Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ನಾಲ್ವರು ಭಾರತೀಯರಲ್ಲಿ ಒಬ್ಬರು...

ಪ್ರತಿ ನಾಲ್ವರು ಭಾರತೀಯರಲ್ಲಿ ಒಬ್ಬರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ: ಸಮೀಕ್ಷೆ

25 Jan 2023 10:53 PM IST
share
ಪ್ರತಿ ನಾಲ್ವರು ಭಾರತೀಯರಲ್ಲಿ ಒಬ್ಬರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ: ಸಮೀಕ್ಷೆ

ಹೊಸದಿಲ್ಲಿ,ಜ.25: ಪ್ರತಿ ನಾಲ್ವರು ಭಾರತೀಯರ ಪೈಕಿ ಓರ್ವರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರೆ ಅವರ ಪೈಕಿ ಮೂವರು ಹೆಚ್ಚುತ್ತಿರುವ ಹಣದುಬ್ಬರದ ಬಗ್ಗೆ ಚಿಂತಿತರಾಗಿದ್ದಾರೆ. ಆದರೂ ಅವರಲ್ಲಿ ಅರ್ಧದಷ್ಟು ಜನರು 2023ರಲ್ಲಿ ದೇಶದ ಆರ್ಥಿಕತೆಯು ಬೆಳೆಯಲಿದೆ ಎಂಬ ನಂಬಿಕೆಯನ್ನು ಹೊಂದಿದ್ದಾರೆ ಎಂದು ಮಾರ್ಕೆಟಿಂಗ್ ಡಾಟಾ ಮತ್ತು ಅನಾಲಿಟಿಕ್ಸ್ ಸಂಸ್ಥೆ ಕಾಂಟರ್ ನಡೆಸಿರುವ ಸಮೀಕ್ಷೆಯು ತಿಳಿಸಿದೆ.

ಬಳಕೆದಾರರು ಆದಾಯ ತೆರಿಗೆಗೆ ಸಂಬಂಧಿಸಿದಂತೆ ನೀತಿ ಬದಲಾವಣೆಗಳನ್ನು ನಿರೀಕ್ಷಿಸಿದ್ದಾರೆ. ಪ್ರಾಥಮಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿನ 2.5 ಲ.ರೂ.ಗಳಿಂದ ಮತ್ತು ಶೇ.30 ತೆರಿಗೆಯ ಗರಿಷ್ಠ ಮಿತಿಯನ್ನು ಈಗಿನ 10 ಲ.ರೂ.ಗಳಿಂದ ಹೆಚ್ಚಿನ ಮಟ್ಟಕ್ಕೆ ಏರಿಸಲಾಗುವುದು ಎನ್ನುವುದು ಅತ್ಯಂತ ಸಾಮಾನ್ಯ ನಿರೀಕ್ಷೆಯಾಗಿದೆ ಎಂದು ಕೇಂದ್ರ ಮುಂಗಡಪತ್ರ ಸಮೀಕ್ಷೆಯ ತನ್ನ ಎರಡನೇ ಆವೃತ್ತಿಯಲ್ಲಿ ಕಾಂಟರ್ ಹೇಳಿದೆ.

ಸ್ಥೂಲ ಆರ್ಥಿಕ ಮಟ್ಟದಲ್ಲಿ ಹೆಚ್ಚಿನವರು ಧನಾತ್ಮಕ ದೃಷ್ಟಿಕೋನವನ್ನು ಹೊಂದಿದ್ದಾರೆ. ಶೇ.31ರಷ್ಟು ಜನರು ಆರ್ಥಿಕ ಮಂದಗತಿಯನ್ನು ನಿರೀಕ್ಷಿಸಿದ್ದರೆ,ಶೇ.50ರಷ್ಟು ಜನರು 2023ರಲ್ಲಿ ಭಾರತೀಯ ಆರ್ಥಿಕತೆಯು ಬೆಳೆಯಲಿದೆ ಎಂದು ನಂಬಿದ್ದಾರೆ. ಮಹಾನಗರಗಳಿಗೆ ಹೋಲಿಸಿದರೆ ಶೇ.54ರಷ್ಟು ಇತರ ನಗರಗಳು ಹೆಚ್ಚು ಆಶಾದಾಯಕವಾಗಿವೆ ಎಂದು ತಿಳಿಸಿರುವ ಕಾಂಟರ್,ಆದರೂ ಜಾಗತಿಕ ಆರ್ಥಿಕ ಹಿಂಜರಿತ ಮತ್ತು ಕೋವಿಡ್ ಮರುಕಳಿಸುವ ಸಂಭಾವ್ಯತೆ ಭಾರತೀಯರಿಗೆ ಚಿಂತೆಯ ಪ್ರಮುಖ ಕ್ಷೇತ್ರಗಳಾಗಿವೆ ಎಂದು ಹೇಳಿದೆ.

