Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ಸರಕಾರದ ಆಯಸ್ಸು ಇನ್ನು 40 ದಿನ ಮಾತ್ರ,...

ಈ ಸರಕಾರದ ಆಯಸ್ಸು ಇನ್ನು 40 ದಿನ ಮಾತ್ರ, ಸಿಎಂ, ಸಚಿವರು ಗಂಟುಮೂಟೆ ಕಟ್ಟಿಕೊಂಡು ಹೊರಡಲಿ: ಡಿಕೆಶಿ

25 Jan 2023 12:08 AM IST
share
ಈ ಸರಕಾರದ ಆಯಸ್ಸು ಇನ್ನು 40 ದಿನ ಮಾತ್ರ, ಸಿಎಂ, ಸಚಿವರು ಗಂಟುಮೂಟೆ ಕಟ್ಟಿಕೊಂಡು ಹೊರಡಲಿ: ಡಿಕೆಶಿ

ಬೆಂಗಳೂರು, ಜ. 24: ‘ಬಿಜೆಪಿ ಸರಕಾರ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಮಂತ್ರಿಗಳು ವಿಧಾನಸೌಧದಿಂದ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಹೊರಡಲಿ, ನಾವು ಗಂಜಲ ತಂದು ವಿಧಾನಸೌಧವನ್ನು ಶುದ್ಧ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ಇಲ್ಲಿನ ಕೆಪಿಸಿಸಿ ಕಚೇರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಎರಡು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದು, 200 ಯುನಿಟ್ ಉಚಿತ, 2ಸಾವಿರ ರೂ.ಪ್ರೋತ್ಸಾಹ ಧನ ನೀಡುವುದು ಖಚಿತ ಎಂದು ಘೋಷಿಸಿದ ನಂತರ ಬಿಜೆಪಿಯವರ ತಲೆ ಕೆಟ್ಟು ಹೋಗಿದೆ ಎಂದು ಟೀಕಿಸಿದರು.

ಈ ಸರಕಾರದ ಆಯಸ್ಸು ಇನ್ನು 40 ದಿನ ಇದೆ. ನೀವು ಇನ್ಯಾರಿಂದ ವಸೂಲಿ ಮಾಡುವುದು ಬಾಕಿ ಇದೆಯೋ ಅದನ್ನು ಮಾಡಿಕೊಂಡು ನಿಮ್ಮ ಟೆಂಟ್ ಖಾಲಿ ಮಾಡಿ. ನಾವು ಬಂದು ವಿಧಾನಸೌಧ ಸ್ವಚ್ಛ ಮಾಡುತ್ತೇವೆ. ಈ ಸರಕಾರವನ್ನು ಜನರೇ ಓಡಿಸುತ್ತಾರೆ. ಬಿಜೆಪಿ ಸರಕಾರಕ್ಕೆ ಶೇ.40 ಕಮಿಷನ್ ಸರಕಾರ ಎಂಬ ಬ್ರ್ಯಾಂಡ್ ಬಂದಿದ್ದು, ಅದನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯರ ಕಾಲದಲ್ಲಿ 35ಸಾವಿರ ಕೋಟಿ ರೂ. ಅಕ್ರಮವಾಗಿದ್ದರೆ ಮೂರುವರೆ ವರ್ಷಗಳಿಂದ ಕಡಲೇಕಾಯಿ ತಿನ್ನುತ್ತಿದ್ದರಾ? ನಿಮಗೆ ಅಧಿಕಾರ ಇದ್ದಾಗ ತನಿಖೆ ಮಾಡದಂತೆ ತಡೆದಿದ್ದವರು ಯಾರು?’ ಎಂದು ಶಿವಕುಮಾರ್ ಪ್ರಶ್ನಿಸಿದರು.

