Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭ್ರಷ್ಟಾಚಾರ ಆರೋಪ: ಉಕ್ರೇನ್ ನ ಹಲವು...

ಭ್ರಷ್ಟಾಚಾರ ಆರೋಪ: ಉಕ್ರೇನ್ ನ ಹಲವು ಸಚಿವರು, ಅಧಿಕಾರಿಗಳ ರಾಜೀನಾಮೆ

24 Jan 2023 11:21 PM IST
share
ಭ್ರಷ್ಟಾಚಾರ ಆರೋಪ: ಉಕ್ರೇನ್ ನ ಹಲವು ಸಚಿವರು, ಅಧಿಕಾರಿಗಳ ರಾಜೀನಾಮೆ

ಕೀವ್,ಜ.24: ರಶ್ಯ ಉಕ್ರೇನ್ ಮೇಲೆ ಆಕ್ರಮಣ ನಡೆಸಿದ ಬಳಿಕ ಬಹಿರಂಗಗೊಂಡ ಬೃಹತ್ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿ ಪ್ರಾದೇಶಿಕ ರಾಜ್ಯಪಾಲರು ಹಾಗೂ ಸಹಾಯಕ ಸಚಿವರು ಸೇರಿದಂತೆ ಹಲವಾರು ಅಧಿಕಾರಿಗಳು ರಾಜೀನಾಮೆ ನೀಡಿರುವುದಾಗಿ ಉಕ್ರೇನ್ ಸರಕಾರ ಮಂಗಳವಾರ ಘೋಷಿಸಿದೆ.

 ಉಕ್ರೇನ್ನ ಈ ಹಿಂದಿನಿಂದಲೂ ಭ್ರಷ್ಟಾಚಾರದ ಹಗರಣಗಳಿಂದ ಬಾಧಿತವಾಗಿದೆ. ಅಲ್ಲಿನ ಹಲವಾರು ಪ್ರಮುಖ ರಾಜಕಾರಣಿಗಳ ವಿರುದ್ಧವೂ ಭಾರೀ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಆದರೆ ದೇಶದಲ್ಲಿ ತಾಂಡವವಾಡುತ್ತಿರುವ ಲಂಚಗುಳಿತನವನ್ನು ನಿರ್ಮೂಲಗೊಳಿಸುವ ಉಕ್ರೇನ್ ಸರಕಾರದ ಪ್ರಯತ್ನಗಳು ಕಳೆದ ಫೆಬ್ರವರಿಯಲ್ಲಿ ರಶ್ಯವು ಪೂರ್ಣ ಪ್ರಮಾಣದ ಯುದ್ಧವನ್ನು ಘೋಷಿಸಿದ ಬಳಿಕ ತಟಸ್ಥಗೊಂಡಿದ್ದವು.

    ಉಕ್ರೇನ್ಗೆ ಬಿಲಿಯಾಂತರ ಡಾಲರ್ ಹಣಕಾಸು ಹಾಗೂ ಮಿಲಿಟರಿ ಬೆಂಬಲವನ್ನು ಒದಗಿಸುತ್ತಿರುವ ಪಾಶ್ಚಾತ್ಯ ಮಿತ್ರರಾಷ್ಟ್ರಗಳು, ಹಲವಾರು ವರ್ಷಗಳಿಂದ ಆ ದೇಶವು ಭ್ರಷ್ಟಾಚಾರ ವಿರೋಧಿ ಸುಧಾರಣೆಗಳನ್ನು ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಾ ಬಂದಿವೆ. ಆರ್ಥಿಕ ನೆರವು ನೀಡಬೇಕಾದರೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂಬ ಪೂರ್ವಭಾವಿ ಶರತ್ತನ್ನು ಕೂಡಾ ಅವು ಹಲವು ಸಂದರ್ಭಗಳಲ್ಲಿ ವಿಧಿಸಿದ್ದವು.

