Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್ ನ ಯಥಾಸ್ಥಿತಿ ಬದಲಾವಣೆಯ ಪ್ರಯತ್ನ...

ತೈವಾನ್ ನ ಯಥಾಸ್ಥಿತಿ ಬದಲಾವಣೆಯ ಪ್ರಯತ್ನ ಬೇಡ: ಚೀನಾಕ್ಕೆ ಅಮೆರಿಕ ಎಚ್ಚರಿಕೆ

22 Jan 2023 9:28 PM IST
share
ತೈವಾನ್ ನ ಯಥಾಸ್ಥಿತಿ ಬದಲಾವಣೆಯ ಪ್ರಯತ್ನ ಬೇಡ: ಚೀನಾಕ್ಕೆ ಅಮೆರಿಕ ಎಚ್ಚರಿಕೆ

ವಾಷಿಂಗ್ಟನ್, ಜ.22: ವಲಯದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಿಕೊಳ್ಳಲು ಅತ್ಯಗತ್ಯವಾಗಿರುವ ತೈವಾನ್ನ ಯಥಾಸ್ಥಿತಿಯನ್ನು ಬದಲಾಯಿಸುವ ಯಾವುದೇ ಪ್ರಯತ್ನಕ್ಕೆ ಮುಂದಾಗಬಾರದು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್(Antony Blinken) ಚೀನಾಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಚೀನಾವು ತೈವಾನ್ ನ ಮೇಲೆ ಮಿಲಿಟರಿ ಮತ್ತು ಆರ್ಥಿಕ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ತೈವಾನ್ ನಲ್ಲಿ ಯಥಾಸ್ಥಿತಿ ಮುಂದುವರಿಯುವುದು ತನಗೆ ಅಹಿತಕರ ಎಂದು ಚೀನಾ ಭಾವಿಸಿದಂತಿದೆ. ಆದರೆ ಹಲವು ದಶಕಗಳಿಂದಲೂ ಮುಂದುವರಿದು ಬಂದಿರುವ ಯಥಾಸ್ಥಿತಿ ಈ ಪ್ರದೇಶದ ಶಾಂತಿ ಮತ್ತು ಸ್ಥಿರತೆಗೆ ಅತ್ಯಗತ್ಯವಾಗಿರುವ ಜತೆಗೆ,  ಕಠಿಣ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಾಗಿದೆ ಎಂದವರು ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ಮಿಲಿಟರಿ ಒತ್ತಡ, ಆರ್ಥಿಕ ಒತ್ತಡ, ಅಂತರಾಷ್ಟ್ರೀಯ ವೇದಿಕೆಯಲ್ಲಿ ತೈವಾನ್ ಅನ್ನು ಪ್ರತ್ಯೇಕಗೊಳಿಸುವ ಪ್ರಯತ್ನಗಳ ಮೂಲಕ ಚೀನಾದ ನಿರಂತರ ಒತ್ತಡವನ್ನು ನಾವು ನೋಡಿದ್ದೇವೆ. ತೈವಾನ್ ಜಲಸಂಧಿಯಾದ್ಯಂತ  ಯಥಾಸ್ಥಿತಿ ಉಳಿದುಕೊಳ್ಳುವುದು ಅಮೆರಿಕಕ್ಕೂ ಮಹತ್ವದ್ದಾಗಿದೆ ಎಂದು ಬ್ಲಿಂಕೆನ್ ಹೇಳಿದ್ದಾರೆ.

ವಿಶ್ವದಲ್ಲಿ ಪ್ರತೀ ದಿನ ಸಂಚರಿಸುವ ಕಂಟೈನರ್ ಹಡಗುಗಳಲ್ಲಿ 50%ದಷ್ಟು ತೈವಾನ್ ಜಲಸಂಧಿಯ ಮೂಲಕ ಸಾಗುತ್ತದೆ. ವಿಶ್ವದಲ್ಲಿ ಉತ್ಪಾದನೆಯಾಗುವ ಕಂಪ್ಯೂಟರ್ ಚಿಪ್ಗಳಲ್ಲಿ ತೈವಾನ್ನ ಉದ್ಯಮದ ಪಾತ್ರ ಮಹತ್ವದ್ದಾಗಿದೆ. ಇವುಗಳಿಗೆ ಅಡ್ಡಿಯಾದರೆ ಸಂಪೂರ್ಣ ಜಾಗತಿಕ ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ತೈವಾನ್ ಜಲಸಂಧಿಯಾದ್ಯಂತ ಶಾಂತಿ ಮತ್ತು ಸ್ಥಿರತೆ ನೆಲೆಸಬೇಕು ಎಂಬುದು ಬಹುತೇಕ ದೇಶಗಳ ಆಶಯವಾಗಿದೆ. ಈ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ವಿವಾದ, ಸಮಸ್ಯೆಗೆ ಬಲಪ್ರಯೋಗ ಅಥವಾ ಒತ್ತಡದ ಮೂಲಕ ಪರಿಹಾರ ಸಾಧ್ಯವಿಲ್ಲ. ಮಾತುಕತೆಯೇ ಇದಕ್ಕೆ ಶಾಶ್ವತ ಪರಿಹಾರದ ಮಾರ್ಗವಾಗಿದೆ ಎಂದು ಬ್ಲಿಂಕೆನ್ ಹೇಳಿದ್ದಾರೆ.

