Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಅಶೋಕ್ ಕ್ಷೇತ್ರದಲ್ಲಿ ಅವ್ಯವಹಾರ:...

ಸಚಿವ ಅಶೋಕ್ ಕ್ಷೇತ್ರದಲ್ಲಿ ಅವ್ಯವಹಾರ: ರಮೇಶ್ ಬಾಬು ಆರೋಪ

24 Jan 2023 8:18 PM IST
share
ಸಚಿವ ಅಶೋಕ್ ಕ್ಷೇತ್ರದಲ್ಲಿ ಅವ್ಯವಹಾರ: ರಮೇಶ್ ಬಾಬು ಆರೋಪ

ಬೆಂಗಳೂರು, ಜ.24: ಕಂದಾಯ ಸಚಿವ ಆರ್.ಅಶೋಕ್ ಪ್ರತಿನಿಧಿಸುತ್ತಿರುವ ಪದ್ಮನಾಭ ನಗರ ಕ್ಷೇತ್ರದಲ್ಲಿ ಬಿಬಿಎಂಪಿ ವತಿಯಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳಲ್ಲಿ ವ್ಯಾಪಕ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಸಚಿವರು ಲೋಕಾಯುಕ್ತ ತನಿಖೆಗೆ ಆದೇಶಿಸಲಿ ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ 400ಕೋಟಿ ರೂ.ಗೂ ಹೆಚ್ಚು ಕಾಮಗಾರಿ ನಡೆದಿವೆ. ಒಬ್ಬ ವ್ಯಕ್ತಿ ಪ್ರಭಾವಕ್ಕೆ ಒಳಗಾಗಿ ಎಲ್ಲ ಕಾಮಗಾರಿ ಅಕ್ರಮವಾಗಿ ಹಂಚಿಕೆಯಾಗಿದೆ ಎಂದು ದೂರಿದರು.

ಒಂದೇ ಸಮುದಾಯ ಭವನ ದುರಸ್ತಿಗೆ 8 ಬಾರಿ ಖರ್ಚು ಮಾಡಿದ್ದಾರೆ. ಯಡಿಯೂರು ಮೈದಾನದಲ್ಲಿ ನಾಲ್ಕು ಕಾಮಗಾರಿ ಹೆಸರಲ್ಲಿ 4 ಕೋಟಿ ರೂ.ವೆಚ್ಚವಾಗಿವೆ. ಬಿಬಿಎಂಪಿ ಕಚೇರಿ 8 ಬಾರಿ ಕಾಮಗಾರಿ ಮಾಡಿ 1.22 ಕೋಟಿ ರೂ.ವೆಚ್ಚ ಮಾಡಿದ್ದಾರೆ. ಸೌಥ್ ಎಂಡ್ ಗಡಿಯಾರ ಕಾಮಗಾರಿಗೆ 3.21 ಕೋಟಿ ರೂ.ಗಳಿಗೆ 10 ಬಾರಿ ಬಿಲ್ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಯಡಿಯೂರು ಮಾರುಕಟ್ಟೆಯಲ್ಲಿ 5ವರ್ಷಗಳಲ್ಲಿ 10 ಬಾರಿ ಕಾಮಗಾರಿ ಮಾಡಿ 5ಕೋಟಿ ರೂ.ಖರ್ಚು ಮಾಡಿದ್ದಾರೆ. ಈ ರೀತಿ 500ಕೋಟಿ ರೂ.ಕಾಮಗಾರಿ ಒಂದು ವಾರ್ಡ್‍ನಲ್ಲಿ ನಡೆದಿದೆ. ಉಳಿದ ವಾರ್ಡ್‍ಗಳ ಮಾಹಿತಿಯನ್ನು ಕೇಳಿದ್ದೇವೆ. ಅಶೋಕ್ ಪದ್ಮನಾಭನಗರ, ಬೆಂಗಳೂರು, ರಾಜ್ಯದ ಹಿತದೃಷ್ಟಿಯಿಂದ ನಿಮ್ಮ ಕ್ಷೇತ್ರದ ಕಾಮಗಾರಿ ಬಗ್ಗೆ ಲೋಕಾಯುಕ್ತ ತನಿಖೆಗೆ ಆದೇಶ ನೀಡಬೇಕು ಎಂದು ರಮೇಶ್ ಬಾಬು ಆಗ್ರಹಿಸಿದರು.