 ರಶ್ಯ ಹಾಗೂ ಉಕ್ರೇನ್ ಸೇನೆಯ ನಡುವೆ ಭೀಕರ ಕಾಳಗ ನಡೆಯುತ್ತಿರುವ ಪ್ರದೇಶಗಳಿಗೆ ಸೇರಿದ ಐದು ಪ್ರಾಂತೀಯ ರಾಜ್ಯಪಾಲರುಗಳು ರಾಜೀನಾಮೆ ನೀಡಿರುವುದನ್ನು ಕೂಡಾ ಉಕ್ರೇನ್ನ ಹಿರಿಯ ಸರಕಾರಿ ಅಧಿಕಾರಿ ಒಲೆಗ್ ನೆಮ್ಚಿನೊವ್ ದೃಢಪಡಿಸಿದ್ದಾರೆ. ಡಿನಿಪ್ರೊಪೆಟ್ರೊವ್ಸ್ಕ್, ಈಶಾನ್ಯ ಸುಮಿ ಪ್ರಾಂತ, ದಕ್ಷಿಣ ಝಫೋರ್ಝ್ಝಿಯಾ ಹಾಗೂ ಖೆರ್ಸನ್ ಪ್ರಾಂತಗಳ ರಾಜ್ಯಪಾಲರುಗಳು ರಾಜೀನಾಮೆ ನೀಡಿದವರಲ್ಲಿ ಸೇರಿದ್ದಾರೆಂದು ಅವರು ಹೇಳಿದ್ದಾರೆ.

  ಇದೇ ವೇಳೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಸಹಾಯಕ ರಕ್ಷಣಾ ಸಚಿವ, ವಸತಿ ಹಾಗೂ ಪ್ರಾಂತೀಯ ಅಭಿವೃದ್ಧಿ ಇಲಾಖೆಯ ಇಬ್ಬರು ಸಹಾಯಕ ಸಚಿವರು ಹಾಗೂ ಸಾಮಾಜಿಕ ನೀತಿ ಕುರಿತ ಸಹಾಯಕ ಸಚಿವರನ್ನು ವಜಾಗೊಳಿಸಲಾಗಿದೆಯೆಂದು ನೆಮಿಚಿನೊವ್ ಪ್ರಕಟಿಸಿದ್ದಾರೆ.

ಅಧ್ಯಕ್ಷೀಯ ಆಡಳಿತದ ಉಪವರಿಷ್ಠ ಕಿರಿಲೊ ಟಿಮೊಶೆಂಕೊ ಹಾಗೂ ಉಪ ಸರಕಾರಿ ಅಭಿಯೋಜಕ ಜನರಲ್ ಓಲೆಕ್ಸಿಯ್ ಸಿಮೊನೆಂಕೊ ಕೂಡಾ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

  ಈ ಮಧ್ಯೆ ಉಪ ರಕ್ಷಣಾ ಸಚಿವ ಹಾಗೂ ಸೇನೆಯ ಸರಕುಸಾಗಣೆ ವ್ಯವಸ್ಥೆಯ ಉಸ್ತುವಾರಿ ವಿಯಾಚೆಸ್ಲಾವ್ ಶಪವೊಲೊವ್ ರಾಜೀನಾಮೆ ನೀಡಿದ್ದಾರೆಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ. ಅಧಿಕ ದರಗಳಿಗೆ ಆಹಾರ ಪೂರೈಕೆಯ ಗುತ್ತಿಗೆಗೆಗಳಿಗೆ ಸಹಿಹಾಕಿದ್ದಾರೆಂಬ ಆರೋಪವನ್ನು ಅವರು ಎದುರಿಸುತ್ತಿದ್ದರು.

  ಮೂಲಭೂತ ಆಹಾರವಸ್ತುಗಳ ಪ್ರಚಲಿತ ಬೆಲೆಗಿಂತ ಎರಡು ಅಥವಾ ಮೂರು ಪಟ್ಟು ಅಧಿಕ ದರದಲ್ಲಿ ಪೂರೈಕೆ ಮಾಡುವ ಗುತ್ತಿಗೆಗಳಿಗೆ ರಕ್ಷಣಾ ಸಚಿವಾಲಯವು ಸಹಿಹಾಕಿದೆಯೆಂದು ಸ್ಥಳೀಯ ಮಾಧ್ಯಮಗಳು ಆಪಾದಿಸಿದ್ದವು.

2019ರಲ್ಲಿ ಉಕ್ರೇನ್ ಅಧ್ಯಕ್ಷರಾಗಿ ವೊಲೊಡಿಮಿರ್ ಝೆಲೆನ್‌ಸ್ಕಿ ಆಯ್ಕೆಯಾದ ಬಳಿಕ ಕಿರಿಲೊ ಟಿಮೆಶೆಂಕೊ ಅವರು ಪ್ರಾದೇಶಿಕ ನೀತಿಯ ಉಸ್ತುವಾರಿ ವಹಿಸಿದ್ದರು. ಯುದ್ಧಕಾಲದಲ್ಲಿ ಅವರು ಅತ್ಯಂತ ವೈಭೋವೋಪೇತ ಜೀವನವನ್ನು ನಡೆಸುತ್ತಿದ್ದಾರೆಂದು ತನಿಖಾ ವರದಿಗಾರರು ಆರೋಪಿಸಿದ್ದರು

share
Next Story
X