Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಣರಾಜ್ಯೋತ್ಸವ ದಿನದಂದು ಭಾರತದ ಪ್ರಗತಿಗೆ...

ಗಣರಾಜ್ಯೋತ್ಸವ ದಿನದಂದು ಭಾರತದ ಪ್ರಗತಿಗೆ ಸಂಕಲ್ಪ ಮಾಡೋಣ: ಸಿಎಂ ಬೊಮ್ಮಾಯಿ ಕರೆ

26 Jan 2023 11:59 AM IST
share
ಗಣರಾಜ್ಯೋತ್ಸವ ದಿನದಂದು ಭಾರತದ ಪ್ರಗತಿಗೆ ಸಂಕಲ್ಪ ಮಾಡೋಣ: ಸಿಎಂ ಬೊಮ್ಮಾಯಿ ಕರೆ

ಬೆಂಗಳೂರು, ಜ.26: ಗಣರಾಜ್ಯೋತ್ಸವ ದಿನದಂದು  ನಮ್ಮನ್ನು ಸಂವಿಧಾನಕ್ಕೆ ಸಮರ್ಪಣೆ ಮಾಡಿಕೊಂಡು ಸಂವಿಧಾನಬದ್ಧವಾಗಿ ನಡೆದು ಭಾರತದ ಪ್ರಗತಿಗೆ ಸಂಕಲ್ಪ ಮಾಡಿಕೊಳ್ಳುವ ದಿನ. ನಾವೆಲ್ಲಾರೂ ಆ ಸಂಕಲ್ಪವನ್ನು ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. 

ಅವರು ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಗಣರಾಜ್ಯೋತ್ಸವದ ಶುಭಾಶಯಗಳನ್ನು ನಾಡಿನ ಜನತೆಗೆ ತಿಳಿಸಿದ ಮುಖ್ಯಮಂತ್ರಿಗಳು ವಿಶ್ವಕ್ಕೇ ಭಾರತದ ವಿಸ್ತೃತವಾಗಿರುವ ಶಕ್ತಿ, ಭಾರತದ ಭವ್ಯ ಪರಂಪರೆ ಸದಾ ಕಾಲ ಪ್ರತ್ಯೇಕವಾಗಿ, ವಿಭಿನ್ನವಾಗಿ ಜಗತ್ತಿನಲ್ಲಿದೆ. ಆಧುನಿಕ, ಪ್ರಗತಿಪರವಾದ ಭಾರತ. ಮಾನವೀಯತೆಯ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂಬ ಧ್ಯೇಯ ನುಡಿಯಿಂದ ಮುನ್ನಡೆಯುತ್ತಿದ್ದೇವೆ ಎಂದರು. 

''ರಾಜ್ಯದ ಎಂಟು ಜನರಿಗೆ ಪದ್ಮಪ್ರಶಸ್ತಿ: ನಮ್ಮ ಹೆಮ್ಮೆ ''

ರಾಜ್ಯದ ಎಸ್.ಎಂ.ಕೃಷ್ಣಾ ಅವರಿಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್.ಭೈರಪ್ಪ ಸೇರಿದಂತೆ ಒಟ್ಟು ಎಂಟು ಜನರಿಗೆ ಪದ್ಮಪ್ರಶಸ್ತಿಗಳು ಘೋಷಣೆಯಾಗಿವೆ. ಕಳೆದ ಹಲವಾರು  ವರ್ಷಗಳಿಂದ ಪ್ರಧಾನಮಂತ್ರಿಗಳು, ಅವರವರ ವೃತ್ತಿಯಲ್ಲಿ ಶ್ರೇಷ್ಠತೆ ಕಂಡುಕೊಂಡವರು, ದೇಶಕ್ಕೆ ಕೊಡುಗೆ ನೀಡಿದವರು, ಯಾವ ಅಪೇಕ್ಷೆಯೂ ಇಲ್ಲದೆ ಎಲೆಮರೆಕಾಯಿಯಾಗಿ ಕೆಲಸ ಮಾಡಿದವರನ್ನು ಗುರುತಿಸಿ ಪದ್ಮಪ್ರಶಸ್ತಿಗಳನ್ನು ನೀಡುವ ವಿನೂತನ ಪದ್ಧತಿಯನ್ನು ಅಳವಡಿಸಿದ್ದಾರೆ. ಇದು ಅವರ ಕಾರ್ಯವೈಖರಿ. ಗುಣಾತ್ಮಕ ಕಾರ್ಯಕ್ಕೆ ಬೆಲೆ ನೀಡಿದ್ದಾರೆ ಎಂದರು. 

ಕರ್ನಾಟಕಕ್ಕೆ ಎಂಟು ಪ್ರಶಸ್ತಿ ದೊರೆತಿರುವುದು ನಮ್ಮ ಹೆಮ್ಮೆ. ಕರ್ನಾಟಕದ ವಿಪುಲ ಮಾನವ ಪ್ರತಿಭೆಯನ್ನು ತೋರಿದಂತಾಗಿದೆ. ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಬಯಸುತ್ತೇನೆ. ಅವರಿಂದ ಇನ್ನಷ್ಟು ಜನರಿಗೆ ಪ್ರೇರಣೆ ದೊರೆಯುವ ಆಶಾಭಾವನೆ ಇದೆ ಎಂದರು.

share
Next Story
X