Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಗಳು...

ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಗಳು ಗಣರಾಜ್ಯೋತ್ಸವ ಆಚರಣೆಗಳನ್ನು ಮಸುಕಾಗಿಸಿದೆ: ಯುರೋಪಿಯನ್‌ ಯೂನಿಯನ್‌ ಸದಸ್ಯೆ

26 Jan 2023 5:15 PM IST
share
ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಗಳು ಗಣರಾಜ್ಯೋತ್ಸವ ಆಚರಣೆಗಳನ್ನು ಮಸುಕಾಗಿಸಿದೆ: ಯುರೋಪಿಯನ್‌ ಯೂನಿಯನ್‌ ಸದಸ್ಯೆ

ಹೊಸದಿಲ್ಲಿ: "ಭಾರತದ ಗಣರಾಜ್ಯೋತ್ಸವ ಆಚರಣೆಯು (Republic Day) ಅಲ್ಲಿನ ಮಾನವ ಹಕ್ಕು ಉಲ್ಲಂಘನೆಗಳಿಂದ ಮಸುಕಾಗಿದೆ," ಎಂಬ ಯುರೋಪಿಯನ್‌ ಪಾರ್ಲಿಮೆಂಟ್‌ ಸದಸ್ಯ ಹಾಗೂ ಭಾರತದೊಂದಿಗಿನ ಸಂಬಂಧಗಳ ಯುರೋಪಿಯನ್‌ ಯೂನಿಯನ್‌ನ ಪರ್ಯಾಯ ಸದಸ್ಯೆಯಾಗಿರುವ ಅಲ್ವೀನಾ ಅಲಮೇತ್ಸ (Alviina Alametsa) ಹೇಳಿದ್ದಾರೆ ಹಾಗೂ ಭಾರತ ಭೇಟಿ ವೇಳೆ ತಾವು ಈ ಹಕ್ಕುಗಳ ಉಲ್ಲಂಘನೆಗೆ ಸಾಕ್ಷಿಯಾಗಿದ್ದಾಗಿಯೂ ತಿಳಿಸಿದ್ದಾರೆ ಎಂದು thewire.in ವರದಿ ಮಾಡಿದೆ.

ಭಾರತದ ಗಣರಾಜ್ಯೋತ್ಸವದ ಮುನ್ನಾ ದಿನ ನಡೆದ "ಭಾರತದಲ್ಲಿ ಸಂವಿಧಾನಿಕ ಹಕ್ಕುಗಳ ರಕ್ಷಣೆಯ ಪರಿಶೀಲನೆ" ಕುರಿತಾದ ವರ್ಚುವಲ್‌ ಸಭೆಯೊಂದಲ್ಲಿನ ಫಿನ್ನಿಶ್‌ ಗ್ರೀನ್‌ ಲೀಗ್‌ ರಾಜಕಾರಣಿಯಾಗಿರುವ ಅಲ್ವೀನಾ ಮೇಲಿನಂತೆ ಹೇಳಿದರು. ಈ ಕಾರ್ಯಕ್ರಮವನ್ನು  ಯುರೋಪಿಯನ್‌ ಯೂನಿಯನ್‌ ಮತ್ತು ಭಾರತದ ನಡುವಿನ ಸಂಬಂಧಗಳಲ್ಲಿ ಪ್ರಮುಖ ಪಾತ್ರ ವಹಿಸುವ ಮಾನವ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆಗಾಗಿ ಪಣತೊಟ್ಟಿರುವ ಹೊರದೇಶಗಳ ಭಾರತೀಯರ ಸಂಸ್ಥೆ ಲಂಡನ್‌ ಸ್ಟೋರಿ ಆಯೋಜಿಸಿತ್ತು.

