Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಕ್ಷದ್ವೀಪ ಸಂಸದ‌ ಮುಹಮ್ಮದ್ ಫೈಝಲ್...

ಲಕ್ಷದ್ವೀಪ ಸಂಸದ‌ ಮುಹಮ್ಮದ್ ಫೈಝಲ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಕೇರಳ ಹೈಕೋರ್ಟ್

25 Jan 2023 9:06 PM IST
share
ಲಕ್ಷದ್ವೀಪ ಸಂಸದ‌ ಮುಹಮ್ಮದ್ ಫೈಝಲ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಕೇರಳ ಹೈಕೋರ್ಟ್

ತಿರುವನಂತಪುರಂ, ಜ. 25: ಕೊಲೆಯತ್ನ ಪ್ರಕರಣವೊಂದರಲ್ಲಿ ಲಕ್ಷದ್ವೀಪ ಸಂಸದ ಮುಹಮ್ಮದ್ ಫೈಝಲ್(Muhammad Faizal) ದೋಷಿ ಎಂಬುದಾಗಿ ಘೋಷಿಸಿ ವಿಚಾರಣಾ ನ್ಯಾಯಾಲಯವು ನೀಡಿರುವ ತೀರ್ಪು ಮತ್ತು ಶಿಕ್ಷೆಯನ್ನು ಕೇರಳ ಹೈಕೋರ್ಟ್(Kerala High Court) ಬುಧವಾರ ಅಮಾನತಿನಲ್ಲಿಟ್ಟಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

2009ರ ಲೋಕಸಭಾ ಚುನಾವಣೆಯ ವೇಳೆ, ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಎಮ್. ಸಯೀದ್ ರ ಅಳಿಯ ಪಡನಾತ್ ಸಾಲಿಹ್ರನ್ನು ಕೊಲೆಗೈಯಲು ನಡೆಸಿರುವ ಪ್ರಯತ್ನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಫೈಝಲ್ ಮತ್ತು ಇತರ ನಾಲ್ವರು ದೋಷಿಗಳು ಎಂಬುದಾಗಿ ಕಾವರಟ್ಟಿ ಸೆಶನ್ಸ್ ನ್ಯಾಯಾಲಯವು ಜನವರಿ 11ರಂದು ಘೋಷಿಸಿತ್ತು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಫೈಝಲ್ ಮತ್ತು ಇತರ ನಾಲ್ವರು ದೋಷಿಗಳಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಜನವರಿ 13ರಂದು ಸಂಸದ ಪದವಿಯಿಂದ ಅನರ್ಹಗೊಂಡಿದ್ದರು.

ಫೈಝಲ್ ರ ಅನರ್ಹತೆಯಿಂದಾಗಿ ಅವರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿರುವುದರಿಂದ, ದೋಷಿ ಎಂದು ಘೋಷಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಬುಧವಾರ ಅಮಾನತಿನಲ್ಲಿಟ್ಟಿದೆ.

ಉಪಚುನಾವಣೆ ತಡೆಯಲು ಈ ಕ್ರಮ: ಹೈಕೋರ್ಟ್

‘‘ವಿಚಾರಣಾ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ, ಲಕ್ಷದ್ವೀಪದಲ್ಲಿ ಚುನಾವಣೆಯ ಜಟಿಲ ಪ್ರಕ್ರಿಯೆಯನ್ನು ಆರಂಭಿಸಬೇಕಾಗುತ್ತದೆ ಹಾಗೂ ಅದರ ಅಗಾಧ ವೆಚ್ಚವನ್ನು ದೇಶ ಮತ್ತು ಪರೋಕ್ಷವಾಗಿ ಈ ದೇಶದ ಜನತೆ ಭರಿಸಬೇಕಾಗುತ್ತದೆ’’ ಎಂದು ನ್ಯಾಯಮೂರ್ತಿ ಬೇಚು ಕುರಿಯನ್ ಥಾಮಸ್(Bechu Kurian Thomas) ಹೇಳಿದರು.

‘‘ದೋಷಿತ್ವ ಮತ್ತು ಶಿಕ್ಷೆಯನ್ನು ಅಮಾನತಿನಲ್ಲಿರಿಸದಿದ್ದರೆ ಅದರ ಫರಿಣಾಮಗಳು ಅಗಾಧ ಮತ್ತು ತೀವ್ರವಾಗಿರುತ್ತವೆ’’ ಎಂದು ಅವರು ಹೇಳಿದರು.

ಹೊಸ ಚುನಾವಣಾ ಪ್ರಕ್ರಿಯೆಯಿಂದಾಗಿ ಲಕ್ಷದ್ವೀಪದ ವಿವಿಧ ಅಭಿವೃದ್ಧಿ ಚಟುವಟಿಕೆಗಳು ಕೆಲವ ವಾರಗಳ ಕಾಲ ಸ್ಥಗಿತಗೊಳ್ಳುತ್ತವೆ. ರಾಜಕೀಯವನ್ನು ಅಪರಾಧಮುಕ್ತಗೊಳಿಸುವುದು ಪ್ರತಿಯೊಂದು ಪ್ರಜಾಪ್ರಭುತ್ವದ ಅಗತ್ಯವಾದರೂ, ನಾನು ಕಾನೂನಿನ ಆಡಳಿತದ ತತ್ವಗಳನ್ನು ನಿರ್ಲಕ್ಷಿಸುವಂತಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.

share
Next Story
X