Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರ್ಪೊರೇಟ್ ಕಂಪೆನಿಗಳ ಪರ ನಿಂತ ಸರಕಾರ:...

ಕಾರ್ಪೊರೇಟ್ ಕಂಪೆನಿಗಳ ಪರ ನಿಂತ ಸರಕಾರ: ತಪನ್ ಸೇನ್ ಆಕ್ರೋಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿಐಟಿಯು 17ನೆ ಅಖಿಲ ಭಾರತ ಸಮ್ಮೇಳನ

18 Jan 2023 9:37 PM IST
share
ಕಾರ್ಪೊರೇಟ್ ಕಂಪೆನಿಗಳ ಪರ ನಿಂತ ಸರಕಾರ: ತಪನ್ ಸೇನ್ ಆಕ್ರೋಶ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿಐಟಿಯು 17ನೆ ಅಖಿಲ ಭಾರತ ಸಮ್ಮೇಳನ

ಬೆಂಗಳೂರು, ಜ.18: ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ, ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ದೇಶದ ಜನರು ದಿವಾಳಿ ಆಗುತ್ತಿದ್ದಾರೆ ಎಂದು ಸಿಐಟಿಯು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬುಧವಾರ ನಗರದ ಅರಮನೆ ಮೈದಾನದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು)ನ 17ನೆ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರದ ವಿಷಕಾರಿ ನೀತಿಗಳ ಪರಿಣಾಮಗಳ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಾಶವಾಗುತ್ತಿವೆ. ಸರಕಾರದ ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸುತ್ತಿದೆ. ಇದನ್ನು ಸಮರ್ಥವಾಗಿ ಪ್ರಶ್ನಿಸಬೇಕಾದ ದೇಶದ ಮಾಧ್ಯಮಗಳು ಸರಕಾರದ ಬೆಂಬಲ ನಿಂತಿವೆ ಎಂದರು. 

ಆಳುವ ಸರಕಾರವು ಜನರ ಒಗ್ಗಟ್ಟನ್ನು ಮುರಿಯುವ ವಿಭಜನಕಾರಿ ನೀತಿಗಳನ್ನು ಹೇರುತ್ತಾ ಸಮಾಜದ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡುತ್ತಿದೆ. ದೇಶದ ಹಿತಾಸಕ್ತಿಗೆ ಮತ್ತು ದುಡಿಯುವ ವರ್ಗದ ವರ್ಗಗಳಿಗೆ ವಿರುದ್ಧವಾಗಿ ಇಂತಹ ಕ್ರಿಮಿನಲ್ ದಾಳಿಗಳನ್ನು ನಡೆಸುತ್ತಿರುವ ಸರಕಾರವನ್ನು ರೈತ-ಕಾರ್ಮಿಕ ಚಳುವಳಿಯನ್ನು ರೂಪಿಸಬೇಕು ಎಂದು ಅವರು ಹೇಳಿದರು. 

ನವ ಉದಾರೀಕರಣ ನೀತಿಗಳ ಸವಾಲು ಕೇವಲ ಕಾರ್ಮಿಕ ವರ್ಗಕ್ಕೆ ಮಾತ್ರ ಸೀಮಿತವಲ್ಲ. ಇದು ಇಡೀ ಮನುಕುಲದ ಮುಂದಿನ ಸವಾಲಾಗಿದೆ. ಪ್ರಜಾಸತ್ತಾತ್ಮಕ ಸಮಾಜಕ್ಕೆ ಅದು ಮಾರಕವಾಗಲಿದೆ. ಕೆಲವು ಸ್ವದೇಶಿ ಮತ್ತು ವಿದೇಶಿ ಕಾರ್ಪೊರೇಟ್ ಹಿತರಕ್ಷಣೆಗಾಗಿ, ವಿಶಾಲ ಜನ ಸಮುದಾಯಗಳ ಜನರ ಹಿತವನ್ನು ಬಲಿ ಕೊಡಲಾಗುತ್ತಿದೆ ಎಂದು ಹೇಳಿದರು.

ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಡಾ.ಕೆ.ಹೇಮಲತಾ ಮಾತನಾಡಿ, ಭಾರತದಲ್ಲಿ ಹೆಚ್ಚುತ್ತಿರುವ ಅಸಮಾನತೆ, ಸಂಪತ್ತಿನ ಕೇಂದ್ರೀಕರಣ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ವರ್ಗದ ಐಕ್ಯ ಹೋರಾಟವನ್ನು ಬಲಗೊಳಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಲ್‍ಐಸಿ ನೌಕರರ ಮಾಜಿ ರಾಷ್ಟೀಯ ಅಧ್ಯಕ್ಷ ಅಮಾನುಲ್ಲಾ ಖಾನ್, ಮೀನಾಕ್ಷಿ ಸುಂದರಂ, ಪಂಬೀಸ್ ಕ್ರಿಸ್ಟಿಸಿಸ್, ಕೆ.ಸುಬ್ಬರಾವ್, ಎಸ್.ವರಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.  

‘ದೇಶದಲ್ಲಿ ಇಂದಿನ ಪರಿಸ್ಥಿತಿ ತುಂಬಾ ವಿಷಮವಾಗಿದೆ. ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ದಿನಗೂಲಿ ನೌಕರರು ಉದ್ಯೋಗ ಸಿಗದೆ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ. ಆದರೂ ಮೋದಿ ನೇತೃತ್ವದ ಕೇಂದ್ರ ಸರಕಾರ ಖಾಸಗೀಕರಣದ ಹಾದಿಯನ್ನು ಕೈಬಿಟ್ಟಿಲ್ಲ’

-ಅಮರ್ಜಿತ್ ಕೌರ್ ಎಐಟಿಯುಸಿಯ ಪ್ರತಿನಿಧಿ

share
Next Story
X