ಸಾಗರ: ಕೆರೆಯಲ್ಲಿ ಈಜಲು ಹೋದ ಯುವಕ ನಾಪತ್ತೆ

ಸಾಗರ: ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನಾಪತ್ತೆಯಾದ ಘಟನೆ ಮಂಗಳವಾರ ಬೆಳಗ್ಗೆ ನಡೆದಿರುವುದಾಗಿ ವರದಿಯಾಗಿದೆ.
ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನಾಪತ್ತೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್, ಈಜಾಡಲು ತೆರಳಿದ್ದ ಸಂದರ್ಭದಲ್ಲಿ ಈಜು ಬಾರದೆ ನೀರಿನಲ್ಲಿ ನಾಪತ್ತೆಯಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.







.jpeg)


