Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದರಾಮಯ್ಯ ಮನೆ ಮೇಲೆ ಐಟಿ, ಈ.ಡಿ ದಾಳಿ...

ಸಿದ್ದರಾಮಯ್ಯ ಮನೆ ಮೇಲೆ ಐಟಿ, ಈ.ಡಿ ದಾಳಿ ನಡೆಸಿದರೆ ನಿಮಗೆ 35 ಜತೆ ಪಂಚೆ, ಜುಬ್ಬಾ ಸಿಗುತ್ತೆ: ಎಂ.ಲಕ್ಷ್ಮಣ್

35 ಸಾವಿರ ಕೋಟಿ ರೂ.ಭ್ರಷ್ಟಾಚಾರ ನಡೆದಿದೆ ಎಂಬ ಸಚಿವರ ಹೇಳಿಕಗೆ ತಿರುಗೇಟು

24 Jan 2023 11:48 PM IST
share
ಸಿದ್ದರಾಮಯ್ಯ ಮನೆ ಮೇಲೆ ಐಟಿ, ಈ.ಡಿ ದಾಳಿ ನಡೆಸಿದರೆ ನಿಮಗೆ 35 ಜತೆ ಪಂಚೆ, ಜುಬ್ಬಾ ಸಿಗುತ್ತೆ: ಎಂ.ಲಕ್ಷ್ಮಣ್
35 ಸಾವಿರ ಕೋಟಿ ರೂ.ಭ್ರಷ್ಟಾಚಾರ ನಡೆದಿದೆ ಎಂಬ ಸಚಿವರ ಹೇಳಿಕಗೆ ತಿರುಗೇಟು

ಬೆಂಗಳೂರು, ಜ.24: ಸಚಿವ ಡಾ.ಕೆ.ಸುಧಾಕರ್, ಶಾಸಕ ಪಿ.ರಾಜೀವ್, ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಸೇರಿದಂತೆ ಬಿಜೆಪಿ ನಾಯಕರು 2013ರಿಂದ 2018ರ ವರೆಗೆ ಸಿಎಜಿ ವರದಿ ಉಲ್ಲೇಖಿಸಿ ಆ ವರದಿಯ ದಾಖಲೆ ನೀಡದೆ 35 ಸಾವಿರ ಕೋಟಿ ರೂ.ಭ್ರಷ್ಟಾಚಾರ ನಡೆದಿದೆ ಎಂದು ಹಸಿ ಸುಳ್ಳು ಹೇಳಿದ್ದಾರೆಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಎಜಿ ವರದಿಯಲ್ಲಿ 35 ಸಾವಿರ ಕೋಟಿ ರೂ.ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖವಾಗಿದ್ದರೆ ಬಿಜೆಪಿಯವರು ಏನೇ ಶಿಕ್ಷೆ ನೀಡಿದರೂ ನಾವು ಸ್ವೀಕರಿಸಲು ಸಿದ್ಧ ಎಂದು ಸವಾಲು ಹಾಕಿದರು. 

ಸಿಎಜಿ ವರದಿ ಪ್ರಕಾರ ಮೂರುವರೆ ವರ್ಷಗಳ ಅವಧಿಯಲ್ಲಿ 60 ಸಾವಿರ ಕೋಟಿಯಷ್ಟು ಹಣ ಏರುಪೇರಾಗಿದೆ. ಅಂದರೆ ಬಿಜೆಪಿ ಸರಕಾರದಲ್ಲಿ 60 ಸಾವಿರ ಕೋಟಿಯಷ್ಟು ಹಗರಣವಾಗಿದೆ ಎಂದು ನೇರವಾಗಿ ಹೇಳಬಹುದೇ? ಎಂದು ಲಕ್ಷ್ಮಣ್ ಪ್ರಶ್ನಿಸಿದರು.

ಸುಧಾಕರ್ ಚರ್ಚೆಗೆ ಬರಲಿ: ಸುಧಾಕರ್ 2008ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ನಿಂತಾಗ ಎಲ್ಲಿ ಕೆಲಸಮಾಡುತ್ತಿದ್ದಿರಿ? ಈಗ ಎಷ್ಟು ಕೋಟಿಗೆ ಬಾಳುತ್ತೀರಿ ಎಂದು ಬಹಿರಂಗ ಚರ್ಚೆಗೆ ಬನ್ನಿ ಅಥವಾ ತನಿಖೆ ನಡೆಯಲಿ. ಸಚಿವರಾದ ನಂತರ ಎಷ್ಟು ಹಣ ಲೂಟಿ ಮಾಡಿದ್ದೀರಿ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಧ್ಯಮಗೋಷ್ಠಿ ಮಾಡಿ ಮಾಹಿತಿ ದಾಖಲೆ ನೀಡಿದ್ದಾರೆ ಎಂದು ಅವರು ಹೇಳಿದರು.

