Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾವು ತಯಾರಿಸಿದ ಅಡುಗೆಯನ್ನು ಬಿಜೆಪಿಯವರು...

ನಾವು ತಯಾರಿಸಿದ ಅಡುಗೆಯನ್ನು ಬಿಜೆಪಿಯವರು ಬಡಿಸುತ್ತಿದ್ದಾರೆ: ಸಿದ್ದರಾಮಯ್ಯ

19 Jan 2023 2:55 PM IST
share
ನಾವು ತಯಾರಿಸಿದ ಅಡುಗೆಯನ್ನು ಬಿಜೆಪಿಯವರು ಬಡಿಸುತ್ತಿದ್ದಾರೆ: ಸಿದ್ದರಾಮಯ್ಯ

ಹುಬ್ಬಳ್ಳಿ: 'ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು. ಇಂದು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಕಂದಾಯ ಗ್ರಾಮ ಮಾಡಬೇಕೆಂದು ಖರ್ಗೆ ಅವರು ಪ್ರಯತ್ನ ಮಾಡಿದ್ದರು' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ಮಾಡಿಟ್ಟಿದ್ದ ಅಡುಗೆಯನ್ನು ಬಿಜೆಪಿಯವರು ಬಡಿಸುತ್ತಿದ್ದಾರೆ. ಪ್ರಧಾನಿ ಮೋದಿಗೆ ತಪ್ಪು ಸಂದೇಶ ಕೊಟ್ಟು ನಾವೇ ಮಾಡಿದ್ದು ಎಂದು ಹೇಳಿತ್ತಿದ್ದಾರೆ' ಎಂದರು.

'ಅನೇಕ ದಶಕಗಳ ಕಾಲ ಲಂಬಾಣಿ ತಾಂಡಾ, ಗೊಲ್ಲರು ಮುಂತಾದ ಪಶುಪಾಲಕ ಸಮುದಾಯಗಳು ಹಾಗೂ ಇತರರು ವಾಸಿಸುವ ಹಟ್ಟಿ, ಪಾಳ್ಯ, ಹಾಡಿ, ಮಜರೆ , ಕಾಲೋನಿ ಮುಂತಾದ ಸ್ವತಂತ್ರ ಅಸ್ತಿತ್ವವಿಲ್ಲದ, ಮುಖ್ಯ ಕಂದಾಯ ಗ್ರಾಮಗಳ ಜೊತೆ ಸೇರಿ ಹೋಗಿ ಅಭಿವೃದ್ಧಿಯನ್ನೆ ಕಾಣದಾಗಿದ್ದ ಅನೇಕ ಹಿಂದುಳಿದ ಮತ್ತು ದಲಿತ ಸಮುದಾಯಗಳ ಜನರ ಕಲ್ಯಾಣಕ್ಕೆಂದು ನಮ್ಮ ಸರ್ಕಾರ ಸ್ವತಂತ್ರ ಕಂದಾಯ ಗ್ರಾಮಗಳ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಆಗ ಈ ಯೋಜನೆಗೆ ಬಿಜೆಪಿಯ ಹಲವರು ವಿರೋಧ ಮಾಡಿದ್ದರು' ಎಂದು ತಿಳಿಸಿದರು.

'ಶತಮಾನಗಳ ಕಾಲದಿಂದ ವಾಸಿಸುತ್ತಿದ್ದರೂ ಈ ಜಾಗಗಳ ಮೇಲೆ ಈ ದಮನಿತ ಸಮುದಾಯಗಳಿಗೆ ಯಾವುದೆ ಹಕ್ಕುಗಳು ಇರಲಿಲ್ಲ. ಅರಣ್ಯ ಭೂಮಿ, ಸರ್ಕಾರಿ ಭೂಮಿ ಹಾಗೂ ಇತರೆ ಯಾರದೊ ಖಾಸಗಿ ಭೂಮಿಯಲ್ಲಿ ಈ ಜನರು ವಾಸಿಸುತ್ತಿದ್ದರು. ಅದೆಷ್ಟೊ ವರ್ಷಗಳಿಂದ ವಾಸಿಸುತ್ತಿದ್ದರೂ ಸಹ ಜಾಗ ಖಾಲಿ ಮಾಡುವಂತೆ ಅನೇಕರಿಗೆ ಚಿತ್ರಹಿಂಸೆಗಳನ್ನು ಮಾಡಿದ್ದ ಉದಾಹರಣೆಗಳೂ ಇವೆ' ಎಂದು ಆರೋಪಿಸಿದರು. 