"ಭಾರತದಲ್ಲಿ ಹೋರಾಟಗಾರರ ಬಂಧನ, ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹಾಗೂ ಮಾಧ್ಯಮದ ದಮನ ಅಲ್ಲಿ ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಅವನತಿಯ ಸೂಚಕವಾಗಿದೆ. ಪೊಲೀಸ್‌ ದೌರ್ಜನ್ಯಗಳು ಕೂಡ ದುರಾದೃಷ್ಟಕರ ಮತ್ತು  ಹೆಚ್ಚಿನ ಕ್ರಮಗಳು ಟೀಕಾಕಾರರ ದನಿಯನ್ನು ದಮನಿಸುವ ಯತ್ನಗಳಾಗಿವೆ," ಎಂದು ಅವರು ಹೇಳಿದರು.

"ಮಾನವ ಹಕ್ಕುಗಳ ರಕ್ಷಣೆ ಭಾರತ-ಯುರೋಪಿಯನ್‌ ಯೂನಿಯನ್‌ ಪಾಲುದಾರಿಕೆಯಲ್ಲಿ ಮಹತ್ವ ಪಡೆದಿದೆ ಹಾಗೂ ಭಾರತದ ಅಂತಾರಾಷ್ಟೀಯ ಪಾಲುದಾರರು ಆ ದೇಶದಲ್ಲಿ ನಡೆಯುವ ಘಟನೆಗಳಿಗೆ ಅದನ್ನು ಹೊಣೆಗಾರನನ್ನಾಗಿಸಬೇಕು, ಯುರೋಪಿಯನ್‌ ದೇಶಗಳಲ್ಲೂ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಈ ಕುರಿತು ಕೂಡ ಕ್ರಮಗಳು ಅಗತ್ಯವಿದೆ" ಎಂದು ಅವರು ಹೇಳಿದರು.

ಅನ್ವಿತಾ ಅವರು ಇತ್ತೀಚೆಗೆ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡಿದ್ದು ಈ ಸಂದರ್ಭ ವಕೀಲರು, ಪತ್ರಕರ್ತರು ಹಾಗೂ ಸರ್ಕಾರಿ ಪ್ರತಿನಿಧಿಗಳನ್ನು ಭೇಟಿಯಾಗಿದ್ದರು.

ತಮ್ಮ ಭಾರತ ಭೇಟಿಯ ಅನುಭವಗಳನ್ನು ಹಂಚಿಕೊಂಡ ಆಕೆ " ನಾನು ಭೇಟಿಯಾದ ಅನೇಕ ಮಾನವ ಹಕ್ಕುಗಳ ಹೋರಾಟಗಾರರು, ಅಪಾಯಕಾರಿ ಹಾಗೂ ನಿರ್ಬಂಧಿತ ಸನ್ನಿವೇಶಗಳಲ್ಲಿ ಕೆಲಸ ಮಾಡುತ್ತಿರುವುದನ್ನು ನೋಡಿದೆ. ಅವರ ಕಚೇರಿಗಳನ್ನು ಮುಚ್ಚಲಾಗಿದೆ ಹಾಗೂ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ. ಹಲವಾರು ಗೌರವಾನ್ವಿತ ಎನ್‌ಜಿಒಗಳನ್ನು ಭೇಟಿಯಾದೆ ಹಾಗೂ ಅವರೆಲ್ಲೂ ಭೂಗತವಾಗಿ ಕಾರ್ಯಾಚರಿಸಬೇಕಾಗಿ ಬಂದಿದೆ," ಎಂದು ಅವರು ಹೇಳಿದರು.

"ಸಂವಿಧಾನದಲ್ಲಿ ಪ್ರದತ್ತವಾದ ಎಲ್ಲಾ ಹಕ್ಕುಗಳನ್ನೂ ಭಾರತ ಗೌರವಿಸುವಂತಾಗಬೇಕೆಂದು ಪ್ರಜಾಪ್ರಭುತ್ವ ದಿನದಂದು ಆಶಿಸುತ್ತೇನೆ," ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ತೀಸ್ತಾರನ್ನು ಮತ್ತೆ ಏಕೆ ಜೈಲಿಗೆ ಕಳುಹಿಸಬೇಕೆಂದಿರುವಿರಿ: CBI, ಗುಜರಾತ್‌ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಪ್ರಶ್ನೆ

share
Next Story
X