Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆರೋಗ್ಯ ವಲಯಕ್ಕೆ ಬಿಡುಗಡೆಯಾಗದ 551.53...

ಆರೋಗ್ಯ ವಲಯಕ್ಕೆ ಬಿಡುಗಡೆಯಾಗದ 551.53 ಕೋಟಿ ರೂ.

ಇಲಾಖೆಯು ನೆನಪೋಲೆ ಬರೆದರೂ ಕೇಂದ್ರ ಸರಕಾರ ಮೌನ

ಜಿ.ಮಹಾಂತೇಶ್ಜಿ.ಮಹಾಂತೇಶ್21 Jan 2023 8:05 AM IST
share
ಆರೋಗ್ಯ ವಲಯಕ್ಕೆ ಬಿಡುಗಡೆಯಾಗದ 551.53 ಕೋಟಿ ರೂ.
ಇಲಾಖೆಯು ನೆನಪೋಲೆ ಬರೆದರೂ ಕೇಂದ್ರ ಸರಕಾರ ಮೌನ

ಬೆಂಗಳೂರು, ಜ.20: ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನಂತೆ  2022-23ನೇ ಸಾಲಿನ ಆರೋಗ್ಯ ವಲಯಕ್ಕೆ ಬಿಡುಗಡೆಯಾಗಬೇಕಿದ್ದ 551.53 ಕೋಟಿ ರೂ. ಇದುವರೆಗೂ ಬಿಡುಗಡೆಯಾಗಿಲ್ಲ. ಈ ಕುರಿತು ಆರ್ಥಿಕ ಇಲಾಖೆಯು 3 ನೆನಪೋಲೆಗಳನ್ನು ಕೇಂದ್ರ ಸರಕಾರಕ್ಕೆ ಬರೆದಿದ್ದರೂ ಬಿಡಿಗಾಸೂ ರಾಜ್ಯಕ್ಕೆ ಬಂದಿಲ್ಲ.

ಈ ಸಂಬಂಧ 2023ರ ಜನವರಿ 13ರಂದು ಆರ್ಥಿಕ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ (ಸಂ;ಆಇ19 ಆಆಕೋ 2021) ಪತ್ರ ಬರೆದಿದ್ದಾರೆ ಈ ಪತ್ರದ ಪ್ರತಿಯು ''the-file.in'' ಗೆ ಲಭ್ಯವಾಗಿದೆ.

 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ‘ಚಿಕ್ಕಬಳ್ಳಾಪುರ ಉತ್ಸವ’ದ ಯಶಸ್ಸಿನ ಸಂಭ್ರಮದಲ್ಲಿ ಮುಳುಗಿರುವ ಬೆನ್ನಲ್ಲೇ ಆರೋಗ್ಯ ವಲಯಕ್ಕೆ 15ನೇ ಹಣಕಾಸು ಆಯೋಗದಡಿ 551.53 ಕೋಟಿ ರೂ.ನಲ್ಲಿ ಬಿಡಿಗಾಸೂ ರಾಜ್ಯಕ್ಕೆ ಬಂದಿಲ್ಲ ಎಂದು ಆರ್ಥಿಕ ಇಲಾಖೆಯು ಬರೆದಿರುವ ಪತ್ರವು ಮುನ್ನೆಲೆಗೆ ಬಂದಿದೆ.

