Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 10 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ...

10 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ 'ಉಮ್ಮತ್ತಾಟ್' ಪರಿಚಯಿಸಿದ ರಾಣಿ ಮಾಚಯ್ಯಗೆ ಪದ್ಮಶ್ರೀ ಗೌರವ

26 Jan 2023 4:35 PM IST
share
10 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಉಮ್ಮತ್ತಾಟ್ ಪರಿಚಯಿಸಿದ ರಾಣಿ ಮಾಚಯ್ಯಗೆ ಪದ್ಮಶ್ರೀ ಗೌರವ

ಮಡಿಕೇರಿ ಜ.26 : ಕೊಡವ ಜಾನಪದ ಕಲೆಯ ಪ್ರಸರಣಕ್ಕೆ ಅರ್ಧ ಶತಮಾನದ ತಮ್ಮ ಬದುಕನ್ನು ಮೀಸಲಿಟ್ಟ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರು ಕೇಂದ್ರದ ಅತ್ಯುನ್ನತ ನಾಗರಿಕ  ಪ್ರಶಸ್ತಿ ‘ಪದ್ಮಶ್ರೀ’ಗೆ ಭಾಜನರಾಗಿದ್ದಾರೆ.

 ‘ಕನಸು ಮನಸಿನಲ್ಲೂ ನಿರೀಕ್ಷಿಸದ ಪ್ರಶಸ್ತಿ ತನಗೆ ಬಂದಿದೆ. ತುಂಬಾ ಸಂತೋಷವಾಗಿದೆ’ ಎಂದು ಪತ್ರಿಕೆಗೆ ಪ್ರತಿಕ್ರಿಯಿಸಿದ ರಾಣಿ ಮಾಚಯ್ಯ ಅವರು, ಜಾನಪದ ಕಲಾವಿದೆಯಾಗಿ 10 ಸಾವಿರಕ್ಕೂ ಹೆಚ್ಚಿನ ಮಕ್ಕಳಿಗೆ ಕೊಡಗಿನ ವಿಶಿಷ್ಟ ಜಾನಪದ ಕಲಾ ಪ್ರಕಾರ ‘ಉಮ್ಮತ್ತಾಟ್’ ನ್ನು ಕಲಿಸಿಕೊಟ್ಟವರು.

ಜಿಲ್ಲಾ ಕೇಂದ್ರ ಮಡಿಕೇರಿಯ ಐಮುಡಿಯಂಡ ದಿವಂಗತ ಮಾಚಯ್ಯ ಅವರ ಪತ್ನಿ, 78 ರ ಪ್ರಾಯದಲ್ಲೂ ಲವಲವಿಕೆಯಿಂದ ಇರುವ ರಾಣಿ ಮಾಚಯ್ಯ, ಕೊಡವರ ಆರಾಧ್ಯ ದೇವತೆ ಕಾವೇರಿಯನ್ನು ಸ್ತುತಿಸಿ, ತಾಳಕ್ಕೆ ತಕ್ಕಂತೆ ನರ್ತಿಸುವ ಉಮ್ಮತ್ತಾಟ್‍ನಲ್ಲಿ ಸಿದ್ಧಹಸ್ತರು. ಕೊಡವ ಜಾನಪದ ಕಲೆಯಲ್ಲಿ ಆಸಕ್ತ ಪ್ರತಿಭಾವಂತರ ತಂಡವನ್ನು ಕಟ್ಟಿ, ಕೊಡಗಿನ ಶ್ರೀಮಂತ ಕಲೆಯನ್ನು ರಾಷ್ಟ್ರದ ವಿವಿಧೆಡೆಗಳಲ್ಲಿ ಪ್ರದರ್ಶಿಸುವ ಮೂಲಕ ಜಿಲ್ಲೆಯ ಅಪರೂಪದ ಕಲೆಯನ್ನು ಹೊರ ನಾಡಿನವರಿಗೆ ಪರಿಚಯಿಸಿದ ಕೀರ್ತಿ ಇವರದ್ದು.

ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬೀದರ್ ನ ಶಾ ರಶೀದ್‌ ಅಹ್ಮದ್‌ ಖಾದ್ರಿ ಯಾರು? ಅವರ ಸಾಧನೆ ಏನು?

‘ಇಲ್ಲಿಯವರೆಗೆ ರಾಜ್ಯ ಸೇರಿದಂತೆ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ನೂರಕ್ಕೂ ಹೆಚ್ಚಿನ ಕೊಡವ ಜಾನಪದ ಕಲೆಯ ಪ್ರದರ್ಶನಗಳನ್ನು ನೀಡಿದ್ದೇನೆ’ ಎನ್ನುವ ರಾಣಿ ಮಾಚಯ್ಯ ಅವರು, ನಿಜಕ್ಕಾದರೆ ಕಾರ್ಯಕ್ರಮಗಳ ಲೆಕ್ಕವಿಟ್ಟವರಲ್ಲ.

ಸಿದ್ದಾಪುರದಲ್ಲಿ ಜನಿಸಿ, ವಿರಾಜಪೇಟೆ ತಾಲೂಕಿನ ಕಾಕೋಟುಪರಂಬುವಿನಲ್ಲಿ ಬೆಳೆದ ಇವರು, ಶಿಕ್ಷಣದ ಹಂತದಿಂದಲೇ ಕೊಡವ ಜಾನಪದ ಕ್ಷೇತ್ರದತ್ತ ಆಸಕ್ತಿಯನ್ನು ತಳೆದವರು. ಕೊಡಗಿನ ಜಾನಪದ ಕಲೆಗಳಾದ ಕೋಲಾಟ್, ಉಮ್ಮತ್ತಾಟ್, ಬುಡಕಟ್ಟು ಜನಾಂಗದ ನೃತ್ಯಗಳೊಂದಿಗೆ ಭರತನಾಟ್ಯದಲ್ಲೂ ಆಸಕ್ತಿಯನ್ನು ಹೊಂದಿದ್ದಲ್ಲದೆ, ‘ಕಾವೇರಿ ಕಲಾವೃಂದ’ ಎನ್ನುವ ಕಲಾ ತಂಡವನ್ನು ರಚಿಸಿ ಕೊಡಗಿನ ಜಾನಪದ ಕಲಾ ಪ್ರಕಾರದ ಸೊಬಗು, ಮೌಲ್ಯಗಳನ್ನು ನಾಡಿನುದ್ದಗಲಕ್ಕೂ ಪಸರಿಸುತ್ತಾ ಬಂದವರು. 

share
Next Story
X