Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಲಿಮ್, ಟ್ರಿಮ್ ಆಗಿದ್ದವರು ಬೇಕಿದ್ದರೆ...

ಸ್ಲಿಮ್, ಟ್ರಿಮ್ ಆಗಿದ್ದವರು ಬೇಕಿದ್ದರೆ ಫ್ಯಾಶನ್ ಶೋಗೆ ಹೋಗಿ: ಸರ್ಫರಾಝ್ ಖಾನ್ ನಿರ್ಲಕ್ಷಿಸಿದ್ದಕ್ಕೆ ಗವಾಸ್ಕರ್ ಕಿಡಿ

20 Jan 2023 3:00 PM IST
share
ಸ್ಲಿಮ್, ಟ್ರಿಮ್ ಆಗಿದ್ದವರು ಬೇಕಿದ್ದರೆ ಫ್ಯಾಶನ್ ಶೋಗೆ ಹೋಗಿ: ಸರ್ಫರಾಝ್ ಖಾನ್ ನಿರ್ಲಕ್ಷಿಸಿದ್ದಕ್ಕೆ ಗವಾಸ್ಕರ್ ಕಿಡಿ

ಹೊಸದಿಲ್ಲಿ: ದೇಶೀಯ ಕ್ರಿಕೆಟ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ  ಬ್ಯಾಟರ್ ಸರ್ಫರಾಝ್ ಖಾನ್ ಅವರನ್ನು ಚೇತನ್ ಶರ್ಮಾ ನೇತೃತ್ವದ ಅಖಿಲ ಭಾರತ ಆಯ್ಕೆ ಸಮಿತಿಯು ನಿರ್ಲಕ್ಷಿಸಿದ್ದಕ್ಕಾಗಿ ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್(Sunil Gavaskar) ಅವರು ಟೀಕಿಸಿದ್ದಾರೆ.

ಆಸ್ಟ್ರೇಲಿಯ ವಿರುದ್ಧ ಟೆಸ್ಟ್ ಸರಣಿಗೆ ಆಯ್ಕೆ ಸಮಿತಿಯು ತನ್ನನ್ನು ಕಡೆಗಣಿಸಿದ ಬಳಿಕ ಸರ್ಫರಾಝ್  ದಿಲ್ಲಿ ವಿರುದ್ಧ ನಡೆದ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಮುಂಬೈ ಪರ ಮತ್ತೊಂದು ಶತಕವನ್ನು ಸಿಡಿಸಿದ್ದಾರೆ.

ದೇಶೀಯ ಕ್ರಿಕೆಟ್ ನಲ್ಲಿ ಬ್ಯಾಟ್‌ನೊಂದಿಗೆ ಅತ್ಯುತ್ತಮ ಫಾರ್ಮ್‌ನ ಹೊರತಾಗಿಯೂ ಸರ್ಫರಾಝ್ ಅವರನ್ನು ತಂಡದಿಂದ ಹೊರಗಿಟ್ಟಿರುವುದರ ಬಗ್ಗೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಇದೀಗ, ಗವಾಸ್ಕರ್ ಕೂಡ ಇನ್-ಫಾರ್ಮ್ ಬ್ಯಾಟರ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು, ಆಯ್ಕೆದಾರರಿಗೆ  "ಸ್ಲಿಮ್ ಹಾಗೂ  ಟ್ರಿಮ್ ಇದ್ದವರು ಬೇಕಾಗಿದ್ದರೆ  ಮಾಡೆಲ್ ಗಳನ್ನು ಆಯ್ಕೆ ಮಾಡಬೇಕು'' ಎಂದು ಸಲಹೆ ನೀಡಿದರು.

" ಕ್ರಿಕೆಟ್ ಗೆ ಫಿಟ್ನೆಸ್   ಇರುವುದು ಮುಖ್ಯ. ಆದರೆ ನೀವು ಸ್ಲಿಮ್ ಮತ್ತು ಟ್ರಿಮ್ ಹುಡುಗರನ್ನು ಮಾತ್ರ ಹುಡುಕುತ್ತಿದ್ದರೆ, ನೀವು ಫ್ಯಾಶನ್ ಶೋಗೆ ಹೋಗಿ, ಕೆಲವು ಮಾಡಲ್ ಗಳನ್ನು ಆರಿಸಿ. ನಂತರ ಅವರ ಕೈಯಲ್ಲಿ ಬ್ಯಾಟ್ ಹಾಗೂ  ಬಾಲ್ ನೀಡಿ ನಂತರ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಿ. ನಿಮ್ಮಲ್ಲಿ ಎಲ್ಲಾ ಆಕಾರಗಳು ಹಾಗೂ ಗಾತ್ರಗಳಲ್ಲಿ ಕ್ರಿಕೆಟಿಗರು ಇದ್ದಾರೆ. ಗಾತ್ರವನ್ನು ಮಾತ್ರ ನೋಡಬೇಡಿ, ರನ್ ಹಾಗೂ ವಿಕೆಟ್‌ಗಳತ್ತಲೂ  ಗಮನ ನೀಡಿ" ಎಂದು ಗವಾಸ್ಕರ್ 'ಇಂಡಿಯಾ ಟುಡೇ'ಗೆ ತಿಳಿಸಿದರು.

ಸರ್ಫರಾಝ್ ಖಾನ್ ತುಂಬಾ ದಪ್ಪಗಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಆಯ್ಕೆ ಮಾಡಲಾಗಿಲ್ಲ ಎಂಬ ಮಾತು ಕೇಳಿ ಬಂದಿದ್ದು, ಆ ಮಾತಿಗೆ ಗವಾಸ್ಕರ್ ತಕ್ಕ ತಿರುಗೇಟು ನೀಡಿದ್ದಾರೆ.

share
Next Story
X