Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯ ಹುಟ್ಟುಹಬ್ಬ: ಪ್ಲ್ಯಾಟ್ ಗೆ...

ಮಹಿಳೆಯ ಹುಟ್ಟುಹಬ್ಬ: ಪ್ಲ್ಯಾಟ್ ಗೆ ನುಗ್ಗಿ ಬಜರಂಗದಳ ಗುಂಪಿನಿಂದ ಮುಸ್ಲಿಮ್ ಸ್ನೇಹಿತರ ಮೇಲೆ ಹಲ್ಲೆ

24 Jan 2023 9:24 PM IST
share
ಮಹಿಳೆಯ ಹುಟ್ಟುಹಬ್ಬ: ಪ್ಲ್ಯಾಟ್ ಗೆ ನುಗ್ಗಿ ಬಜರಂಗದಳ ಗುಂಪಿನಿಂದ ಮುಸ್ಲಿಮ್ ಸ್ನೇಹಿತರ ಮೇಲೆ ಹಲ್ಲೆ

ಇಂದೋರ್ (ಮಧ್ಯಪ್ರದೇಶ), ಜ. 24: ಮಧ್ಯಪ್ರದೇಶದ ಇಂದೋರ್ನಲ್ಲಿ ಬಜರಂಗ ದಳ ಕಾರ್ಯಕರ್ತರ ಗುಂಪೊಂದು ಮಹಿಳೆಯೊಬ್ಬರ ಫ್ಲಾಟ್ಗೆ ನುಗ್ಗಿ ಅವರ ಪುರುಷ ಮುಸ್ಲಿಮ್ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ‘ದ ಕ್ವಿಂಟ್’ ವರದಿ ಮಾಡಿದೆ. ಈ ಮುಸ್ಲಿಮ್ ವ್ಯಕ್ತಿಗಳು ‘ಲವ್ ಜಿಹಾದ್’ನಲ್ಲಿ ತೊಡಗಿದ್ದಾರೆ ಎಂಬುದಾಗಿ ಹಲ್ಲೆಕೋರರು ಆರೋಪಿಸಿದ್ದಾರೆ.

ಮಹಿಳೆಯು ಶನಿವಾರ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಸಮಾರಂಭಕ್ಕೆ ತನ್ನ ಐವರು ಮುಸ್ಲಿಮ್ ಸ್ನೇಹಿತರನ್ನು ಆಹ್ವಾನಿಸಿದ್ದರು. ಆಗ ಬಜರಂಗ ದಳ ಕಾರ್ಯಕರ್ತರು ಮಹಿಳೆಯ ಮನೆಗೆ ನುಗ್ಗಿ ಮುಸ್ಲಿಮ್ ಪುರುಷರ ಮೇಲೆ ಹಲ್ಲೆ ನಡೆಸಿತು ಎಂದು ‘ದ ಕ್ವಿಂಟ್’ ಹೇಳಿದೆ.

ಬಳಿಕ ಹಲ್ಲೆಕೋರರು ಮುಸ್ಲಿಮ್ ವ್ಯಕ್ತಿಗಳು ಮತ್ತು ಮಹಿಳೆಯನ್ನು ನಗರದ ಎಮ್ಐಜಿ ಕಾಲನಿ ಪೊಲೀಸ್ ಠಾಣೆಗೆ ಒಯ್ದು, ದೂರು ದಾಖಲಿಸುವಂತೆ ಮಹಿಳೆಯನ್ನು ಬಲವಂತಪಡಿಸಿದೆ ಎನ್ನಲಾಗಿದೆ. ಆದರೆ, ಯಾರ ವಿರುದ್ಧವೂ ದೂರು ದಾಖಲಿಸಲು ಮಹಿಳೆ ನಿರಾಕರಿಸಿದರು.

‘‘ಈ ಪ್ರಕರಣದಲ್ಲಿ ಧರ್ಮದ ವಿಷಯವಿದೆಯೇ ಎಂಬ ಬಗ್ಗೆ ನಾನು ಏನೂ ಹೇಳಲಾರೆ. ತನಿಖೆ ನಡೆಯುತ್ತಿದೆ’’ ಎಂದು ಸಬ್ ಇನ್ಸ್ಪೆಕ್ಟರ್ ಸೀಮಾ ಶರ್ಮ ಹೇಳಿರುವುದಾಗಿ ‘ಸಿಯಾಸಾತ್’ ವರದಿ ಮಾಡಿದೆ.

ಪೆಟ್ಟು ತಿಂದವರಿಗೆ ಜೈಲು; ಹಲ್ಲೆಕೋರರ ವಿರುದ್ಧ ‘‘ದೂರಿಲ್ಲ’’

ಪೊಲೀಸರು ಶನಿವಾರ ಐವರು ಮುಸ್ಲಿಮ್ ಪುರುಷರನ್ನು ಭಾರತೀಯ ದಂಡ ಸಂಹಿತೆಯ 151ನೇ ಪರಿಚ್ಛೇದ (ಸಾರ್ವಜನಿಕ ಶಾಂತಿ ಕದಡುವ ಉದ್ದೇಶದಿಂದ ಐವರು ಅಥವಾ ಅದಕ್ಕಿಂತ ಹೆಚ್ಚಿನ ವ್ಯಕ್ತಿಗಳು ಒಟ್ಟು ಸೇರಿರುವುದು)ದಡಿ ಜೈಲಿಗೆ ಕಳುಹಿಸಿದ್ದಾರೆ.

‘‘ಎರಡು ತಂಡಗಳ ನಡುವಿನ ಘರ್ಷಣೆ ಮಹಿಳೆಯ ಫ್ಲಾಟ್ನಿಂದ ರಸ್ತೆಗೆ ವರ್ಗಾವಣೆಯಾಯಿತು. ಗುಂಪು ಪೊಲೀಸ್ ಠಾಣೆಗೆ ಬಂದಾಗ ಅವರು ನಮ್ಮ ಠಾಣೆಗೆ ಮುತ್ತಿಗೆ ಹಾಕಿದರು. ಆ ಹಂತದಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳುವುದಕ್ಕಾಗಿ ಐವರು ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಯಿತು’’ ಎಂದು ಎಮ್ಐಜಿ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಜಯ್ ವರ್ಮ ‘ಸ್ಕ್ರಾಲ್.ಇನ್’ಗೆ ಹೇಳಿದರು.

ಹಲ್ಲೆಕೋರರ ವಿರುದ್ಧ ಯಾವುದಾದರೂ ಪ್ರಕರಣ ದಾಖಲಾಗಿದೆಯೇ ಎಂಬ ‘ಸ್ಕ್ರಾಲ್’ ಪ್ರಶ್ನೆಗೆ ಉತ್ತರಿಸಿದ ವರ್ಮ, ‘‘ಯಾರಾದರೂ ಮುಂದೆ ಬಂದು ದೂರು ದಾಖಲಿಸಬೇಕು. ದೂರು ದಾಖಲಾಗದಿದ್ದರೆ ನಾವು ಕ್ರಮ ತೆಗೆದುಕೊಳ್ಳುವಂತಿಲ್ಲ’’ ಎಂದರು.‌

#INDORE

A herd of Bajrang Dal men barged inside a flat of 24-YO girl who was celebrating her birthday with 5-6 friends.

Alleging Love-Jihad, they withheld her Muslim friends, abused, assaulted them & let her Hindu friends go.

Amid slogans, they took them to MIG PS in a bid
1/3 pic.twitter.com/jaA7pDsALE

— काश/if Kakvi (@KashifKakvi) January 22, 2023
share
Next Story
X