ಯಾದಗಿರಿ ಜಿಲ್ಲೆಯ ಕೊಡೇಕಲ್ ಗ್ರಾಮಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಯಾದಗಿರಿ : ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ನೀರಾವರಿ, ಕುಡಿಯುವ ನೀರು ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಬಳಿಕ ಅಲ್ಲಿಂದ ಯಾದಗಿರಿ ಜಿಲ್ಲೆಯ ಕೊಡೆಕಲ್ ಬಳಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ಗೆ ಬಂದು ಇಳಿದಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ಅವರ ಜೊತಗಿದ್ದರು.
ಮಧ್ಯಾಹ್ನ 12 ಗಂಟೆಗೆ ಯಾದಗಿರಿ ಜಿಲ್ಲೆಯ ಕೊಡೇಕಲ್ನಲ್ಲಿ ನೀರಾವರಿ, ಕುಡಿಯುವ ನೀರು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಆನಂತರ, ಮಧ್ಯಾಹ್ನ 2.15ಕ್ಕೆ ಕಲಬುರಗಿ ಜಿಲ್ಲೆಯ ಮಳಖೇಡ್ಗೆ ಆಗಮಿಸುವ ಪ್ರಧಾನಮಂತ್ರಿ, ಹೊಸದಾಗಿ ಘೋಷಣೆಯಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರ ದಿನಾಂಕ 19-01-2023, ಗುರುವಾರ ಪ್ರವಾಸದ ವಿವರ. pic.twitter.com/pMdRlGEtT5
— CM of Karnataka (@CMofKarnataka) January 19, 2023