Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಟ ದರ್ಶನ್ ತೋಟದ ಮನೆ ಮೇಲೆ ಅರಣ್ಯ...

ನಟ ದರ್ಶನ್ ತೋಟದ ಮನೆ ಮೇಲೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳ ದಾಳಿ: 4 ವಿಶಿಷ್ಟ ಪ್ರಭೇದದ ಜಲಪಕ್ಷಿಗಳ ವಶ

21 Jan 2023 4:53 PM IST
share
ನಟ ದರ್ಶನ್ ತೋಟದ ಮನೆ ಮೇಲೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳ ದಾಳಿ: 4 ವಿಶಿಷ್ಟ ಪ್ರಭೇದದ ಜಲಪಕ್ಷಿಗಳ ವಶ

ಮೈಸೂರು,ಜ.21: ಚಲನಚಿತ್ರ ನಟ ದರ್ಶನ್ ಅವರಿಗೆ ಸೇರಿದೆ ಎನ್ನಲಾದ ಟಿ.ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿ ಇರುವ ಫಾಮ್೯ ಹೌಸ್ ಮೇಲೆ ಶುಕ್ರವಾರ ತಡರಾತ್ರಿ ಮೈಸೂರು ಸಂಚಾರಿ ಅರಣ್ಯದಳದ ಅಧಿಕಾರಿಗಳು ದಾಳಿ ನಡೆಸಿ ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಕೆಲವು ಸಂರಕ್ಷಿತ ಪಕ್ಷಿಗಳನ್ನು ದರ್ಶನ್ ಅವರ ಕೆಂಪಯ್ಯನ ಹುಂಡಿ ತೋಟದಲ್ಲಿ ಸಾಕಲಾಗುತ್ತಿತ್ತು ಎನ್ನಲಾಗಿದ್ದು ಆ ಪಕ್ಷಿಗಳನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ದರ್ಶನ್  ತೋಟದ ಮನೆಯಲ್ಲಿ ಸಾಕುತ್ತಿರುವ ಕೆಲವು ವಿದೇಶಿ ಪ್ರಾಣಿ, ಪಕ್ಷಿಗಳಿಗೆ ವನ್ಯಜೀವಿ ಕಾಯ್ದೆಯಡಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ. ಈ ಕಾರಣಕ್ಕೆ ದಾಳಿ ನಡೆದಿದೆ ಎಂದು ಅರಣ್ಯ ಸಂಚಾರಿ ದಳದ ಮುಖ್ಯಸ್ಥ ಡಿಸಿಎಫ್‌ಒ ಭಾಸ್ಕರ್‌ ತಿಳಿಸಿದ್ದಾರೆ.

ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿರುವ 4 ಬಾತುಕೋಳಿಗಳ ವಿಶಿಷ್ಟ ಪ್ರಭೇದದ ಜಲಪಕ್ಷಿಗಳನ್ನು (ಬಾರ್‌ ಹೆಡೆಡ್‌ ಗೂಸ್‌) ಸಾಕುವಂತಿಲ್ಲ. ಸಾಕುವುದು ಅಪರಾಧ. ಇವುಗಳು ಕಾಡಿನಲ್ಲೇ ಬದುಬೇಕಿದ್ದು, ಮೃಗಾಲಯ ಅಥವಾ ಮನೆ, ಫಾರ್ಮ್‌ಗಳಲ್ಲಿ ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ’ ಎಂದು ಅವರು ಹೇಳಿದರು.

ಸಾಕಣೆ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಲಾಗಿದೆ. ಈ ಪಕ್ಷಿಗಳನ್ನು  ಅವುಗಳದ್ದೇ ಪ್ರಭೇದದ ಪಕ್ಷಿಗಳು ಜೀವಿಸುವ ತಿ.ನರಸೀಪುರದ ಸಮೀಪದ ಹದಿನಾರು ಕೆರೆಯಲ್ಲಿ ಬಿಡಲು  ನ್ಯಾಯಾಲಯದ ಅನುಮತಿ ಪಡೆಯುತ್ತಿದ್ದೇವೆ, ಬಳಿಕ ಅಲ್ಲಿಗೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬಾರ್‌ ಹೆಡೆಡ್‌ ಗೂಸ್‌ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಹಿಮಾಲಯ ಪರ್ವತ ಪ್ರದೇಶ ದಾಟಿ ಭಾರತಕ್ಕೆ ವಲಸೆ ಬರುತ್ತವೆ. ಇವುಗಳು ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಅರಣ್ಯದಲ್ಲೇ ಸ್ವತಂತ್ರವಾಗಿ ಬದುಕಬೇಕಿರುವ ಹುಲಿ, ನವಿಲು ಇತ್ಯಾದಿ ವಿಭಾಗಕ್ಕೆ ಸೇರಿದ ಪಕ್ಷಿಗಳು ಎಂಬುದನ್ನು ಸಾರ್ವಜನಿಕರು ಅರಿತಿರಬೇಕು ಎಂದು ಅವರು ತಿಳಿಸಿದ್ದಾರೆ.

share
Next Story
X