Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ...

ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ: ಡಿ.ಕೆ.ಶಿವಕುಮಾರ್ ಭರವಸೆ

20 Jan 2023 6:59 PM IST
share
ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ: ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು, ಜ.20: ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂಬ ಬೇಡಿಕೆ ನಮ್ಮ ಮುಂದಿಟ್ಟಿದ್ದೀರಾ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರ ಸೇರ್ಪಡೆ ಮಾಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಶುಕ್ರವಾರ ನಗರದ ಟೌನ್‍ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಬೀದಿ ಬದಿ ವ್ಯಾಪಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಬೀದಿ ಬದಿ ವ್ಯಾಪಾರಿಗಳ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದಂತೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಜವಾಬ್ದಾರಿ. ಈ ದೇಶಕ್ಕೆ ನೀವೆಲ್ಲರೂ ಆಸ್ತಿ ಎಂದರು.

ಮಾಲ್ ಗಳಲ್ಲಿ, ಎಸಿ ಮಳಿಗೆಗಳಲ್ಲಿ ಖರೀದಿ ಮಾಡುವುದು ಒಂದು ಕಡೆಯಾದರೆ, ಅದೇ ಗುಣಮಟ್ಟದ ಆಹಾರ, ವಸ್ತುಗಳನ್ನು ಅವರಿಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿಕೊಂಡು ನೀವು ಬರುತ್ತಿದ್ದೀರಿ. ಕಾಂಗ್ರೆಸ್ ಪಕ್ಷ ಈ ವರ್ಗದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷ ಸದಾ ನೊಂದು ಬೆಂದ ಬಡವರ ಪರವಾದ ಪಕ್ಷ. ನಿಮ್ಮ ಬದುಕನ್ನು ದಿನ ಬಡ್ಡಿ ನಿಯಂತ್ರಣದಿಂದ ತಪ್ಪಿಸಬೇಕು ಎಂದು ಅವರು ಹೇಳಿದರು. 

ಪಾಲಿಕೆ ಹಾಗೂ ಪೊಲೀಸರಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ನಿಮಗೆ ಪ್ರತ್ಯೇಕ ಮಾರುಕಟ್ಟೆ ಸ್ಥಾಪಿಸಿದರೆ ನೀವು ಅಲ್ಲಿ ಹೋಗಲು ಸಿದ್ಧರಿಲ್ಲ. ಹೀಗಾಗಿ ನಗರದ ಸೌಂದರ್ಯ ಕಾಪಾಡಿ, ನಿಮಗೂ ರಕ್ಷಣೆ ಸಿಗಬೇಕು. ಇದನ್ನು ಯಾವ ರೀತಿ ಮಾಡಬೇಕು ಎಂದು ನಿಮ್ಮ ಜತೆಯೇ ಚರ್ಚೆ ಮಾಡಿ ನಿರ್ಧರಿಸುತ್ತೇವೆ ಎಂದು ಅವರು ಹೇಳಿದರು.

ನಿಮ್ಮ ನೆಮ್ಮದಿಯ ಬದುಕಿಗಾಗಿ ನಿಮ್ಮ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣ ಸಿಗಲು ಚುನಾವಣೆ ಪ್ರಣಾಳಿಕೆಯಲ್ಲಿ ಕಾರ್ಯಕ್ರಮ ನೀಡಲಾಗುವುದು. ಕೋವಿಡ್ ಸಂದರ್ಭದಲ್ಲಿ ನಮ್ಮ ನಾಯಕರಾದ ರಾಮಲಿಂಗಾ ರೆಡ್ಡಿ, ಪದ್ಮಾವತಿ, ದೇವರಾಜ್, ಝಮೀರ್, ಕೃಷ್ಣ ಭೈರೆಗೌಡ ಸೇರಿದಂತೆ ಹಲವರು ತಮ್ಮ ಜೇಬಿನ ಹಣದಿಂದ ನಿಮಗೆ ನೆರವು ನೀಡಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಬಿಜೆಪಿಗೆ ಅಧಿಕಾರ ಇದ್ದಾಗ ಜನರಿಗೆ ಯಾವುದೇ ಸಹಾಯ ಮಾಡಲಿಲ್ಲ. ನಾವು ಅನ್ನಭಾಗ್ಯ, ಶಾಲೆಯಲ್ಲಿ ಬಿಸಿಯೂಟ ಕಾರ್ಯಕ್ರಮ ಹೀಗೆ ಜನಪರ ಕಾರ್ಯಕ್ರಮ ಕೊಟ್ಟಾಗ ಜಾತಿ ನೋಡಿ ಕೊಡಲಿಲ್ಲ. ಹೀಗೆ ಕಾಂಗ್ರೆಸ್ ಪಕ್ಷ ನಿಮ್ಮ ಬದುಕಲ್ಲಿ ಬದಲಾವಣೆ ತರಲು ಬದ್ಧವಾಗಿದೆ. ನೀವು ನಮಗೆ ಶಕ್ತಿ ತುಂಬಬೇಕು ಎಂದು ಅವರು ಕರೆ ನೀಡಿದರು.

share
Next Story
X