Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಐಟಿ ನಿಯಮಗಳನ್ನು ಸಂಸತ್ ಸಮಿತಿಗಳು...

ನೂತನ ಐಟಿ ನಿಯಮಗಳನ್ನು ಸಂಸತ್ ಸಮಿತಿಗಳು ಚರ್ಚಿಸಿಲ್ಲ,ಆದರೂ ಸರಕಾರ ಅವುಗಳನ್ನು ಬಳಸಿದೆ!: ವರದಿ

ಆರ್ಟಿಐ ಉತ್ತರದಲ್ಲಿ ಬಹಿರಂಗ

24 Jan 2023 10:19 PM IST
share
ನೂತನ ಐಟಿ ನಿಯಮಗಳನ್ನು ಸಂಸತ್ ಸಮಿತಿಗಳು ಚರ್ಚಿಸಿಲ್ಲ,ಆದರೂ ಸರಕಾರ ಅವುಗಳನ್ನು ಬಳಸಿದೆ!: ವರದಿ
ಆರ್ಟಿಐ ಉತ್ತರದಲ್ಲಿ ಬಹಿರಂಗ

ಹೊಸದಿಲ್ಲಿ,ಜ.24: ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ತಾನು ರೂಪಿಸಿರುವ ಹೊಸ ನಿಯಮಗಳು ಸಂಸತ್ತಿನಲ್ಲಿ ಚರ್ಚೆಯಾಗಿರದಿದ್ದರೂ ಸರಕಾರವು ಕಳೆದೆರಡು ವರ್ಷಗಳಿಂದ ಅವುಗಳನ್ನು ಸಕ್ರಿಯವಾಗಿ ಬಳಸುತ್ತಿದೆ. ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿಯ ಅಧೀನ ಶಾಸನ ಸಮಿತಿಗಳು ಹೊಸ ನಿಯಮಗಳನ್ನು ಚರ್ಚೆಗೆತ್ತಿಕೊಂಡಿಲ್ಲ ಎನ್ನುವುದನ್ನು ಆರ್ಟಿಐ ಉತ್ತರವೊಂದು ಬಹಿರಂಗಗೊಳಿಸಿದೆ ಎಂದು thewire.in ವರದಿ ಮಾಡಿದೆ  

ಸಾಮಾಜಿಕ ಮಾಧ್ಯಮಗಳು,ಒಟಿಟಿ ವೇದಿಕೆಗಳು ಮತ್ತು ಡಿಜಿಟಲ್ ಸುದ್ದಿಸಂಸ್ಥೆಗಳನ್ನು ಕಾಯ್ದೆಯ ವ್ಯಾಪ್ತಿಗೊಳಪಡಿಸಲು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು,2021ನ್ನು ಫೆ.25,2021ರಂದು ಅಧಿಸೂಚಿಸಲಾಗಿತ್ತು. ಸಾಮಾನ್ಯವಾಗಿ ಈ ರೀತಿಯ ನಿಯಮಗಳನ್ನು ಚರ್ಚೆಗಾಗಿ 15 ದಿನಗಳಲ್ಲಿ ಸಂಸತ್ತಿನಲ್ಲಿ ಮಂಡಿಸಬೇಕು. ಆದರೆ ಆರ್ಟಿಐ ಕಾರ್ಯಕರ್ತ ವೆಂಕಟೇಶ ನಾಯಕ್ ಅವರು ಸಲ್ಲಿಸಿದ್ದ ಅರ್ಜಿಗೆ ನೀಡಿರುವ ಉತ್ತರದಲ್ಲಿ ಲೋಕಸಭಾ ಸಚಿವಾಲಯವು, ಈ ನಿಯಮಗಳನ್ನು ಈವರೆಗೆ ಸಂಸತ್ತಿನಲ್ಲಿ ಮಂಡಿಸಲಾಗಿರುವ ಬಗ್ಗೆ ತನ್ನ ಬುಲೆಟಿನ್ನಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ತಿಳಿಸಿದೆ.

ಸಂಬಂಧಿತ ಸಚಿವಾಲಯ,ಅಂದರೆ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಅಧಿಸೂಚನೆಯು ಅಧಿಕೃತ ಗೆಜೆಟ್ನಲ್ಲಿ ಪ್ರಕಟಗೊಂಡ 15 ದಿನಗಳಲ್ಲಿ ಅದನ್ನು ಸದನದಲ್ಲಿ ಮಂಡಿಸಲು ರವಾನಿಸಿರಲಿಲ್ಲ ಎಂಬಂತೆ ತೋರುತ್ತಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಇಂತಹ ಎಲ್ಲ ಅಧಿಸೂಚನೆಗಳು ತನ್ನ ವೆಬ್ಸೈಟ್ನಲ್ಲಿ ಸಾರ್ವಜನಿಕವಾಗಿ ಲಭ್ಯವಿವೆ ಎಂದು ರಾಜ್ಯಸಭಾ ಸಚಿವಾಲಯವು ತಿಳಿಸಿದೆ. ನಿಯಮಗಳನ್ನು 2021,ಮಾ.25ರಂದು ರಾಜ್ಯಸಭೆಯಲ್ಲಿ ಮಂಡಿಸಿರುವುದನ್ನು ಅದರ ಬುಲೆಟಿನ್ ತೋರಿಸಿದೆ.

