Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 3,455.39 ಕೋಟಿ ರೂ.ಬಂಡವಾಳ ಹೂಡಿಕೆ...

3,455.39 ಕೋಟಿ ರೂ.ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ

25 Jan 2023 11:59 PM IST
share
3,455.39 ಕೋಟಿ ರೂ.ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಜ.25: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.

ನಗರದ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅಧ್ಯಕ್ಷತೆಯಲ್ಲಿ ನಡೆದ 137ನೆ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಒಟ್ಟು 59 ಯೋಜನೆಗಳಿಂದ 3,455.39 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 18,567 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ.ಗಳಿಗಿಂತ ಹೆಚ್ಚು ಬಂಡವಾಳ ಹೂಡಿಕೆಯ 11 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2186.70 ಕೋಟಿ  ರೂ.ಬಂಡವಾಳ ಹೂಡಿಕೆಯಾಗಿ 10,559 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಅವರು ಹೇಳಿದ್ದಾರೆ.

15 ಕೋಟಿ ರೂ.ಗಳಿಂದ 50 ಕೋಟಿ ರೂ.ಒಳಗಿನ ಬಂಡವಾಳ ಹೂಡಿಕೆಯ 46 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 1049.19 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 8,008 ಜನರಿಗೆ ಉದ್ಯೋಗ ಸೃಜನೆಯಾಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ಎರಡು ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 219.50 ಕೋಟಿ ರೂ.ಹೂಡಿಕೆಯಾಗಲಿದೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳು: ಮೈಸೂರ್ ಸ್ಟೀಲ್ಸ್ ಲಿಮಿಟೆಡ್‍ನವರು ಮೈಸೂರಿನ ಮೇಟಗಾನಹಳ್ಳಿಯಲ್ಲಿ 405.43 ಕೋಟಿ ರೂ. ಹೂಡಿಕೆ ಮಾಡಲಿದ್ದು 200 ಉದ್ಯೋಗ 200 ಸೃಷ್ಟಿ ಮಾಡಲಿದೆ. ಎನ್.ಐ.ಡಿ.ಇ.ಸಿ ಇಂಡಸ್ಟ್ರೀಯಲ್ ಆಟೋಮೋಷನ್ ಇಂಡಿಯಾ ಲಿಮಿಟೆಡ್ ಕೋಟುರ್ ಬೇಲೂರ್ ಇಎಂಸಿ ಕೈಗಾರಿಕಾ ಪ್ರದೇಶದಲ್ಲಿ 350 ಕೋಟಿ ರೂ. ಹೂಡಿಕೆ ಮಾಡಲಿದ್ದು, 730 ಉದ್ಯೋಗ ಸೃಷ್ಟಿಯಾಗಲಿದೆ.

ಸಿಲಾನ್ ಬಿವೆರೇಜ್ ಲಿಮಿಟೆಡ್‍ನವರು ಧಾರವಾಡದಲ್ಲಿರುವ ಎಫ್.ಎಮ್.ಸಿ.ಜಿ.ಕ್ಲಸ್ಟರ್ ವಲಯದಲ್ಲಿ 256.3 ಕೋಟಿ ರೂ. ಹೂಡಿಕೆ ಮಾಡಲಿದ್ದು, 200 ಉದ್ಯೋಗ ಸೃಷ್ಟಿಯಾಗಲಿದೆ. ಬಾಲಾಜಿ ವೇರರ್ಸ್ ಪ್ರೈ ಲಿಮಿಟೆಡ್ ನವರು ಬೆಳಗಾವಿ ಜಿಲ್ಲೆಯ ಕಣಗಲ್  ಕೈಗಾರಿಕಾ ಪ್ರದೇಶದಲ್ಲಿ 251.25 ಕೋಟಿ ರೂ. ಹೂಡಿಕೆ ಮಾಡಲಿದ್ದು, 500 ಉದ್ಯೋಗ ಸೃಷ್ಟಿ ಮಾಡಲಿದ್ದಾರೆ.

ಮಂಜುಶ್ರೀ ಟೆಕ್ನೋಪಾರ್ಕ್ ಲಿಮೆಟೆಡ್‍ನವರು ಚಾಮರಾಜನಗರದ ಬಡಗುಪ್ಪೆ, ಕೆಲ್ಲಂಬಳ್ಳಿ, ಕೈಗಾರಿಕಾ ಪ್ರದೇಶದಲ್ಲಿ 253 ಕೋಟಿ ರೂ. ಹೂಡಿಕೆ ಮಾಡಲಿದ್ದು, 500 ಉದ್ಯೋಗ ಸೃಷ್ಟಿ ಮಾಡಲಿದ್ದಾರೆ. ಕ್ಸಿಸೋಡ ಇಂಡಿಯಾ ಪ್ರೈ ಲಿಮಿಟೆಡ್ ನವರು ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ 138 ಕೋಟಿ ರೂ. ಹೂಡಿಕೆ ಮಾಡಲಿದ್ದು, 160 ಉದ್ಯೋಗ ಸೃಷ್ಟಿಸಲಿದ್ದಾರೆ.

ಮಹಾಮಾನವ್ ಇನ್‍ಸ್ಪಾಟ್ ಪ್ರೈ ಲಿಮೆಟೆಡ್ ನವರು ಬಳ್ಳಾರಿಯ ಬೆಳಗಲ್ ಗ್ರಾಮದಲ್ಲಿ 90 ಕೋಟಿ ರೂ.ಹೂಡಿಕೆ ಮಾಡಲಿದ್ದು, 90 ಉದ್ಯೋಗ ಸೃಷ್ಟಿಯಾಗಲಿದೆ. ಎ.ಸಿ.ಆರ್.ಪ್ರಾಜೆಕ್ಟ್  ನವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ನೆಲಮಂಗಲ ತಾಲೂಕಿನಲ್ಲಿ 85 ಕೋಟಿ ರೂ.ಹೂಡಿಕೆ ಮಾಡಲಿದ್ದು, 350 ಉದ್ಯೋಗ ಸೃಷ್ಟಿಯಾಗಲಿದೆ.

ನಿಯೋಬಿ ಸಲ್ಯೂಷನ್ ಪ್ರೈ ಲಿಮಿಟೆಡ್‍ನವರು ಧಾರವಾಡದ ಎಎಲ್‍ಜಿಸಿ ಕ್ಲಸ್ಟರ್, ಮಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 50 ಕೋಟಿ ರೂ.ಹೂಡಿಕೆ ಮಾಡಲಿದ್ದು, 563 ಉದ್ಯೋಗ ಸೃಷ್ಟಿಯಾಗಲಿದೆ. ಅಭಯ್ ಆಗ್ರೋ ಫುಡ್ ಪ್ರೈ.ಲಿಮಿಟೆಡ್ ನವರು ಕೊಪ್ಪಳ ಜಿಲ್ಲೆಯ ಗಬಾರ ಗ್ರಾಮದಲ್ಲಿ 32.65 ಕೋಟಿ ರೂ.ಹೂಡಿಕೆ ಮಾಡಲಿದ್ದು, 35 ಉದ್ಯೋಗ ಸೃಷ್ಟಿಯಾಗಲಿದೆ.

share
Next Story
X