Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂಡೆನ್‌ಬರ್ಗ್‌ ವರದಿ ಹೊರಬಿದ್ದ...

ಹಿಂಡೆನ್‌ಬರ್ಗ್‌ ವರದಿ ಹೊರಬಿದ್ದ ಬೆನ್ನಲ್ಲೇ ಅದಾನಿ ಗ್ರೂಪ್‌ ಷೇರುಗಳಲ್ಲಿ ಕುಸಿತ; 46,086 ಕೋಟಿ ರೂ. ನಷ್ಟ

25 Jan 2023 2:13 PM IST
share
ಹಿಂಡೆನ್‌ಬರ್ಗ್‌ ವರದಿ ಹೊರಬಿದ್ದ ಬೆನ್ನಲ್ಲೇ ಅದಾನಿ ಗ್ರೂಪ್‌ ಷೇರುಗಳಲ್ಲಿ ಕುಸಿತ; 46,086 ಕೋಟಿ ರೂ. ನಷ್ಟ

ಹೊಸದಿಲ್ಲಿ: ಅದಾನಿ ಗ್ರೂಪ್‌ ವಿರುದ್ಧ ಹಲವು ಆರೋಪಗಳನ್ನು ಹೊಂದಿರುವ ಹಿಂಡೆನ್‌ಬರ್ಗ್‌ ವರದಿ ಬಿಡುಗಡೆಯು ಕಂಪೆನಿಯ ಷೇರುಗಳ ಮೇಲೆ ನೇರ ಪರಿಣಾಮ ಬೀರಿದೆ. ಅದಾನಿ ಗ್ರೂಪ್‌ ಷೇರು ಬೆಲೆಗಳು ಭಾರೀ ಕುಸಿತ ಕಂಡಿವೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್‌ನ ಏಳು ಕಂಪೆನಿಗಳ ಸ್ಟಾಕ್‌ಗಳು ಇಂದು ಒಂದೇ ದಿನ ರೂ 46,086 ಕೋಟಿ ಕಳೆದುಕೊಂಡಿವೆ. ಅದಾನಿ ಟೋಟಲ್‌ ಗ್ಯಾಸ್‌ ರೂ. 12,366 ಕೋಟಿ ಕಳೆದುಕೊಂಡಿದ್ದರೆ ಅದಾನಿ ಪೋರ್ಟ್ಸ್‌ ರೂ 8,342 ಕೋಟಿ ಹಾಗೂ ಅದಾನಿ ಟ್ರಾನ್ಸ್‌ಮಿಷನ್‌ ರೂ 8,039 ಕೋಟಿ ಕಳೆದುಕೊಂಡಿದೆ.

ಈ ಬೆಳವಣಿಗೆಗೆ ಕಾರಣವಾದ ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಯನ್ನು ಎರಡು ವರ್ಷಗಳ ಕೂಲಂಕಷ ಅಧ್ಯಯನ ಮತ್ತು ತನಿಖೆಯ ನಂತರ ಈ ಫೊರೆನ್ಸಿಕ್‌ ಫಿನಾನ್ಶಿಯಲ್ ರಿಸರ್ಚ್‌ ಸಂಸ್ಥೆ ಸಿದ್ಧಪಡಿಸಿದೆ. ಈ ಕುರಿತು ಹಿಂಡೆನ್‌ಬರ್ಗ್‌ ರಿಸರ್ಚ್‌ ತನ್ನ ಅಧಿಕೃತ ಹ್ಯಾಂಡಲ್‌ ಮೂಲಕ ಟ್ವೀಟ್‌ ಮಾಡಿದೆ.

"ಇಂದು ನಾವು ನಮ್ಮ 2 ವರ್ಷಗಳ ತನಿಖೆಯ ವಿವರಗಳನ್ನು ಬಹಿರಂಗಪಡಿಸುತ್ತಿದ್ದೇವೆ. 17.8 ಟ್ರಿಲಿಯನ್‌(218 ಬಿಲಿಯನ್‌ ಅಮೆರಿಕನ್‌ ಡಾಲರ್) ಮೌಲ್ಯದ ಭಾರತೀಯ ಸಂಸ್ಥೆ ಅದಾನಿ ಗ್ರೂಪ್‌  ಸ್ಟಾಕ್‌ ತಿರುಚುವಿಕೆ ಹಾಗೂ ಲೆಕ್ಕ ವಂಚನೆಯನ್ನು ದಶಕಗಳ ಕಾಲ ನಡೆಸಿದೆ ಎಂಬುದರ ಕುರಿತು ಪುರಾವೆ ಪ್ರಸ್ತುತಪಡಿಸುತ್ತಿದ್ದೇವೆ," ಎಂದು ಸಂಸ್ಥೆ ಟ್ವೀಟ್‌ ಮೂಲಕ ತಿಳಿಸಿದೆ.

ಸಂಸ್ಥೆಯ ವರದಿಯ ಪ್ರಕಾರ ಅದಾನಿ ಗ್ರೂಪ್‌ ಸ್ಥಾಪಕ ಮತ್ತು ಅಧ್ಯಕ್ಷರಾಗಿರುವ ಗೌತಮ್‌ ಅದಾನಿ ಸುಮಾರು 120 ಬಿಲಿಯನ್‌ ಡಾಲರ್‌ ಮೌಲ್ಯದ ಸಂಪತ್ತನ್ನು ಹೆಚ್ಚಾಗಿ ಕಳೆದ ಮೂರು ವರ್ಷಗಳಲ್ಲಿ ಸ್ಟಾಕ್‌ ಪ್ರೈಸ್‌ ಎಪ್ರೀಸಿಯೇಶನ್‌ ಮೂಲಕ ,ಮಾಡಿದ್ದಾರೆ. ಸಮೂಹದ ಏಳು ಲಿಸ್ಟೆಡ್‌ ಕಂಪೆನಿಗಳ ಸ್ಟಾಕ್‌ ಬೆಲೆಗಳು ಈ ಅವಧಿಯಲ್ಲಿ ಸರಾಸರಿ ಶೇ 819 ರಷ್ಟು ಏರಿಕೆ ಕಂಡಿವೆ. ಎಂದು ವರದಿ ಹೇಳಿದೆ.

ಅದಾನಿ ಎಂಟರ್‌ಪ್ರೈಸಸ್‌ ಸಂಸ್ಥೆ ಎಫ್‌ಪಿಒ ಮೂಲಕ ರೂ 20,000 ಕೋಟಿ  ಸಂಗ್ರಹಿಸುವ ನಿಟ್ಟಿನಲ್ಲಿ ಯೋಚಿಸುತ್ತಿರುವಾಗ ಈ ವರದಿ ಹೊರಬಿದ್ದಿದೆ.

ಇದನ್ನೂ ಓದಿ: ಅದಾನಿ ಗ್ರೂಪ್ ಕಂಪನಿಗಳ ಸಾಲಗಳ ಹೊರೆಯ ಬಗ್ಗೆ ಕಳವಳ, ಲೆಕ್ಕಪತ್ರಗಳಲ್ಲಿ ವಂಚನೆ ಆರೋಪ

share
Next Story
X