Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2002ರ ಗುಜರಾತ್ ಹಿಂಸಾಚಾರ: 17...

2002ರ ಗುಜರಾತ್ ಹಿಂಸಾಚಾರ: 17 ಮುಸ್ಲಿಮರನ್ನು ಕೊಂದ 22 ಆರೋಪಿಗಳು ದೋಷಮುಕ್ತ

25 Jan 2023 9:19 PM IST
share
2002ರ ಗುಜರಾತ್ ಹಿಂಸಾಚಾರ: 17 ಮುಸ್ಲಿಮರನ್ನು ಕೊಂದ 22 ಆರೋಪಿಗಳು ದೋಷಮುಕ್ತ

ಗಾಂಧಿನಗರ, ಜ. 25: 2002ರ ಗುಜರಾತ್(Gujarat) ಹಿಂಸಾಚಾರದ ಸಂದರ್ಭದಲ್ಲಿ, ಇಬ್ಬರು ಮಕ್ಕಳು ಸೇರಿದಂತೆ 17 ಮುಸ್ಲಿಮರನ್ನು ಕೊಂದ ಪ್ರಕರಣದ ಎಲ್ಲಾ 22 ಆರೋಪಿಗಳನ್ನು ಗುಜರಾತ್ ನ ನ್ಯಾಯಾಲಯವೊಂದು ಮಂಗಳವಾರ ಸಾಕ್ಷಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

22 ಆರೋಪಿಗಳ ಪೈಕಿ 8 ಮಂದಿ ವಿಚಾರಣೆಯ ಅವಧಿಯಲ್ಲಿ ಮೃತಪಟ್ಟಿದ್ದಾರೆ.ಅಯೋಧ್ಯೆಯಿಂದ ಯಾತ್ರಿಗಳನ್ನು ಹೊತ್ತು ತರುತ್ತಿದ್ದ ಸಾಬರ್ಮತಿ ಎಕ್ಸ್ ಪ್ರೆಸ್ ರೈಲಿ(Sabarmati Express)ನ ಬೋಗಿಯೊಂದು ಗೋಧ್ರಾದಲ್ಲಿ ಸುಟ್ಟು ಹೋದ ಘಟನೆಯ ಬಳಿಕ, 2002 ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಕೋಮು ಗಲಭೆಗಳು ನಡೆದವು. ಫೆಬ್ರವರಿ 27ರಂದು ರೈಲು ಸುಟ್ಟು ಹೋದ ಘಟನೆಯಲ್ಲಿ, ಬೋಗಿಯಲ್ಲಿದ್ದ 51 ಮಂದಿ ಮೃತಪಟ್ಟಿದ್ದಾರೆ.

2002 ಫೆಬ್ರವರಿ 28ರಂದು ದೆಲೋಲ್ ಗ್ರಾಮದಲ್ಲಿ 17 ಮುಸ್ಲಿಮರನ್ನು ಕೊಂದ ಆರೋಪಕ್ಕೆ ಸಂಬಂಧಿಸಿ 2004ರಲ್ಲಿ 22 ಮಂದಿಯನ್ನು ಬಂಧಿಸಲಾಗಿತ್ತು. ಆರೋಪಿಗಳು ಸಾಕ್ಷ ನಾಶ ಮಾಡುವುದಕ್ಕಾಗಿ ತಾವು ಕೊಂದ ವ್ಯಕ್ತಿಗಳ ಮೃತದೇಹಗಳನ್ನು ಸುಟ್ಟು ಹಾಕಿದ್ದರು ಎಂದು ಪ್ರಾಸಿಕ್ಯೂಶನ್ ಹೇಳಿದೆ.

ಆದರೆ, ಗುಜರಾತ್ ಹೈಕೋರ್ಟ್ ಜಾಮೀನು ನೀಡಿದ ಬಳಿಕ 2004ರಿಂದಲೂ ಆರೋಪಿಗಳು ಮುಕ್ತವಾಗಿ ತಿರುಗಾಡಿಕೊಂಡಿದ್ದರು.

‘‘ನ್ಯಾಯಾಲಯವು ಮೃತರದ್ದು ಎನ್ನಲಾದ ಎಲುಬುಗಳು ಸೇರಿದಂತೆ ಎಲ್ಲಾ ಪುರಾವೆಗಳನ್ನು ಪರಿಶೀಲಿಸಿದೆ. ಆದರೆ, ವಿಧಿವಿಜ್ಞಾನ ಪರೀಕ್ಷೆಗಳಲ್ಲಿ ಅದು ನಿರ್ಣಾಯಕವಾಗಿ ಸಾಬೀತಾಗಿಲ್ಲ’’ ಎಂದು ಎಲ್ಲಾ ಆರೋಪಿಗಳ ಪರವಾಗಿ ವಾದಿಸಿರುವ ವಕೀಲ ಗೋಪಾಲಸಿನ್ಹ ಸೋಳಂಕಿ ಹೇಳಿದರು. ‘‘ಅದೂ ಅಲ್ಲದೆ, ನ್ಯಾಯಾಲಯವು 100ಕ್ಕೂ ಅಧಿಕ ಸಾಕ್ಷಿಗಳನ್ನು ವಿಚಾರಿಸಿದೆ. ಅವರ ಪೈಕಿ ಹೆಚ್ಚಿನವರು ಪ್ರತಿಕೂಲ ಸಾಕ್ಷಿಗಳಾದರು’’ ಎಂದು ಅವರು ನುಡಿದರು.

ಈ ಪ್ರಕರಣದಲ್ಲಿ ಪೊಲೀಸರ ಪಾತ್ರವೂ ಪ್ರಶ್ನೆಗೀಡಾಗಿದೆ. ಹತ್ಯಾಕಾಂಡ ನಡೆದು ಸುಮಾರು ಎರಡು ವರ್ಷಗಳ ಬಳಿಕ, ಅಂದರೆ 2003 ಡಿಸೆಂಬರ್ನಲ್ಲಿ ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಿದ್ದರು.

share
Next Story
X