Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ್ ಜೋಡೊ ಯಾತ್ರೆ: ಕಾಶ್ಮೀರಿ ಪಂಡಿತರ...

ಭಾರತ್ ಜೋಡೊ ಯಾತ್ರೆ: ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ

ತಮ್ಮ ವಾಸಸ್ಥಳಕ್ಕೆ ಆಗಮಿಸುವಂತೆ ಮನವಿ

23 Jan 2023 10:51 PM IST
share
ಭಾರತ್ ಜೋಡೊ ಯಾತ್ರೆ: ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ
ತಮ್ಮ ವಾಸಸ್ಥಳಕ್ಕೆ ಆಗಮಿಸುವಂತೆ ಮನವಿ

ಜಮ್ಮು, ಜ.23: ಸೋಮವಾರ ಸಾಂಬಾ ಜಿಲ್ಲೆಯಲ್ಲಿ ಭಾರತ ಜೋಡೊ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಭೇಟಿಯಾದ ಕಾಶ್ಮೀರಿ ವಲಸಿಗ ಪಂಡಿತರ ನಿಯೋಗವು ಭಯೋತ್ಪಾದಕರಿಂದ ‘ಉದ್ದೇಶಿತ ಹತ್ಯೆಗಳು’ ಮತ್ತು ಪ್ರಧಾನ ಮಂತ್ರಿಗಳ ಪ್ಯಾಕೇಜ್ನಡಿ ನೇಮಕಗೊಂಡವರ ಪ್ರತಿಭಟನೆ ಸೇರಿದಂತೆ ತಮ್ಮ ಹಲವಾರು ಸಮಸ್ಯೆಗಳ ಕುರಿತು ನೋವನ್ನು ತೋಡಿಕೊಂಡಿತು.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹಾಗೂ ನಿಯೋಗದ ಸದಸ್ಯ ಅಮಿತ್ ಕೌಲ್ ಅವರು, ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಮ್ಮ ಜಾಗ್ತಿ ಬಡಾವಣೆಗೆ ಭೇಟಿ ನೀಡುವಂತೆ ರಾಹುಲ್ ರನ್ನು ಆಹ್ವಾನಿಸಿದ್ದೇವೆ ಮತ್ತು ಅವರು ಕಾಶ್ಮೀರಕ್ಕೆ ಸಾಗುವ ಮಾರ್ಗದಲ್ಲಿ ಸಮುದಾಯವನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

2008ರಲ್ಲಿ ಪ್ರಕಟಿಸಲಾಗಿದ್ದ ಪ್ರಧಾನ ಮಂತ್ರಿಗಳ ಉದ್ಯೋಗ ಪ್ಯಾಕೇಜ್ನಡಿ ಆಯ್ಕೆಯಾದ ಸುಮಾರು 4,000 ಕಾಶ್ಮೀರಿ ವಲಸಿಗ ಪಂಡಿತರು ಕಾಶ್ಮೀರ ಕಣಿವೆಯ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಕಳೆದ ವರ್ಷದ ಮೇ 12ರಂದು ತಮ್ಮ ಸಹೋದ್ಯೋಗಿ ರಾಹುಲ್ ಭಟ್ರನ್ನು ಬುಡ್ಗಾಮ್ ಜಿಲ್ಲೆಯ ಅವರ ಕಚೇರಿಯಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ ಬಳಿಕ ಹೆಚ್ಚಿನ ಪಂಡಿತ ಉದ್ಯೋಗಿಗಳು ಜಮ್ಮುವಿಗೆ ಪಲಾಯನ ಮಾಡಿದ್ದಾರೆ. ತಮ್ಮನ್ನು ಕಾಶ್ಮೀರ ಕಣಿವೆಯಿಂದ ಹೊರಗೆ ವರ್ಗಾಯಿಸುವಂತೆ ಆಗ್ರಹಿಸಿ ಕಳೆದ ಆರು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಪ್ರತಿಭಟನೆ ನಡೆಸುತ್ತಿದ್ದು,ಜಮ್ಮು-ಕಾಶ್ಮೀರ ಆಡಳಿತವು ಅವರ ವೇತನಗಳನ್ನು ತಡೆಹಿಡಿದಿದೆ.

'ಜಾಗ್ತಿ ಬಡಾವಣೆಗೆ ಖುದ್ದಾಗಿ ಭೇಟಿ ನೀಡುವುದಾಗಿ ಮತ್ತು ನಮ್ಮ ಸಮಸ್ಯೆಗಳನ್ನು ಸಂಸತ್ತಿನೊಳಗೆ ಮತ್ತು ಹೊರಗೆ ಎತ್ತುವುದಾಗಿ ರಾಹುಲ್ ಭರವಸೆ ನೀಡಿದ್ದಾರೆ' ಎಂದು ಕೌಲ್ ತಿಳಿಸಿದರು.

ಬಿಜೆಪಿಯು ತನ್ನ ರಾಜಕೀಯ ಅಜೆಂಡಾವನ್ನು ಮುಂದೊತ್ತಲು ಕಾಶ್ಮೀರಿ ಪಂಡಿತ ಸಮುದಾಯವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ನಿಯೋಗದ ಇನ್ನೋರ್ವ ಸದಸ್ಯ ಜಿತೇಂದ್ರ ಕಚ್ರೂ, ಅವರಿಗೆ (ಬಿಜೆಪಿ) ನಿಜವಾಗಿಯೂ ಕಾಶ್ಮೀರಿ ಪಂಡಿತರ ಸಮಸ್ಯೆಗಳನ್ನು ಬಗೆಹರಿಸುವುದು ಬೇಕಿಲ್ಲ, ಏಕೆಂದರೆ ಧರ್ಮದ ಆಧಾರದಲ್ಲಿ ದ್ವೇಷವನ್ನು ಹರಡುವುದು ಅವರ ರಾಜಕೀಯ ಅಜೆಂಡಾ ಆಗಿದೆ ಎಂದು ಹೇಳಿದರು.

'ये लोग (BJP) कश्मीरी पंडितों का सिर्फ इस्तेमाल करते हैं। इन्होंने हमारे नाम का सिर्फ और सिर्फ इस्तेमाल किया है, कुछ किया नहीं।

जब भी चुनाव आता है तो वोट के लिए कश्मीरी पंडित का नाम लेते हैं।'

आज जम्मू में @RahulGandhi जी से कश्मीरी पंडितों का डेलिगेशन मिला और कुछ ऐसी बातें रखी pic.twitter.com/jpVTKvtC9f

— Congress (@INCIndia) January 23, 2023
share
Next Story
X