ಕೋವಿಡ್ ನಂತರದ ದಿನಗಳಲ್ಲಿ ಜಗತ್ತಿನಲ್ಲಿ ಸ್ಪರ್ಧೆ, ಪೈಪೋಟಿ ಹೆಚ್ಚಿದೆ. ಆದರೆ ಪೈಪೋಟಿ ಆರೋಗ್ಯಕರವಾಗಿರಬೇಕು ಮತ್ತು ನ್ಯಾಯೋಚಿತವಾಗಿರಬೇಕು. ಚೀನಾವು ಹಲವು ಕ್ಷೇತ್ರಗಳಲ್ಲಿ, ಹಲವು ವಿಧದಲ್ಲಿ ಪ್ರಮುಖ ಪ್ರತಿಸ್ಪರ್ಧಿಯಾಗಿದೆ. ಅಮೆರಿಕ ಮತ್ತು ಚೀನಾದ ದೃಷ್ಟಿಕೋನದಲ್ಲಿ ವ್ಯತ್ಯಾಸವಿದೆ. ಆದರೆ ಸ್ಪರ್ಧೆ ಮತ್ತು ಸಂಘರ್ಷದಲ್ಲಿ ವ್ಯತ್ಯಾಸವಿದೆ. ನಿಕಟ ಸ್ಪರ್ಧೆಗೆ ಎಂದಿಗೂ ನಮ್ಮ ಸ್ವಾಗತವಿದೆ. ಆದರೆ ಸ್ಪರ್ಧೆಯ ಹೆಸರಲ್ಲಿ ಸಂಘರ್ಷಕ್ಕೆ ನಮ್ಮ ವಿರೋಧವಿದೆ.

ಸ್ಪರ್ಧೆ ಸಂಘರ್ಷಕ್ಕೆ ತಿರುಗುವುದನ್ನು ನಾವು ತಪ್ಪಿಸಬೇಕಿದೆ ಎಂದವರು ಹೇಳಿದ್ದಾರೆ. ಚೀನಾದ `ಒಂದು ದೇಶ ಎರಡು ವ್ಯವಸ್ಥೆ'ಯ ಉಪಕ್ರಮವು ಹಾಂಕಾಂಗ್ ಜನರ ಮೇಲೆ ವ್ಯಾಪಕ ಪರಿಣಾಮಕ್ಕೆ ಕಾರಣವಾಗಿದೆ. ಈ ಸಮಸ್ಯೆ ತೈವಾನ್ ಜನತೆಗೆ ಆಗಬಾರದು ಎಂಬುದು ನಮ್ಮ ಆಶಯವಾಗಿದೆ ಎಂದು ಬ್ಲಿಂಕೆನ್ ಹೇಳಿದ್ದಾರೆ. ಬ್ಲಿಂಕೆನ್ ಮುಂದಿನ ತಿಂಗಳು ಚೀನಾಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ.

ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆ ಇರುವ ತೈವಾನ್ ತನ್ನ ಅವಿಭಾಜ್ಯ ಅಂಗ ಎಂದು ಪ್ರತಿಪಾದಿಸುತ್ತಿರುವ ಚೀನಾ, ಅದನ್ನು ಬಲಪ್ರಯೋಗಿಸಿಯಾದರೂ ತನ್ನ ಆಡಳಿತದ ವ್ಯವಸ್ಥೆಯಡಿ ಸೇರಿಸುವುದಾಗಿ ಘೋಷಿಸಿದೆ.

share
Next Story
X