Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 7 ವರ್ಷಗಳ ಜಾಮೀನು ಬಿಡುಗಡೆಯಲ್ಲಿರುವ...

7 ವರ್ಷಗಳ ಜಾಮೀನು ಬಿಡುಗಡೆಯಲ್ಲಿರುವ ತೀಸ್ತಾ ದಂಪತಿಗೆ ಮತ್ತೆ ಕಸ್ಟಡಿ ಯಾಕೆ?

ಗುಜರಾತ್ ಪೊಲೀಸ್, ಸಿಬಿಐಗೆ ಯಾಕೆ ಸುಪ್ರೀಂಕೋರ್ಟ್ ಪ್ರಶ್ನೆ

26 Jan 2023 3:34 PM IST
share
7 ವರ್ಷಗಳ ಜಾಮೀನು  ಬಿಡುಗಡೆಯಲ್ಲಿರುವ ತೀಸ್ತಾ ದಂಪತಿಗೆ ಮತ್ತೆ ಕಸ್ಟಡಿ ಯಾಕೆ?
ಗುಜರಾತ್ ಪೊಲೀಸ್, ಸಿಬಿಐಗೆ ಯಾಕೆ ಸುಪ್ರೀಂಕೋರ್ಟ್ ಪ್ರಶ್ನೆ

ಹೊಸದಿಲ್ಲಿ,ಜ.26: ಏಳು ವರ್ಷಗಳಿಗೂ ಅಧಿಕ ಸಮಯದಿಂದ ಜಾಮೀನು ಬಿಡುಗಡೆಯಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಹಾಗೂ ಆಕೆಯ ಪತಿ ಜಾವೇದ್ ಆನಂದ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಯಾಕೆ ಬಯಸುತ್ತಿದ್ದೀರೆಂದು ಸುಪ್ರೀಂಕೋರ್ಟ್ ಬುಧವಾರ ಗುಜರಾತ್ ಪೊಲೀಸ್ ಹಾಗೂ ಕೇಂದ್ರೀಯ ತನಿಖಾ ದಳವನ್ನು ಪ್ರಶ್ನಿಸಿದೆ.

 2002ರ ಗುಜರಾತ್ ಗಲಭೆಯ ಸಂತ್ರಸ್ತರಿಗಾಗಿ ಸಂಗ್ರಹಿಸಲಾದ ನಿಧಿಗಳನ್ನು ದುರುಪಯೋಗಪಡಿಸಿದ ಆರೋಪದಲ್ಲಿ  ತೀಸ್ತಾ ಹಾಗೂ ಜಾವೇದ್ ದಂಪತಿಯ ವಿರುದ್ಧ  ಮೂರು ಎಫ್ಐಆರ್ಗಳು ಸಲ್ಲಿಕೆಯಾಗಿದ್ದವು. ಈ ಸಂಬಂಧ ಸೆಟಲ್ವಾಡ್, ಜಾವೇದ್ ಆನಂದ್, ಗುಜರಾತ್ ಪೊಲೀಸರು ಹಾಗೂ ಸಿಬಿಐ ಸಲ್ಲಿಸಿದ ಅರ್ಜಿಗ ವಿಚಾರಣೆ  ನಡೆಸಿದ ಸಂದರ್ಭ  ನ್ಯಾಯಮೂರ್ತಿಗಳಾದ ಎಸ್.ಕ. ಕೌಲ್, ಎ.ಎಸ್.ಓಕಾ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು   ಈ ಪ್ರಶ್ನೆಯನ್ನು ಎತ್ತಿದೆ.

ಸೆಟಲ್ವಾಡ್ ಹಾಗೂ ಜಾವೇದ್ ಆನಂದ್ ಪರವಾಗಿ ವಾದಿಸಿದ ಹಿರಿಯ ನ್ಯಾಯವಾದಿ ಕಪಿಲ್ಸಿಬಾಲ್ ಹಾಗೂ ಅಪರ್ಣಾ ಭಟ್ ಅವರು, ಈ ದಂಪತಿಯ ವಿರುದ್ದದ ಪ್ರಕರಣಗಳು ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿದೆ. ಅಲ್ಲದೆ ನ್ಯಾಯಾಲಯವು ಪ್ರತ್ಯೇಕ ಪ್ರಕರಣಗಳಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ಹಾಗೂ ನಿಯಮಿತವಾದ ಜಾಮೀನು ನೀಡಿದೆ. ದಂಪತಿಯ ವಿರುದ್ದ ಸಿಬಿಐ ಇನ್ನೂ ಕೂಡಾ ಚಾರ್ಜ್ಶೀಟ್ ಸಲ್ಲಿಸಿಲ್ಲವೆಂದು ಸಿಬಲ್ ವಾದಿಸಿದರು.

ಉಭಯ  ವಕೀಲರ ವಾದಪ್ರತಿವಾದವನ್ನು ಆಲಿಸಿದ  ನ್ಯಾಯಾಲಯವು, ‘‘ ಓರ್ವ ವ್ಯಕ್ತಿಯನ್ನು ಎಷ್ಟು ಸಮಯದವರೆಗೆ ಕಸ್ಟಡಿಯಲ್ಲಿ ಇರಿಸುತ್ತೀರೆಂಬುದೇ ಇಲ್ಲಿ ಉದ್ಭವಿಸುವ ಪ್ರಶ್ನೆಯಾಗಿದೆ. ದಂಪತಿಗೆ ನಿರೀಕ್ಷಣಾ ಜಾಮೀನು ನೀಡಿ ಏಳು ವರ್ಷಗಳು ಕಳೆದಿವೆ. ಆದರೂ ನೀವು ಅವರನ್ನು ಕಸ್ಟಡಿಗೆ ಕಳುಹಿಸಲು ಬಯಸುತ್ತಿದ್ದೀರಿ ಎಂದು ನ್ಯಾಯಾಲಯ ಸಿಬಿಐ ಹಾಗೂ ಗುಜರಾತ್ ವಕೀಲರನ್ನುದ್ದೇಶಿಸಿ ಹೇಳಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ  ಹೆಚ್ಚುವರಿ ದಾಖಲೆ, ಸಾಮಾಗ್ರಿಗಳನ್ನು  ಹಾಜರುಪಡಿಸಲು ತಮಗೆ ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ  ಗುಜರಾತ್ ಪೊಲೀಸ್ ಹಾಗೂ  ಸಿಬಿಐ ನ್ಯಾಯಪೀಠವನ್ನು ಕೋರಿದ್ದು ಅದಕ್ಕೆ  ನ್ಯಾಯಾಲಯ ತನ್ನ ಸಮ್ಮತಿಯನ್ನು ಸೂಚಿಸಿದೆ.

ಇದನ್ನೂ ಓದಿ: ಪ್ರಜಾಸತ್ತಾತ್ಮಕ ತತ್ವ ಎತ್ತಿ ಹಿಡಿಯಲು ಪತ್ರಿಕಾ ಸ್ವಾತಂತ್ರ್ಯ ಪ್ರಮುಖ ಅಂಶ: ಪ್ರಧಾನಿ ಮೋದಿ ಕುರಿತ BBC ಸಾಕ್ಷ್ಯಚಿತ್ರ ನಿಷೇಧಕ್ಕೆ ಅಮೆರಿಕ ಪ್ರತಿಕ್ರಿಯೆ

share
Next Story
X