ಒಂದು ವಾರದ ಹಿಂದೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ್ ಕಾಂಗ್ರೆಸ್ ಶಾಸಕ ರಘುಮೂರ್ತಿ ಮೇಲೆ ನಿಂದನೆ ಮಾಡಿ ಸಭೆ ಬಹಿಷ್ಕರಿಸಿ ಹೋಗಿದ್ದಾರೆ. ಆ ತಹಶೀಲ್ದಾರ್ ಮೇಲೆ ಅಕ್ರಮ ಸಂಬಂಧ ದಾಳಿ ನಡೆದಿದೆ. ಅವರ ಮೇಲೆ ಆರೋಪವಿದ್ದರೂ ಈ ಸರಕಾರ ಅವರಿಗೆ ಮತ್ತೆ ಅಧಿಕಾರ ನೀಡಿದ್ದು ಯಾಕೆ? ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸರಕಾರ ಬಂದ ನಂತರ ಕ್ಲಾಸ್ 1 ಹುದ್ದೆ ತುಂಬುತ್ತಿಲ್ಲ. ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿರುವವರಲ್ಲಿ ಶೇ.50ರಷ್ಟು ಭಡ್ತಿ ಮೂಲಕ ಬಂದಿದ್ದರೆ, ಉಳಿದವರು ಆರೋಪ ಹೊತ್ತಿರುವವರನ್ನು ಕಂದಾಯ ಇಲಾಖೆ ಮೂಲಕ ತಹಶೀಲ್ದಾರ್ ಹುದ್ದೆ ನೀಡಿ ದಂಧೆ ಮಾಡಲಾಗುತ್ತಿದೆ. ಚಳ್ಳಕೆರೆ ತಹಶೀಲ್ದಾರ್‍ರನ್ನು ಅಮಾನತು ಮಾಡಬೇಕು ಎಂದು ರಮೇಶ್ ಬಾಬು ಒತ್ತಾಯಿಸಿದರು. 

ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದ್ದು, ಯಡಿಯೂರಪ್ಪ, ಬೊಮ್ಮಾಯಿ ನಾನೊಂದು ತೀರಾ ನೀನೊಂದು ತೀರದಂತಾಗಿದ್ದಾರೆ. ದಿಲ್ಲಿಯ ಕಾರ್ಯಕಾರಣಿ ಸಭೆಯಲ್ಲಿ ಯಡಿಯೂರಪ್ಪ ಬೆಂಬಲಿಗ 30 ಶಾಸಕರು ಸಹಿ ಮಾಡಿ ಬೊಮ್ಮಾಯಿ ನಾಯಕತ್ವ ಬದಲಾಗಬೇಕು ಎಂದು ಪತ್ರ ಬರೆದಿದ್ದಾರೆ. ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮುಗಿಲು ಮುಟ್ಟಿದೆ ಎಂದು ಅವರು ಹೇಳಿದರು.

ಇದೇ ಕಾರಣಕ್ಕೆ ಅಮಿತ್ ಶಾ ಮಂಡ್ಯಕ್ಕೆ ಬಂದಾಗ ಯಡಿಯೂರಪ್ಪ ತಪ್ಪಿಸಿಕೊಂಡರು.  ನಳೀನ್ ಕುಮಾರ್, ಸಿ.ಟಿ.ರವಿ ಅವರದ್ದು ಒಂದು ತಂಡ, ಯತ್ನಾಳ್ ಅವರದ್ದು ಮತ್ತೊಂದು ತಂಡ, ಬೊಮ್ಮಾಯಿ, ಯಡಿಯೂರಪ್ಪನವರದ್ದು ಮತ್ತೊಂದು ತಂಡವಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‍ಗೆ ನಾಯಕರ ಜತೆ ವ್ಯವಹಾರ ಮಾಡಲು ಸಮಯ ಸಾಲುತ್ತಿಲ್ಲ ಎಂದು ರಮೇಶ್ ಬಾಬು ಟೀಕಿಸಿದರು.

share
Next Story
X