‘ಉಲ್ಲೆಖಿತ ಅನಧಿಕೃತ ಟಿಪ್ಪಣಿಗಳು ಹಾಗೂ ಪತ್ರದತ್ತ ತಮ್ಮ ಗಮನ ಸೆಳೆಯಲಾಗಿದೆ. 2022-23ನೇ ಸಾಲಿಗೆ 15ನೇ ಹಣಕಾಸು ಆಯೋಗದಡಿ ಆರೋಗ್ಯ ವಲಯಕ್ಕೆ 551.53 ಕೋಟಿ ರೂ. ಬಿಡುಗಡೆಯಾಗಬೇಕಿದ್ದು ಈ ಮೊತ್ತವು ಇದುವರೆಗೂ ಬಿಡುಗಡೆಯಾಗಿರುವುದಿಲ್ಲ. ಆರ್ಥಿಕ ವರ್ಷಾಂತ್ಯಕ್ಕೆ ಕೆಲವೇ ತಿಂಗಳುಗಳು ಬಾಕಿ ಇರುವುದರಿಂದ ಪೂರ್ಣ ಮೊತ್ತವನ್ನು ಕೇಂದ್ರದಿಂದ ಪಡೆಯಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು,’ ಎಂದು ಆರ್ಥಿಕ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ವೆಂಕಟೇಶ್ ಎಸ್.ಎನ್., ಅವರು ಪತ್ರದಲ್ಲಿ ಕೋರಿದ್ದಾರೆ.

 2020-21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ಆರೋಗ್ಯ ವಲಯಕ್ಕೆ  2021-22ರಿಂದ 2025-26ರ ವರ್ಷದಲ್ಲಿ 2,929 ಕೋಟಿ ರೂ. ಶಿಫಾರಸು ಮಾಡಿತ್ತು.  2021-22ನೇ ಸಾಲಿಗೆ ಸಂಬಂಧಿಸಿದಂತೆ 552 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರಲಿಲ್ಲ.

 ಕೋವಿಡ್ ನಿರ್ವಹಣೆ ಸಂಬಂಧ ರಾಜ್ಯ ಸರಕಾರವು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದ ಹೊತ್ತಿನಲ್ಲಿ 15ನೇ ಹಣಕಾಸು ಆಯೋಗವು ಆರೋಗ್ಯ ವಲಯಕ್ಕೆ  ಮಾಡಿದ್ದ ಶಿಫಾರಸಿನಂತೆ 552 ಕೋಟಿ ರೂ. ಬಿಡುಗಡೆ ಮಾಡದೆಯೇ ಶಿಫಾರಸು ಕಾಗದದ ಮೇಲಷ್ಟೇ ಉಳಿಸಿಕೊಂಡಿತ್ತು. ಕೇಂದ್ರ ಸರಕಾರವು ಅನುದಾನವನ್ನು ಇದುವರೆಗೂ ಬಿಡುಗಡೆ ಮಾಡದಿದ್ದರೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ದನಿ ಎತ್ತಿರಲಿಲ್ಲ.
2021-22ನೇ ಸಾಲಿಗೆ 552 ಕೋಟಿ ರೂ., 2022-23ಕ್ಕೆ 552 ಕೋಟಿ ರೂ., 2023-24ನೇ ಸಾಲಿಗೆ 579 ಕೋಟಿ ರೂ., 2024-25ನೇ ಸಾಲಿಗೆ 608 ಕೋಟಿ ರೂ., 2025-26ಕ್ಕೆ 638 ಕೋಟಿ ರೂ. ಸೇರಿದಂತೆ ಒಟ್ಟು 2,929 ಕೋಟಿ ರೂ.ಗಳನ್ನು 15ನೇ ಹಣಕಾಸು ಆಯೋಗವು ರಾಜ್ಯದ ಆರೋಗ್ಯ ವಲಯಕ್ಕೆ ಶಿಫಾರಸು ಮಾಡಿತ್ತು.