'ಇದನ್ನು ತಪ್ಪಿಸುವ ಉದ್ದೇಶದಿಂದ ನಮ್ಮ ಕಾಂಗ್ರೆಸ್ ಸರ್ಕಾರವು ಈ ಸಮಸ್ಯೆಯನ್ನು ಅಧ್ಯಯನ ಮಾಡಿ ವರದಿ ನಿಡಲು ನರಸಿಂಹಯ್ಯ ಸಮಿತಿಯನ್ನು ನೇಮಕ ಮಾಡಿತ್ತು. ನರಸಿಂಹಯ್ಯನವರ ಸಮಿತಿ ವರದಿ ನೀಡಿದ ಕೂಡಲೆ ನಾವು ಭೂ ಕಂದಾಯ ಕಾಯ್ದೆಯ ಸೆಕ್ಷನ್ 94ಡಿ ಮತ್ತು ಭೂ ಸುಧಾರಣಾ ಕಾಯ್ದೆಯ 38ಎ ಗಳಿಗೆ ತಿದ್ದುಪಡಿ ತಂದೆವು ಹಾಗೂ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಅರಣ್ಯ ಹಕ್ಕು ಕಾಯ್ದೆಗೆ ನಿಯಮಾವಳಿಗಳನ್ನು ರೂಪಿಸಿದ್ದೆವು' ಎಂದು ತಿಳಿಸಿದರು. 

'ಇಷ್ಟನ್ನು ಮಾಡಿ ಸುಮ್ಮನಾಗಲಿಲ್ಲ. 2017 ರಿಂದ ಅನುಷ್ಠಾನಕ್ಕೆ ಮುಂದಾದೆವು. ಕೇವಲ 11 ತಿಂಗಳಲ್ಲಿ 2800ಕ್ಕೂ ಅಧಿಕ ದಾಖಲೆ ರಹಿತ ಗ್ರಾಮಗಳನ್ನು ಗುರ್ತಿಸಿ ಅವುಗಳನ್ನು ಕಂದಾಯ ಗ್ರಾಮ ಮಾಡಲು 2300 ಪ್ರಸ್ತಾವನೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ತರಿಸಿಕೊಂಡು 1300ಕ್ಕೂ ಹೆಚ್ಚಿನ ಗ್ರಾಮಗಳನ್ನು ಕಂದಾಯ ಗ್ರಾಮ ಎಂದು ಅಧಿಸೂಚನೆ ಹೊರಡಿಸಿದ್ದೆವು. ಸ್ವಂತ ಕೆಲಸ ಮಾಡಿ ಗೊತ್ತಿಲ್ಲದ ಬಿಜೆಪಿಯವರು ನಾವು ಮಾಡಿದ್ದರ ಕ್ರೆಡಿಟ್ಟು ತೆಗೆದುಕೊಳ್ಳಲು ಹೊರಟಿದ್ದಾರೆ. ಇದಕ್ಕಿಂತ ದುರಂತ ಬೇರೇನಾದರೂ ಇದೆಯೆ? ಎಂದು ನರೇಂದ್ರ ಮೋದಿಯವರೆ ಹೇಳಬೇಕು' ಎಂದು ಸಿದ್ದರಾಮಯ್ಯ ಆಗ್ರಹಿಸಿದರು. 

share
Next Story
X