವೆಬ್‌ಸೈಟ್‌(Website)ಗಳು ಪ್ರಸಾರಿಸುವಂತಿಲ್ಲ ಎಂಬ ಪ್ರಸ್ತಾವವೊಂದನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮುಂದಿಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಅದು ಮುಂದಾಗಿದೆ.

ಸಚಿವಾಲಯವು ಪ್ರಸ್ತಾವಿತ ತಿದ್ದುಪಡಿಯನ್ನು ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ತೆರೆದಿಟ್ಟಿದೆ.

ಮಾಹಿತಿ ತಂತ್ರಜ್ಞಾನ (ಇಂಟರ್ಮೀಡಿಯರಿ ಮಾರ್ಗದರ್ಶಿ ಸೂತ್ರಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳ ನಿಯಂತ್ರಣಕ್ಕೆ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು, ಇಂಟರ್ನೆಟ್ ಸೇವೆ ಪೂರೈಕೆದಾರರು, ಆನ್ಲೈನ್ ಮಾರುಕಟ್ಟೆಗಳು ಹಾಗೂ ಸುದ್ದಿ ವೆಬ್‌ಸೈಟ್‌ಗಳು ಮತ್ತು ಸ್ಟ್ರೀಮಿಂಗ್ ಸೇವೆಗಳನ್ನೊಳಗೊಂಡ ಡಿಜಿಟಲ್ ಮೀಡಿಯ ಪ್ರಸಾರಕರು ಒಳಪಡುತ್ತಾರೆ.

ಪತ್ರಿಕಾ ಮಾಹಿತಿ ಬ್ಯೂರೋ (PIB) ಅಥವಾ ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಸಂಸ್ಥೆಯ ‘‘ವಾಸ್ತವಾಂಶ ಪರಿಶೀಲನಾ ಘಟಕವು’’ ನಕಲಿ ಎಂಬುದಾಗಿ ತೀರ್ಮಾನಿಸಿದ ಯಾವುದೇ ವಿಷಯವನ್ನು ವೆಬ್‌ಸೈಟ್‌ಗಳು ತೆಗೆದುಹಾಕುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿಯೊಂದನ್ನು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮಂಗಳವಾರ ಸೂಚಿಸಿದೆ.

ಸರಕಾರವನ್ನು ಟೀಕಿಸುವ ಸುದ್ದಿಗಳನ್ನು ‘ನಕಲಿ’ ಎನ್ನುವ ಪಿಐಬಿ!

2019ರಲ್ಲಿ ಸ್ಥಾಪನೆಯಾಗಿರುವ ಪತ್ರಿಕಾ ಮಾಹಿತಿ ಬ್ಯೂರೋದ ವಾಸ್ತವಾಂಶ ಪರಿಶೀಲನಾ ಘಟಕವು, ವಾಸ್ತವಾಂಶಗಳನ್ನು ಪರಿಶೀಲಿಸುವ ಬದಲು ಸರಕಾರವನ್ನು ಟೀಕಿಸುವ ಸುದ್ದಿಗಳನ್ನು ‘ನಕಲಿ’ ಎಂಬುದಾಗಿ ಬಿಂಬಿಸುತ್ತಿದೆ ಎಂಬ ಆರೋಪಗಳು ನಿರಂತರವಾಗಿ ಕೇಳಿಬರುತ್ತಿವೆ.

ಪ್ರಧಾನಿ ನರೇಂದ್ರ ಮೋದಿ ಕೊರೋನ ವೈರಸ್ ಲಾಕ್ಡೌನ್ ಘೋಷಿಸಿದ ಹಿಂದಿನ ವಾರದಲ್ಲಿ, ಕೋವಿಡ್ -19 ಕುರಿತ ರಾಷ್ಟ್ರೀಯ ಕಾರ್ಯಪಡೆಯು ಒಂದು ಬಾರಿಯೂ ಸಭೆ ಸೇರಿಲ್ಲ ಎಂಬುದಾಗಿ ‘ಕ್ಯಾರವಾನ್’ ಪತ್ರಿಕೆಯು 2020 ಎಪ್ರಿಲ್ನಲ್ಲಿ ಆರೋಪಿಸಿತ್ತು. ಆದರೆ, ವಾಸ್ತವಾಂಶ ತನಿಖಾ ಘಟಕವು ಈ ವರದಿಯನ್ನು ‘‘ಸುಳ್ಳು ಮತ್ತು ಆಧಾರರಹಿತ’’ ಎಂಬುದಾಗಿ ತೀರ್ಮಾನಿಸಿತ್ತು.

ಆಗ, ನಿಮ್ಮ ತೀರ್ಮಾನವನ್ನು ಸಮರ್ಥಿಸಲು ಕಾರ್ಯಪಡೆಯ ಸಭೆಯ ನಡಾವಳಿಗಳನ್ನು ಒದಗಿಸುವಂತೆ ‘ಕ್ಯಾರವಾನ್’ ವರದಿಗಾರ್ತಿ ವಿದ್ಯಾ ಕೃಷ್ಣನ್ ಪಿಐಬಿಯನ್ನು ಕೋರಿದ್ದರು. ಆದರೆ, ನನಗೆ ಆ ನಡಾವಳಿಗಳು ಈವರಗೆ ಬಂದಿಲ್ಲ ಎಂಬುದಾಗಿ ಅವರು ಬಳಿಕ ‘ನ್ಯೂಸ್ಲಾಂಡ್ರಿ’ಗೆ ಹೇಳಿದ್ದಾರೆ.

share
Next Story
X