Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂಭತ್ತು ವರ್ಷಗಳಲ್ಲಿ ಪ್ರತಿ ಭಾರತೀಯನ...

ಒಂಭತ್ತು ವರ್ಷಗಳಲ್ಲಿ ಪ್ರತಿ ಭಾರತೀಯನ ಮೇಲಿನ ಸಾಲದ ಹೊರೆ 43,124 ರೂ.ನಿಂದ 1,09,373 ರೂ.ಗೆ ಏರಿದೆ: ಕಾಂಗ್ರೆಸ್ ಆರೋಪ

24 Jan 2023 1:45 PM IST
share
ಒಂಭತ್ತು ವರ್ಷಗಳಲ್ಲಿ ಪ್ರತಿ ಭಾರತೀಯನ ಮೇಲಿನ ಸಾಲದ ಹೊರೆ 43,124 ರೂ.ನಿಂದ 1,09,373 ರೂ.ಗೆ ಏರಿದೆ: ಕಾಂಗ್ರೆಸ್ ಆರೋಪ

ಹೊಸದಿಲ್ಲಿ,ಜ.23: ಕಳೆದ ಒಂಭತ್ತು ವರ್ಷಗಳ ಮೋದಿ ಸರಕಾರದ ಆಡಳಿತದಲ್ಲಿ ಪ್ರತಿ ಭಾರತೀಯನ ತಲೆಯ ಮೇಲಿನ ಸಾಲದ ಹೊರೆಯು 43,124 ರೂ.ಗಳಿಂದ 1,09,373 ರೂ.ಗಳಿಗೆ ಏರಿಕೆಯಾಗಿದ್ದು,ಇದು 2014ರಲ್ಲಿ ಇದ್ದ ಸಾಲಕ್ಕಿಂತ 2.53 ಪಟ್ಟು ಹೆಚ್ಚಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ರವಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಗೌರವ ವಲ್ಲಭ ಅವರು,2014,ಮಾ.31ಕ್ಕೆ 55.87 ಲ.ಕೋ.ರೂ.ಗಳಿದ್ದ ಭಾರತ ಸರಕಾರದ ಸಾಲವು 2023,ಮಾ.31ರ ವೇಳೆಗೆ ಅಂದಾಜು 155.31 ಲ.ಕೋ.ರೂ.ಗೆ ಏರಲಿದೆ ಎಂದು ಆರೋಪಿಸಿದರು.

2023ನೇ ವಿತ್ತವರ್ಷದ ಅಂತ್ಯದಲ್ಲಿ ಪ್ರತಿಯೊಬ್ಬ ಭಾರತೀಯನೂ ತಾನೆಂದೂ ಪಡೆದಿರದ 1,09,373 ರೂ.ಗಳ ಸಾಲಕ್ಕೆ ಹೊಣೆಯಾಗಿರುತ್ತಾನೆ. 1947ರಿಂದ 2014,ಮಾ.31ರವರೆಗೆ ಪ್ರತಿ ಭಾರತೀಯನ ತಲೆಯ ಮೇಲೆ 43,124 ರೂ.ಗಳ ಸಾಲವಿತ್ತು, ಆದರೆ ಕಳೆದ ಒಂಭತ್ತು ವರ್ಷಗಳಲ್ಲಿ ಅದು 66,249 ರೂ.ಗಳಷ್ಟು ಹೆಚ್ಚಿ 1,09,373 ರೂ.ಗಳಿಗೆ ತಲುಪಿದೆ ಎಂದ ಅವರು,2022ನೇ ಸಾಲಿನ ಐಎಂಎಫ್ ವರದಿಯಂತೆ ನಮ್ಮ ಸಾಲ ಜಿಡಿಪಿಯ ಶೇ.83ರಷ್ಟಿತ್ತು. ಇದು ನಮ್ಮ ಸಮಾನ ರಾಷ್ಟ್ರಗಳು,ಉದಯೋನ್ಮುಖ ಮತ್ತು ಅಭಿವೃಧ್ಧಿಶೀಲ ಆರ್ಥಿಕತೆ (ಸರಾಸರಿ ಶೇ.64.5)ಗಳಿಗಿಂತ ಹೆಚ್ಚಾಗಿದೆ ಎಂದರು.

ವರದಿಗಳಂತೆ ಈಗ ಭಾರತದ ಶೇ.5ರಷ್ಟು ಅತ್ಯಂತ ಶ್ರೀಮಂತರು ದೇಶದ ಒಟ್ಟು ಸಂಪತ್ತಿನ ಶೇ.60ಕ್ಕೂ ಅಧಿಕ ಪಾಲನ್ನು ಹೊಂದಿದ್ದಾರೆ ಮತ್ತು ಕೆಳಸ್ತರದ ಶೇ.50ರಷ್ಟು ಜನರು ಒಂದಾಗಿ ಕೇವಲ ಶೇ.3ರಷ್ಟು ಸಂಪತ್ತನ್ನು ಹಂಚಿಕೊಂಡಿದ್ದಾರೆ. ಇನ್ನೊಂದೆಡೆ ಒಟ್ಟು 14.83 ಲ.ಕೋ.ರೂ.ಗಳ ಜಿಎಸ್ಟಿ ಸಂಗ್ರಹದ ಶೇ.64ರಷ್ಟು ಪಾಲು ಕೆಳಸ್ತರದ ಶೇ.50ರಷ್ಟು ಜನಸಂಖ್ಯೆಯಿಂದ ಬಂದಿದ್ದರೆ,ಉನ್ನತ ಶೇ.10ರಷ್ಟು ಜನಸಂಖ್ಯೆಯ ಪಾಲು ಕೇವಲ ಶೇ.3ರಷ್ಟಿದೆ ಎಂದು ವಲ್ಲಭ್ ಹೇಳಿದರು.

share
Next Story
X