Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮದ್ದೂರು: ತಾಲೂಕು ಕಚೇರಿಯಲ್ಲೇ...

ಮದ್ದೂರು: ತಾಲೂಕು ಕಚೇರಿಯಲ್ಲೇ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ

ಆರೋಪಿಗೆ ಸಾರ್ವಜನಿಕರಿಂದ ಥಳಿತ

24 Jan 2023 6:42 PM IST
share
ಮದ್ದೂರು: ತಾಲೂಕು ಕಚೇರಿಯಲ್ಲೇ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ
ಆರೋಪಿಗೆ ಸಾರ್ವಜನಿಕರಿಂದ ಥಳಿತ

ಮಂಡ್ಯ, ಜ.24: ವ್ಯಕ್ತಿಯೊಬ್ಬರ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಡಹಗಲೇ ಮದ್ದೂರು ಪಟ್ಟಣದ ತಹಶೀಲ್ದಾರ್ ಕಚೇರಿ ಕಟ್ಟಡದಲ್ಲಿ ನಡೆದಿರುವ ಬಗ್ಗೆ ಮಗಳವಾರ ವರದಿಯಾಗಿದೆ. 

ಮದ್ದೂರು ತಾಲೂಕು ಮರಳಿಗ ಗ್ರಾಮದ ಚನ್ನರಾಜು(45) ಅಲಿಯಾಸ್ ಚನ್ನೇಶ ಅಲಿಯಾಸ್ ಚಾಟಿ ಭೀಕರ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಅದೇ ಗ್ರಾಮದ ನಂದನ್ ಎಂಬಾತ ಈ ಕೃತ್ಯ ಎಸಗಿದ್ದಾನೆ.

ಜಮೀನು ವಿವಾದ ಸೇರಿದಂತೆ ಇತರೆ ವಿಷಯಗಳಲ್ಲಿ ಚನ್ನರಾಜು ಮತ್ತು ನಂದನ್ ಕುಟುಂಬಗಳ ನಡುವೆ ಹಳೇದ್ವೇಷ ಇದ್ದು, ಈ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.

ಚನ್ನರಾಜು ಮತ್ತು ನಂದನ್ ಎದುರು ಬದುರು ಮನೆಯವರು. ಇವರ ನಡುವೆ ಜಮೀನು ವ್ಯಾಜ್ಯವಿದ್ದು, ಇತ್ತೀಚೆಗೆ ಮದ್ದೂರು ನ್ಯಾಯಾಲಯದಲ್ಲಿ ತೀರ್ಪು ಚನ್ನರಾಜು ಪರವಾಗಿ ಬಂದಿತ್ತು ಎನ್ನಲಾಗಿದೆ. ಇದರಿಂದ ಕುಪಿತಗೊಂಡಿದ್ದ ನಂದನ್ ಸೇಡಿಗಾಗಿ ಕಾಯುತ್ತಿದ್ದನೆಂದು ತಿಳಿದು ಬಂದಿದ್ದು, ಇಂದು ಚನ್ನರಾಜು ದಂಪತಿ ಕಾರ್ಯನಿಮಿತ್ತ ಮದ್ದೂರು ತಹಶೀಲ್ದಾರ್ ಕಚೇರಿಗೆ ಬಂದಿದ್ದ ಸಮಯದಲ್ಲಿ ಈ ಕೃತ್ಯ ನಡೆದಿದೆ.

ವಿಡಿಯೋ  ವೈರಲ್: ಮಂಗಳವಾರ ಸಂಜೆ 4:00 ಗಂಟೆ ಸಮಯದಲ್ಲಿ ಕಚೇರಿ ಕಟ್ಟಡದ ಮೇಲಂತಿಸ್ತಿನಲ್ಲಿದ್ದ ಚನ್ನರಾಜು ಮೇಲೆ ನಂದನ್ ಕುಡುಗೋಲಿನಿಂದ ಏಕಾಏಕಿ ಹಲ್ಲೆ ನಡೆಸಿದ್ದಾನೆ. ತಪ್ಪಿಸಿಕೊಳ್ಳಲು ಕೆಳಗೆ ಓಡಿ ಬಂದ ನಂತರವೂ ನಂದನ್, ಚನ್ನರಾಜು ಮೇಲೆ ಪದೇ ಪದೇ ಹಲ್ಲೆ ನಡೆಸಿರುವುದು ವಿಡೀಯೋದಲ್ಲಿ ಸೆರೆಯಾಗಿದೆ.

ಈ ಸಂದರ್ಭ ನೆರೆದಿದ್ದ ಜನರು ಆರೋಪಿ ನಂದನ್ ಗೆ ಥಳಿಸಿದ್ದಾರೆನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನೂ ಸ್ಥಳೀಯ ತಾಲೂಕು ಆಸ್ಪತ್ರೆಗೆ ಸಾಗಿಸಿದ್ದು, ಚನ್ನರಾಜು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚನ್ನರಾಜು ತೀವ್ರ ರಕ್ತಸ್ರಾವವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆಂದು ತಿಳಿದು ಬಂದಿದೆ.  ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


“ಹಲ್ಲೆಗೊಳಗಾದ ಚನ್ನರಾಜು ಮೂರುವರೆ ಎಕರೆ ಜಮೀನನ್ನು ತನ್ನ ಹೆಂಡತಿ, ಮಗಳ ಹೆಸರಿಗೆ ಬರೆದಿದ್ದು, ಇಂದು ಅದನ್ನು ಖಾತೆ ಮಾಡಿಸಿಕೊಳ್ಳಲು ತಾಲೂಕು ಕಚೇರಿಗೆ ಬಂದಿರುತ್ತಾನೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸಿದ್ದ  ಆರೋಪಿ ನಂದನ್ ಕೂಡ ಬಂದಿದ್ದು, ವಿಚಾರಣೆ ನಡೆದ ನಂತರ, ಕುಡುಗೋಲಿನಿಂದ ತಾಲೂಕು ಕಚೇರಿ ಆವರಣದಲ್ಲೇ ಚನ್ನರಾಜು ಮೇಲೆ ಹಲ್ಲೆ ಮಾಡಿದ್ದಾನೆ. ಜನರು ಆತನ ಕೈಯಿಂದ ಕುಡುಗೋಲು ಕಿತ್ತುಕೊಂಡಿದ್ದಾರೆ. ಇದೇ ವೇಳೆ ಆತನಿಗೂ ಗಾಯವಾಗಿದೆ. ಚನ್ನರಾಜುವನ್ನು ಜಿಲ್ಲಾಸ್ಪತ್ರೆಗೆ ಮತ್ತು ಆರೋಪಿ ನಂದನ್‍ನನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಇದು ಪ್ರಮುಖವಾಗಿ ಜಮೀನು ವಿವಾದದಿಂದ ಆಗಿದೆ ಎಂದು ಸದ್ಯಕ್ಕೆ ಮಾಹಿತಿ ಇದೆ. ತನಿಖೆಯಿಂದ ಹೆಚ್ಚಿನ ವಿಚಾರ ಹೊರಬರಲಿದೆ.”

- ಎನ್.ಯತೀಶ್, ಎಸ್ಪಿ ಮಂಡ್ಯ.


 

share
Next Story
X