Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ಥಿರತೆಯ ಹಳಿಗೆ ಮರಳಲು ಭಾರತದ ನೆರವು:...

ಸ್ಥಿರತೆಯ ಹಳಿಗೆ ಮರಳಲು ಭಾರತದ ನೆರವು: ಶ್ರೀಲಂಕಾ ಶ್ಲಾಘನೆ

20 Jan 2023 11:21 PM IST
share
ಸ್ಥಿರತೆಯ ಹಳಿಗೆ ಮರಳಲು ಭಾರತದ ನೆರವು: ಶ್ರೀಲಂಕಾ ಶ್ಲಾಘನೆ

ಕೊಲಂಬೊ, ಜ.20: ಕಳೆದ ವರ್ಷ 3.9 ಶತಕೋಟಿ ಡಾಲರ್ ಮೊತ್ತದ ಆವರ್ತ ಸಾಲ ಒದಗಿಸಿರುವ ಜತೆಗೆ ಐಎಂಎಫ್ನಿಂದ ಸಾಲ ಪಡೆಯಲು ನೆರವಾಗುವ ಮೂಲಕ ಭಾರತ ಆಪತ್ಕಾಲಕ್ಕೆ ನಮ್ಮ ನೆರವಿಗೆ ಧಾವಿಸಿದೆ. ಸ್ಥಿರತೆಯ ಹಳಿಗೆ ನಾವು ಮರಳುವಲ್ಲಿ, ಅಗತ್ಯದ ವಸ್ತುಗಳ ಆಮದಿನಲ್ಲಿ ಭಾರತದ ಸಕಾಲಿಕ ನೆರವು ಪ್ರಮುಖವಾಗಿದೆ. ಕಾಳಜಿ ಮತ್ತು ವಿವೇಚನೆಯುಳ್ಳ ಮಿತ್ರರನ್ನು ಹೊಂದಿರುವುದು ನಮ್ಮ ಅದೃಷ್ಟವಾಗಿದೆ ಎಂದು ಶ್ರೀಲಂಕಾ ಶುಕ್ರವಾರ ಅಭಿನಂದನೆ ಸಲ್ಲಿಸಿದೆ.

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದ್ವೀಪರಾಷ್ಟ್ರಕ್ಕೆ ತಾನು ನೀಡಿರುವ ಸಾಲವನ್ನು ಪುನರ್ರಚಿಸುವುದಾಗಿ ಭಾರತವು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್)ಗೆ ಭರವಸೆ ನೀಡಿರುವುದು ಶ್ರೀಲಂಕಾಕ್ಕೆ ಐಎಂಎಫ್ ಸಾಲ ಪಡೆಯಲು ಪೂರಕವಾಗಿದೆ. ಅಲ್ಲದೆ ಶ್ರೀಲಂಕಾದ ಅರ್ಥವ್ಯವಸ್ಥೆಯ ಚೇತರಿಕೆಗೆ ಆ ದೇಶದಲ್ಲಿ ಹೂಡಿಕೆ ಹೆಚ್ಚಿಸುವುದಾಗಿ ಭಾರತ ಭರವಸೆ ನೀಡಿದೆ.

ಶ್ರೀಲಂಕಾಕ್ಕೆ 2 ದಿನಗಳ ಭೇಟಿ ನೀಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ಶ್ರೀಲಂಕಾದ ವಿದೇಶಾಂಗ ಸಚಿವ ಆಲಿ ಸಾಬ್ರಿ ಮತ್ತು ಅಧ್ಯಕ್ಷ ರನಿಲ್ ವಿಕ್ರಮಸಿಂಘೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜತೆ ಗುರುವಾರ ನಡೆಸಿದ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು. ದ್ವಿಪಕ್ಷೀಯ ಬಾಂಧವ್ಯ ಸುಧಾರಣೆ, ಜನರಿಂದ ಜನರ ಸಂಪರ್ಕಗಳು, ವ್ಯಾಪಾರ ಮತ್ತು ಹೂಡಿಕೆ ಸಂಬಂಧ ಸುಧಾರಣೆಯ ಜತೆ ಮಾತುಕತೆ ನಡೆಸಿದ್ದೇವೆ ಎಂದು ಅಲಿ ಸಬ್ರಿ ಟ್ವೀಟ್ ಮಾಡಿದ್ದಾರೆ.

2 ದೇಶಗಳ ಪ್ರವಾಸದ ಅಂಗವಾಗಿ ಮಾಲ್ದೀವ್ಸ್ನಿಂದ ಶ್ರೀಲಂಕಾಕ್ಕೆ ಆಗಮಿಸಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ‘ಶ್ರೀಲಂಕಾದ ಸಚಿವರ ಜತೆ ಪರಸ್ಪರ ಮತ್ತು ಪ್ರಾದೇಶಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಮೂಲ ಸೌಕರ್ಯ, ಸಂಪರ್ಕ, ಇಂಧನ, ಕೈಗಾರಿಕೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಂಬಂಧ ಸುಧಾರಣೆಗೆ ಚರ್ಚೆ ನಡೆಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
 

ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್)ಯಿಂದ 2.9 ಶತಕೋಟಿ ತುರ್ತು ಸಾಲ ಪಡೆಯಲು ಶ್ರೀಲಂಕಾ ಪ್ರಯತ್ನಿಸುತ್ತಿದೆ. ಆದರೆ ಸಾಲ ಮಂಜೂರಾತಿಗೆ ಐಎಂಎಫ್ ಕೆಲವೊಂದು ಷರತ್ತುಗಳನ್ನು ಮುಂದಿರಿಸಿದೆ. ಶ್ರೀಲಂಕಾವು ತನ್ನ ಪ್ರಮುಖ ಸಾಲಗಾರ(ಸಾಲ ನೀಡಿದ ದೇಶಗಳು)ರಾದ ಚೀನಾ, ಜಪಾನ್ ಮತ್ತು ಭಾರತದಿಂದ ಆರ್ಥಿಕ ಭರವಸೆ ಒದಗಿಸಬೇಕು ಎಂಬ ಷರತ್ತು ಇದರಲ್ಲಿ ಮುಖ್ಯವಾಗಿದೆ. ಭಾರತ ಈಗಾಗಲೇ ಈ ಭರವಸೆ ಒದಗಿಸಿದೆ. ಸಾಲ ಪುನರ್ರಚನೆಗೆ ಭಾರತದೊಂದಿಗಿನ ಮಾತುಕತೆ ಯಶಸ್ವಿಯಾಗಿದೆ ಎಂದು ಕಳೆದ ಮಂಗಳವಾರ ಶ್ರೀಲಂಕಾ ಅಧ್ಯಕ್ಷ ವಿಕ್ರಮಸಿಂಘೆ ಸಂಸತ್ತಿಗೆ ಮಾಹಿತಿ ನೀಡಿದ್ದರು. ಈ ಮಧ್ಯೆ, ಸಾಲ ಪುನರ್ರಚನೆಯ ವಿಷಯದಲ್ಲಿ ಭಾರತವು ಶ್ರೀಲಂಕಾಕ್ಕೆ ಎಲ್ಲಾ ನೆರವು ನೀಡುವುದಾಗಿ ವಿತ್ತಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ರಜತ್ ಕುಮಾರ್ ಮಿಶ್ರ ಐಎಂಎಫ್ ಮುಖ್ಯಸ್ಥೆ ಕ್ರಿಸ್ತಲಿನಾ ಜಾರ್ಜಿಯೆವಾಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

share
Next Story
X