ಕೆಂಪಣ್ಣ ಪ್ರಕಾರ 2 ಸಾವಿರ ಕೋಟಿಯಷ್ಟು ಕಾಮಗಾರಿ ಪ್ರಾಥಮಿಕ ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿದ್ದು, ಅದನ್ನು ಇವರು ಟೆಂಡರ್ ಹಾಕುವ ಮುನ್ನವೇ ಶೇ.5ರಷ್ಟು ಕಮಿಷನ್ ನೀಡಬೇಕು. ಅರ್ಜಿ ಹಾಕಿದ ನಂತರ ಶೇ.5ರಷ್ಟು, ಟೆಂಡರ್ ಸಿಕ್ಕ ನಂತರ ಮೊದಲ ಹಂತದಲ್ಲಿ ಶೇ.10ರಷ್ಟು, ಕಾಮಗಾರಿ ಶೇ.75ರಷ್ಟು ಮುಗಿಯುವ ಒಳಗೆ ಉಳಿದ ಶೇ.20ರಷ್ಟು ಕಮಿಷನ್ ನೀಡಬೇಕಾಗಿದೆ. ಇದು ಕೆಂಪಣ್ಣನವರ ಆರೋಪ ಎಂದು ಲಕ್ಷ್ಮಣ್ ತಿಳಿಸಿದರು.

ಕೋವಿಡ್ ಸಮಯದಲ್ಲಿ 50 ರೂ.ಬೆಲೆಯ ಮಾಸ್ಕ್ ಅನ್ನು 350 ರೂ.ಗೆ ಖರೀದಿ ಮಾಡಿದ್ದಾರೆ. ಆಸ್ಪತ್ರೆ ಬೆಡ್ ದಂಧೆ ಮಾಡಿದ್ದಾರೆ. ಎಲ್ಲ ಉಪಕರಣಗಳಲ್ಲಿ ಸುಳ್ಳು ಲೆಕ್ಕ ಬರೆದು 100 ಕೋಟಿ ಖರ್ಚಾದರೆ 400 ಕೋಟಿ ಮಾಡಿ ಲೂಟಿ ಮಾಡಿದ್ದಾರೆ. ಇವರೊಬ್ಬರೇ ಸುಮಾರು 1200 ಕೋಟಿ ಲೂಟಿ ಮಾಡಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ ಎಂದು ಅವರು ಹೇಳಿದರು. 

ಈ.ಡಿ.ಗೆ ದೂರು ನೀಡಲು ಸಿದ್ಧತೆ: ಚಿಕ್ಕಬಳ್ಳಾಪುರದಲ್ಲಿನ ಶೇ.60ರಷ್ಟು ಸಿವಿಕ್ ಕಾಮಗಾರಿಗಳನ್ನು ಸುಧಾಕರ್ ಸಂಬಂಧಿಕರಿಗೆ ಗುತ್ತಿಗೆ ನೀಡಲಾಗಿದೆ. ತಮ್ಮ ಪತ್ನಿ ಹೆಸರಲ್ಲಿ ಸಾಕಷ್ಟು ಚೆಕ್ ಪಡೆದಿರುವ ಆರೋಪಗಳಿವೆ. ಕಾಂಗ್ರೆಸ್ ಹೈಕಮಾಂಡ್‍ಗೆ ಒಂದು ಸಾವಿರ ಕೋಟಿ ರೂ.ಕಪ್ಪ ಕಾಣಿಕೆ ನೀಡಲಾಗಿದೆ ಆರೋಪಿಸಿರುವ ಕುರಿತು ಸುಧಾಕರ್ ವಿರುದ್ಧ ಈ.ಡಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಲಕ್ಷ್ಮಣ್ ಹೇಳಿದರು.

ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆ, ಮೆಡಿಕಲ್ ಕಾಲೇಜು, ಮಾಲುಗಳನ್ನು ಹೊಂದಿರುವ ಉದ್ಯಮಿ. ತಮ್ಮ ವ್ಯಾಪಾರ ವ್ಯವಹಾರಗಳ ಮೂಲಕ ಹಣ ಸಂಪಾದಿಸುತ್ತಿದ್ದಾರೆ. ಸಿದ್ದರಾಮಯ್ಯ ಮೇಲೂ ನೀವು ನಿಮ್ಮ ಐಟಿ, ಈ.ಡಿ ದಾಳಿ ನಡೆಸಿ ನಿಮಗೆ 35 ಜತೆ ಪಂಚೆ, ಜುಬ್ಬಾ ಸಿಗುತ್ತೆ. ಅದನ್ನು ಬೇಕಾದರೆ ಹೊತ್ತುಕೊಂಡು ಹೋಗಿ ಎಂದು ಅವರು ತಿರುಗೇಟು ನೀಡಿದರು. 

ಸಿ.ಪಿ.ಯೋಗೇಶ್ವರ್, ಯತ್ನಾಳ್ ಅವರ ಹೇಳಿಕೆ ಬಗ್ಗೆ ತನಿಖೆ ಮಾಡಿಸಿ. ಇನ್ನು ಸಚಿವ ಅಶ್ವತ್ಥ ನಾರಾಯಣ ಹಾಗೂ ಅವರ ಸಹೋದರರು ಬೆಂಗಳೂರನ್ನು ಎಷ್ಟು ಲೂಟಿ ಹೊಡೆದಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಹೇಳುತ್ತೇವೆ. ಸೊರಬದಲ್ಲಿ ಮೂರುವರೆ ವರ್ಷಗಳಲ್ಲಿ 16 ತಹಶೀಲ್ದಾರರು ಬದಲಾಗಿದ್ದಾರೆ. ಇಷ್ಟು ದಿನ ವರ್ಷಕ್ಕೊಂದು ವರ್ಗಾವಣೆ ಮಾಡುತ್ತಿದ್ದವರು ಈಗ ತಿಂಗಳಿಗೊಮ್ಮೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಹೇಳಿದರು.

share
Next Story
X