2022,ಡಿ.15ರಿಂದ 2023,ಜ.15ರವರೆಗೆ ಮುಂಬೈ,ದಿಲ್ಲಿ, ಬೆಂಗಳೂರು,ಚೆನ್ನೈ ಮತ್ತು ಕೋಲ್ಕತಾ ಸೇರಿದಂತೆ 12 ಪ್ರಮುಖ ನಗರಗಳಲ್ಲಿ 21ರಿಂದ 55 ವರ್ಷ ಪ್ರಾಯದ 1,892 ಬಳಕೆದಾರರನ್ನು ಆಯ್ದುಕೊಂಡು ಸಮೀಕ್ಷೆ ನಡೆಸಿರುವ ಕಾಂಟರ್,ಮೂರನೇ ಎರಡರಷ್ಟು ಜನರು ಆದಾಯ ತೆರಿಗೆ ಕಾಯ್ದೆಯ ಕಲಂ 80 ಸಿಸಿ ಅಡಿ ಹೂಡಿಕೆಗಳಿಗೆ ಹೆಚ್ಚಿನ ತೆರಿಗೆ ರಿಯಾಯಿತಿಯನ್ನು ಬಯಸಿದ್ದಾರೆ ಎಂದು ಹೇಳಿದೆ.

ಕೆಟ್ಟ ದಿನಗಳು ಮುಗಿದಿವೆ ಎಂದು ಬಳಕೆದಾರರು ಆಶಿಸಿದ್ದರೂ, ಸಾಂಕ್ರಾಮಿಕವು ಈಗಲೂ ಮಾಯವಾಗಿಲ್ಲ ಮತ್ತು ಶೇ.55ರಷ್ಟು ಜನರು ಮುಂಗಡಪತ್ರದಲ್ಲಿ ಆರೋಗ್ಯ ರಕ್ಷಣೆಗೆ ನಿರಂತರ ಹೆಚ್ಚಿನ ಗಮನವನ್ನು ಬಯಸಿದ್ದಾರೆ ಎಂದು ಅದು ತಿಳಿಸಿದೆ.

2023ರಲ್ಲಿ ದೇಶದ ಸ್ಥೂಲ ಆರ್ಥಿಕತೆಯ ಕಾರ್ಯಕ್ಷಮತೆಯ ಬಗ್ಗೆ ಭಾರತೀಯರು ಹೆಚ್ಚು ಧನಾತ್ಮಕರಾಗಿದ್ದಾರೆ. ಹಿರಿಯರಲ್ಲಿ ಮತ್ತು ಶ್ರೀಮಂತ ವರ್ಗದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ಕುರಿತು ನಂಬಿಕೆ ಬಲವಾಗಿದೆ ಎಂದು ಕಾಂಟರ್ನ ಕಾರ್ಯನಿರ್ವಾಹಕ ಆಡಳಿತ ನಿರ್ದೇಶಕ (ದ.ಏಶ್ಯಾ-ಒಳನೋಟಗಳ ವಿಭಾಗ) ದೀಪೇಂದರ್ ರಾಣಾ ಹೇಳಿದರು. ಆದರೂ ಜಾಗತಿಕ ಆರ್ಥಿಕ ಹಿಂಜರಿತವು ಚಿತ್ರಣವನ್ನು ಕೆಡಿಸಬಹುದು ಎಂದರು.

ಆರ್ಥಿಕ ಹಿಂಜರಿತವು ತಮ್ಮ ಕುಟುಂಬಗಳ ಬಜೆಟ್ ಮತ್ತು ತಮ್ಮ ಉದ್ಯೋಗ ಭವಿಷ್ಯಗಳ ಮೇಲೆ ನೇರವಾಗಿ ಪರಿಣಾಮವನ್ನು ಬೀರುವುದರಿಂದ ಸರಕಾರವು ರಕ್ಷಕನ ಪಾತ್ರವನ್ನು ವಹಿಸಬೇಕು ಮತ್ತು ಆರ್ಥಿಕತೆಯು ಹಿಂಜರಿತಕ್ಕೆ ಒಳಗಾಗುವುದನ್ನು ತಡೆಯಲು ಹಣದುಬ್ಬರವನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೆಚ್ಚಿನ ಭಾರತೀಯರು ನಿರೀಕ್ಷಿಸಿದ್ದಾರೆ ಎಂದು ತಿಳಿಸಿದ ರಾಣಾ,ಬಳಕೆದಾರರು ಎಂದಿನಂತೆ ಒಟ್ಟಾರೆಯಾಗಿ ಆದಾಯ ತೆರಿಗೆ ನಿಯಮಗಳಲ್ಲಿ ಕೆಲವು ಪರಿಹಾರಗಳನ್ನು ಮತ್ತು ಮಧ್ಯಮ ವರ್ಗ ಸ್ನೇಹಿ ಬಜೆಟ್ ನನ್ನು ಕಾಯುತ್ತಿದ್ದಾರೆ ಎಂದರು.

share
Next Story
X