ತೀರ ಇತ್ತೀಚಿಗೆ ಕೇಂದ್ರ ಸರಕಾರವು 2002ರ ಗುಜರಾತ್ ಗಲಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವಿತ್ತು ಎಂದು ಹೇಳಿರುವ ಬಿಬಿಸಿ ಸಾಕ್ಷಚಿತ್ರದ ಲಿಂಕ್ಗಳನ್ನು ಹೊಂದಿರುವ ಪೋಸ್ಟ್ ಗಳನ್ನು ತೆಗೆದುಹಾಕುವಂತೆ ಯೂಟ್ಯೂಬ್ ಮತ್ತು ಟ್ವಿಟರ್ ಗೆ ನಿರ್ದೇಶನ ನೀಡಲು ಈ ನಿಯಮಗಳನ್ನು ಬಳಸಿಕೊಂಡಿದೆ.

ಪೋಸ್ಟ್ಗಳನ್ನು ತೆಗೆದುಹಾಕಲು ಕಾರಣಗಳನ್ನು ವಿವರಿಸುವ ಸಾಕ್ಷಚಿತ್ರ ನಿರ್ಬಂಧ ಆದೇಶಗಳನ್ನು ಸರಕಾರವು ಹಂಚಿಕೊಂಡಿಲ್ಲ ಎಂದು ನಾಯಕ್ ಎತ್ತಿ ತೋರಿಸಿದರು. ಐಟಿ ನಿಯಮಗಳಡಿ ಸರಕಾರವು ಈ ಕಾರಣಗಳನ್ನು ಲಿಖಿತ ರೂಪದಲ್ಲಿ ನೀಡಬೇಕು. ಈ ಹಿಂದೆಯೂ ಆರ್ಟಿಐ ಕಾಯ್ದೆಯಡಿ ತಾನು ಇತರ ಪ್ರಕರಣಗಳಲ್ಲಿ ನಿರ್ಬಂಧಕ ಆದೇಶಗಳನ್ನು ಕೋರಿದ್ದೆ. ಆದರೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರ್ಟಿಐ ಕಾಯ್ದೆಯ ಕಲಂ 8(1)(ಎ) ಅಡಿ ರಾಷ್ಟ್ರೀಯ ಭದ್ರತಾ ವಿನಾಯಿತಿಯ ಕಾರಣದಿಂದ ಉತ್ತರವನ್ನು ನೀಡಲು ನಿರಾಕರಿಸಿತ್ತು ಎಂದು ಅವರು ಹೇಳಿದರು.

ಬಿಬಿಸಿ ಸಾಕ್ಷಚಿತ್ರದ ವಿರುದ್ಧದ ಇತ್ತೀಚಿನ ಕ್ರಮ ಸೇರಿದಂತೆ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ವೇದಿಕೆಗಳಲ್ಲಿ ವಿಷಯಗಳನ್ನು ನಿರ್ಬಂಧಿಸುವಾಗ ಮತ್ತು ನಂತರದಲ್ಲಿ ತನ್ನ ಕ್ರಮಗಳ ಕುರಿತು ಹೆಚ್ಚು ಪಾರದರ್ಶಕವಾಗಿರಲು ಕೇಂದ್ರ ಸರಕಾರದ ಹಿಂಜರಿಯುವಿಕೆಯು ಅದರ ಉದ್ದೇಶಗಳ ಬಗ್ಗೆ ಶಂಕೆಯನ್ನು ಹುಟ್ಟಿಸುತ್ತದೆಯಷ್ಟೇ ಎಂದು ಹೇಳಿದ ನಾಯಕ್,ಇಂತಹ ವಿಷಯಗಳನ್ನು ನಿರ್ಬಂಧಿಸಲು 2021ರ ನಿಯಮಗಳಡಿ ತನ್ನ ಅಧಿಕಾರವನ್ನು ಚಲಾಯಿಸಲು ಬಲವಾದ ಪ್ರಕರಣವಿದೆ ಎಂದು ಸರಕಾರವು ನಂಬಿದ್ದರೆ ಅದು ಇಂತಹ ಆದೇಶಗಳನ್ನು ಮತ್ತು ಎಲ್ಲ ದಾಖಲೆಗಳನ್ನು ಬಹಿರಂಗಗೊಳಿಸಬೇಕು ಎಂದರು.

share
Next Story
X