ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ ವಾರ್ಷಿಕೋತ್ಸವ

ಮಂಗಳೂರು, ಜ.24: ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟ (ದ.ಕ. ಮತ್ತು ಉಡುಪಿ ಜಿಲ್ಲೆ)ದ 2ನೇ ವಾರ್ಷಿಕೋತ್ಸವವು ಶಾರದಾ ಶಾಲಾ ಮೈದಾನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಸುಲ್ತಾನ್ ಬಿಲ್ಡರ್ಸ್ ಡೆವಲಪರ್ಸ್ನ ಮ್ಯಾನೇಜಿಂಗ್ ಡೈರೆಕ್ಟರ್ ಯು.ಬಿ.ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು.
ಇದೇವೇಳೆ ಬ್ಯಾರಿ ಸಂಗೀತ ಕಲಾವಿದರಿಗೆ ಕ್ರಿಕೆಟ್ ಪಂದ್ಯಾಟ, ವಿಶೇಷ ಚೇತನರಿಗೆ ವಿಲ್ ಚೆಯರ್ ವಿತರಣೆ, ಸಾಧಕರಿಗೆ ಸನ್ಮಾನ ಮತ್ತು ಅರ್ಹ ಕಲಾವಿದರಿಗೆ ಧನ ಹಸ್ತಾಂತರಿಸಲಾಯಿತು. ರಾಝ್ ಕಲಾಯಿ ನಾಯಕತ್ವದ ಬ್ಯಾರಿ ಸ್ಟಾರ್ ತಂಡ ಎರಡನೇ ಬಾರಿಗೆ ಚಾಂಪಿಯನ್ ಆಗಿ ಮೂಡಿಬಂದಿದ್ದು, ಸಿನಾನ್ ಚಿನ್ನು ನಾಯಕತ್ವದ ಕಿಂಗ್ಸ್ ತಂಡ ರನ್ನರ್ಸ್ ಅಪ್ ಪ್ರಶಸ್ತಿ ಗಳಿಸಿತು. ಕಾರ್ಯಕ್ರಮದಲ್ಲಿ ರಫೀಕ್ ಮಾಸ್ಟರ್, ಕವಿ, ಸಾಹಿತಿಗಳಾದ ಹುಸೈನ್ ಕಾಟಿಪಳ್ಳ, ಬಶೀರ್ ಅಹ್ಮದ್ ಕಿನ್ಯ, ಆಶ್ರಫ್ ಅಪೋಲೊ, ರಶೀದ್ ನಂದಾವರ, ಯಾಸಿರ್ ಯಾಚಿ ಮತ್ತು ಸಫ್ವಾನ್ ಪತ್ತುಂಜಿಯವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ತುಂಬೆ, ನ್ಯೂ ಸ್ಮಾರ್ಟ್ ಇಲೆಕ್ಟ್ರಿಕಲ್ನ ಮಾಲಕ ಅಬ್ದುಸ್ಸಮದ್ ಸಾಮಾಣಿಗೆ, ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಶಮೀರ್ ಮುಲ್ಕಿ, ಪ್ರ. ಕಾರ್ಯದರ್ಶಿ ಸರ್ಫರಾಝ್ ಮಂಗಳೂರು, ಜೊತೆ ಕಾರ್ಯದರ್ಶಿ ಸಿದ್ದೀಕ್ ಪಾಂಡವರಕಲ್ಲು, ಕೋಶಾಧಿಕಾರಿ ರಾಝ್ ಕಲಾಯಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಲಾವಿದರಿಗಾಗಿ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗಿತು.