ಜನರ ಮನದಲ್ಲಿ ಕಾಂಗ್ರೆಸ್ ಬಗ್ಗೆ ಒಲವು ಮೂಡಿದೆ. ಬಿಜೆಪಿಯವರು, ಖಾಸಗಿ ಸಂಸ್ಥೆಗಳು, ಮಾಧ್ಯಮಗಳ ಸಮೀಕ್ಷೆಯಲ್ಲಿ ಬಿಜೆಪಿ ಸಂಖ್ಯಾಬಲ 60ರ ಮೇಲೆ ದಾಟುತ್ತಿಲ್ಲ. ನಮ್ಮದು 120-130 ಕ್ಷೇತ್ರಗಳು ಬರುತ್ತಿವೆ. ಇವು ನಿಜವಾಗುತ್ತದೋ ಸುಳ್ಳಾಗುತ್ತದೋ ಮುಂದಿನ ವಿಚಾರ. ಆದರೆ ಬಿಜೆಪಿಯಲ್ಲಿ ಯಡಿಯೂರಪ್ಪ-ಬೊಮ್ಮಾಯಿ, ಯತ್ನಾಳ್-ನಿರಾಣಿ, ಯೋಗೇಶ್ವರ್, ಅಶೋಕ್, ಅಶ್ವತ್ಥ ನಾರಾಯಣ ಹೀಗೆ ಬೇರೆ ಬೇರೆ ನಾಯಕರ ನಡುವೆ ಆಂತರಿಕ ಜಗಳ ಹೆಚ್ಚಾಗುತ್ತಿದೆ. ನಮ್ಮ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡುತ್ತೀರಲ್ಲ, ಬಿಜೆಪಿ ಪಕ್ಷದಲ್ಲಿ 32 ಗುಂಪುಗಳಿವೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರಕಾರ ಸುಮ್ಮನೆ ಬಜೆಟ್ ಮಂಡಿಸುವ ಪ್ರಯತ್ನ ಮಾಡುತ್ತಿದೆ. ಅವರು ಕಳೆದ ವರ್ಷಗಳಲ್ಲಿ ಮಂಡಿಸಿದ ಬಜೆಟ್‍ನಲ್ಲಿ ಅರ್ಧದಷ್ಟು ಹಣ ವೆಚ್ಚ ಮಾಡಿಲ್ಲ. 26 ಸಂಸದರನ್ನು ಇಟ್ಟುಕೊಂಡು ಅವರನ್ನು ಕರೆದುಕೊಂಡು ಹೋಗಿ ಪ್ರಧಾನಿಗೆ ಭೇಟಿ ನೀಡಿ ರಾಜ್ಯಕ್ಕೆ ಒಂದು ಯೋಜನೆ ಘೋಷಣೆ ಮಾಡಲು ಈ ಸಾಧ್ಯವಾಗಿಲ್ಲ. ಇಷ್ಟು ದಿನ ಮಾಡಲಾಗದಿದ್ದವರು ಈಗ ಏನು ಮಾಡಲು ಸಾಧ್ಯ? ನೆರೆ ಬಂದಾಗ ಸತ್ತವರಿಗೆ ಪರಿಹಾರ ನೀಡಲಿಲ್ಲ ಎಂದು ಅವರು ದೂರಿದರು.

ನಾವು ಸುಧಾಕರ್ ಅವರನ್ನೇನು ಪಕ್ಷಕ್ಕೆ ತೆಗೆದುಕೊಳ್ಳಲು ಹೋಗುವುದಿಲ್ಲ. ಅವರಿಗೆ ನಮ್ಮ ಬಸ್‍ನಲ್ಲಿ ಜಾಗ ಇಲ್ಲ. ಹೀಗಾಗಿ ನೀವು ತಲೆ ಕೆಡಿಸಿಕೊಳ್ಳದೇ ನಿಮ್ಮ ಮೂಲ ಬಿಜೆಪಿಗರಿಂದ ಮಾತನಾಡಿಸಿ. ನಿಮ್ಮ ಮೂಲ ಬಿಜೆಪಿಗರ ವಿರುದ್ಧ ಯಾವುದೇ ಪ್ರಕರಣ ದಾಖಲಾದರೆ ಕೇವಲ 3 ತಿಂಗಳಲ್ಲಿ ‘ಬಿ’ ರಿಪೋರ್ಟ್ ಹಾಕುತ್ತಾರೆ. ಇದು ‘ಬಿ’ ರಿಪೋರ್ಟ್ ಸರಕಾರ. ಈ ಸರಕಾರ ರಾಜ್ಯಕ್ಕೆ ಕಳಂಕ ತಂದಿದೆ’ ಎಂದು ಅವರು ಟೀಕಿಸಿದರು.

‘ಸಚಿವ ಸುಧಾಕರ್ ತಲೆ ಮೇಲೆ ಭ್ರಷ್ಟಾಚಾರದ ಆರೋಪಗಳ ಪರ್ವತವೇ ಇದೆ. ಆದರೂ ಮಾಧುಸ್ವಾಮಿ, ಸಿಎಂ ಯಾಕೆ ಮಾತನಾಡುತ್ತಿಲ್ಲ? ಸಿಎಂ ಅಥವಾ ಬಿಜೆಪಿಯ ಇತರ ಮುತ್ತುರತ್ನಗಳು ಕಾರಜೋಳ ಈ ವಿಚಾರವಾಗಿ ಪತ್ರಿಕಾಗೋಷ್ಠಿ ಮಾಡದೆ, ಸುಧಾಕರ್‍ರಿಂದಲೇ ಮಾಡಿಸಿದ್ದು ಏಕೆ? ಕೇವಲ ಆಪರೇಷನ್ ಕಮಲದಿಂದ ಬಂದವರಿಂದಲೇ ಮಾತನಾಡಿಸುತ್ತಿರುವುದೇಕೆ?’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
Next Story
X