 2021-22ನೇ ಸಾಲಿಗೆ ಶಿಫಾರಸಾಗಿರುವ 552 ಕೋಟಿ ರೂ. ಕೇಂದ್ರ ಸರಕಾರದಿಂದ ಇನ್ನೂ ಬಿಡುಗಡೆಯಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈ ಮೊತ್ತವನ್ನು ಕೇಂದ್ರದಿಂದ ಪಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಬೇಕು ಎಂದು ಆರ್ಥಿಕ ಇಲಾಖೆಯು ಆರೋಗ್ಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿತ್ತು  ಎಂದು ತಿಳಿದು ಬಂದಿದೆ.
 ಸಾಂಕ್ರಾಮಿಕ ಪ್ರಭಾವದ ತೀವ್ರತೆಯಿಂದ ವಿವಿಧ ರಾಜ್ಯಗಳು ವಿವಿಧ ಹಂತಗಳಲ್ಲಿ ಸುಧಾರಿಸಿಕೊಳ್ಳುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಮತ್ತು ಇತರ ಹಣಕಾಸು ಏಜೆಂಟರಿಗೆ ಆರ್ಥಿಕ ಬೆಂಬಲ ನೀಡಬೇಕಿದೆ. ರಾಜ್ಯ  ಸರಕಾರವು ಈಗಾಗಲೇ ಸಾಕಷ್ಟು ಖರ್ಚಿನ ಹೊರೆ ಹೊಂದಿದೆ. ಆರ್ಥಿಕ ಕುಂಠಿತ ಚಟುವಟಿಕೆಯಿಂದಾಗಿ ದೊಡ್ಡಪ್ರಮಾಣದಲ್ಲಿ ತೆರಿಗೆ ಮತ್ತು ಇತರ ಆದಾಯದ ಕೊರತೆಯೂ ಸೃಷ್ಟಿಯಾಗಿತ್ತು.

ಈ ಹೊತ್ತಿನ ಬಿಕ್ಕಟ್ಟಿಗೆ ಹಣಕಾಸಿನ ಸ್ಪಂದನೆ ಹೆಚ್ಚು ಸೂಕ್ಷ್ಮವಾಗಿರಬೇಕು. ಹಣಕಾಸಿನ ಸಹಾಯ ಪ್ರಕ್ರಿಯೆಯ ಗಾತ್ರವನ್ನು ಮಾತ್ರವಲ್ಲದೆ ವಿಧಿವಿಧಾನಗಳನ್ನು ಗಮನವಿಟ್ಟು ಎಚ್ಚರಿಕೆಯಿಂದ ನೋಡಬೇಕು. ಆದರೆ, ಕೇಂದ್ರ ಸರಕಾರವು ಆರೋಗ್ಯ ವಲಯಕ್ಕೆ ಶಿಫಾರಸು ಮಾಡಿರುವ ಹಣಕಾಸನ್ನು ಬಿಡುಗಡೆ ಮಾಡದಿರುವುದು ಹೊಣೆಗಾರಿಕೆ ನಿಭಾಯಿಸುವಲ್ಲಿ ದೊಡ್ಡ ಹಿನ್ನಡೆ ಅನುಭವಿಸುತ್ತಿದೆ.

 15ನೇ ಹಣಕಾಸು ಆಯೋಗ 2020-21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ರೂ.5,495 ಕೋಟಿ ರೂ.  ನೀಡಲು ಶಿಫಾರಸು ಮಾಡಿದೆ. ಈ ಶಿಫಾರಸನ್ನು ಒಪ್ಪಿಕೊಂಡು 2021-22ನೇ ಸಾಲಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಪ್ರಕಟಿಸಬೇಕು ಎಂದು ಕೇಂದ್ರಕ್ಕೆ ರಾಜ್ಯ ಸರಕಾರ ಮನವಿ ಮಾಡಿಕೊಂಡಿತ್ತು. ಆದರೆ, ಆಗಸ್ಟ್ ಮತ್ತು ಸೆಪ್ಟಂಬರ್‌ವರೆಗಿನ ಅವಧಿಯಲ್ಲಿ ಶೇ.32ರಷ್ಟು ಮಾತ್ರ ಅನುದಾನ ಬಿಡುಗಡೆಯಾಗಿತ್ತು.

