ಉಡುಪಿ: ನವೀಕರಣಗೊಂಡ ಇಂದ್ರಾಳಿ ಹಿಂದೂ ರುದ್ರಭೂಮಿ ಉದ್ಘಾಟನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಲ್ಲಿರುವ ನವೀಕರಣಗೊಂಡ ಇಂದ್ರಾಳಿ ಹಿಂದೂ ರುದ್ರಭೂಮಿಯನ್ನು ಶಾಸಕ ಕೆ.ರಘುಪತಿ ಭಟ್ ಇಂದು ಉದ್ಘಾಟಿಸಿದರು.
ನಗರಸಭೆಯ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ 50 ಲಕ್ಷ ರೂ. ಹಾಗೂ ನಗರಸಭಾ ನಿಧಿಯಿಂದ 10 ಲಕ್ಷ ರೂ. ಸೇರಿದಂತೆ ಒಟ್ಟು 60 ಲಕ್ಷ ರೂ. ಅನುದಾನದಡಿ ಇಂದ್ರಾಳಿ ರುದ್ರಭೂಮಿಯ ನವೀಕರಣ ಕಾಮಗಾರಿ ಪೂರ್ಣಗೊಂಡಿದೆ.
ರಘುಪತಿ ಭಟ್ ಅವರು ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಉಪಸ್ಥಿತಿಯಲ್ಲಿ ನವೀಕೃತ ಇಂದ್ರಾಳಿ ಹಿಂದೂ ರುದ್ರ ಭೂಮಿಯ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯ ಅಶೋಕ್ನಾಯ್ಕ್ ಉಪಸ್ಥಿತರಿದ್ದರು.
Next Story