 ಆಗಸ್ಟ್ 4ರ ಅಂತ್ಯಕ್ಕೆ ರಾಜ್ಯ ಸರಕಾರವು 2,114.5 ಕೋಟಿ ರೂ.ಗಳನ್ನು 6 ಲೆಕ್ಕ ಶೀರ್ಷಿಕೆಗಳಿಗೆ ಬಿಡುಗಡೆ ಮಾಡಿದೆ. ರಾಜ್ಯ ವಿಪತ್ತು ನಿರ್ವಹಣೆ ನಿಧಿಗೆ ಅಂದಾಜು 1,000 ಕೋಟಿ ರೂ.ಗಳನ್ನು ರಾಷ್ಟ್ರೀಯ ವಿಪತ್ತು ನಿಧಿ ಅಡಿಯಲ್ಲಿ ಬಿಡುಗಡೆಯಾಗಿತ್ತು.

ಕಳೆದ ವರ್ಷದ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಭೀಕರ ಪ್ರವಾಹ ಎದುರಾದಾಗ ಕೇಂದ್ರ ಸರಕಾರ ರಾಜ್ಯಕ್ಕೆ ಮೊದಲ ಹಂತದಲ್ಲಿ 1,369 ಕೋಟಿ ರೂ. ಹಾಗೂ ಎರಡನೇ ಹಂತದಲ್ಲಿ 2,261 ಕೋಟಿ ರೂ. ಬಿಡುಗಡೆ  ಮಾಡಿತ್ತು.

 ಹದಿನೈದನೇ ಹಣಕಾಸು ಆಯೋಗವು ರಾಜ್ಯಕ್ಕೆ  ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿ  ಹಂಚಿಕೆ ಮಾಡಿದ್ದ ಒಟ್ಟು 28,245.76 ಕೋಟಿ ರೂ. ಅನುದಾನದ ಪೈಕಿ 2022ರ ಜನವರಿ ಅಂತ್ಯಕ್ಕೆ  22,443.80 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.  ಇದೇ ಅವಧಿಗೆ ಇನ್ನೂ 5,801.96 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.

119.57 ಕೋಟಿ ರೂ. ಬಾಕಿ 

15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಎಸ್.ರವಿ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022ರ ಮಾರ್ಚ್ 10ರಂದು ಉತ್ತರಿಸಿದ್ದರು.
ರಾಷ್ಟ್ರೀಯ ಆಹಾರ ಭದ್ರತೆ ಅಭಿಯಾನಕ್ಕೆ 2021-22ರಲ್ಲಿ 100 ಕೋಟಿ ರೂ. ಹಂಚಿಕೆ ಮಾಡಿದ್ದರೂ 2022ರ ಜನವರಿ ಅಂತ್ಯಕ್ಕೆ ರಾಜ್ಯ ಸ್ವೀಕರಿಸಿದ್ದು 24.60 ಕೋಟಿ ರೂ. ಮಾತ್ರ. ಈ ಲೆಕ್ಕ ಶೀರ್ಷಿಕೆಯಲ್ಲಿ ಇನ್ನೂ 75.4 ಕೋಟಿ ರೂ. ಬಾಕಿ ಇದೆ. ಇದೇ ಅಭಿಯಾನಕ್ಕೆ ಗಿರಿಜನ ಉಪ ಯೋಜನೆಯಡಿಯಲ್ಲಿ 2.09 ಕೋಟಿ ರೂ. ಬಿಡುಗಡೆ ಮಾಡಿದೆ. ಆಹಾರ ಧಾನ್ಯ ಮತ್ತು ಎಫ್‌ಪಿಎಸ್ ವಿತರಕರ ಆಂತರಿಕ ರಾಜ್ಯ ಚಲನೆ ಮತ್ತು ನಿರ್ವಹಣೆಗೆ 173  ಕೋಟಿ ರೂ.ಗಳ ಪೈಕಿ ನೀಡಿದ್ದು 53.43 ಕೋಟಿ ರೂ. ಮಾತ್ರ. ಇದರಲ್ಲಿ 119.57 ಕೋಟಿ ರೂ. ಬಾಕಿ ಇದ್ದದ್ದನ್ನು ಸ್ಮರಿಸಬಹುು. 

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X