Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಯುವಕನ ಮುಖಕ್ಕೆ ಉಗಿದು, ಬೂಟು...

ದಲಿತ ಯುವಕನ ಮುಖಕ್ಕೆ ಉಗಿದು, ಬೂಟು ನೆಕ್ಕುವಂತೆ ಬಲವಂತಪಡಿಸಿದ ಮುಂಬೈ ಪೊಲೀಸ್‌ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

26 Jan 2023 7:15 PM IST
share
ದಲಿತ ಯುವಕನ ಮುಖಕ್ಕೆ ಉಗಿದು, ಬೂಟು ನೆಕ್ಕುವಂತೆ ಬಲವಂತಪಡಿಸಿದ ಮುಂಬೈ ಪೊಲೀಸ್‌ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ನವಿ ಮುಂಬೈನ ಕಲಂಬೋಲಿ ಪೊಲೀಸ್ ಠಾಣೆಯಲ್ಲಿ 28 ವರ್ಷದ ದಲಿತ ಯುವಕನಿಗೆ ಹಲ್ಲೆಗೈದು, ಜಾತಿ ನಿಂದನೆಗೈದು ಆತನ ಮೇಲೆ ಉಗುಳಿದ ಆರೋಪದ ಮೇಲೆ ಅಸಿಸ್ಟೆಂಟ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ ದಿನೇಶ್‌ ಪಾಟೀಲ್‌ ವಿರುದ್ಧ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಸಹಿತ ವಿವಿಧ ಕಾಯಿದೆಗಳ ಪ್ರಕಾರ ದೂರು ದಾಖಲಾಗಿದೆ.

ಪೊಲೀಸ್‌ ಅಧಿಕಾರಿಯು ಠಾಣೆಯಲ್ಲಿ ಸಂತ್ರಸ್ತ ವಿಕಾಸ್‌ ಉಜ್ಗಾರೆ ಮುಖಕ್ಕೆ ಉಗುಳಿದ್ದೇ ಅಲ್ಲದೆ ಆತನಿಗೆ ತಮ್ಮ ಬೂಟುಗಳನ್ನು ನೆಕ್ಕುವಂತೆ ಬಲವಂತಪಡಿಸಿದ್ದರು ಎಂದು ದೂರಲಾಗಿದೆ.

ಸೈಬರ್‌ ವಂಚನೆಗೆ ಸಂಬಂಧಿಸಿದಂತೆ ತಾನು ದಾಖಲಿಸಿದ್ದ ದೂರನ್ನು  ದಾಖಲಿಸಲು ಕಲಂಬೋಲಿ ಠಾಣೆಯ ಅಧಿಕಾರಿಗಳು ಹಿಂಜರಿಯುತ್ತಿರುವ ಕುರಿತಂತೆ ವಿಕಾಸ್‌ ಹಿರಿಯಾಧಿಕಾರಿಗಳಿಗೆ ದೂರು ನೀಡಿದ್ದರಿಂದ ದಿನೇಶ್‌ ಪಾಟೀಲ್‌ ಆಕ್ರೋಶಗೊಂಡಿದ್ದರೆಂದು ಹೇಳಲಾಗಿದೆ.

ಜನವರಿ 6 ರಂದು ವಿಕಾಸ್‌ ತನ್ನ ಸ್ನೇಹಿತನೊಂದಿಗೆ ಚೈನೀಸ್‌ ರೆಸ್ಟೋರೆಂಟ್‌ನಲ್ಲಿದ್ದಾಗ ಸ್ನೇಹಿತ ಹಾಗೂ ರೆಸ್ಟೋರೆಂಟ್‌ ಮಾಲಕನ ನಡುವೆ ಜಗಳವಾಗಿ, ಮಾಲಕ ಇಬ್ಬರಿಗೂ ಹಲ್ಲೆ ನಡೆಸಿದ್ದ, ನಂತರ ತಾನು ಪೊಲೀಸ್‌ ಕಂಟ್ರೋಲ್‌ ರೂಂಗೆ  ಮಾಹಿತಿ ನೀಡಿದ ನಂತರ ಕಲಂಬೋಲಿ ಪೊಲೀಸರು  ಆಗಮಿಸಿದ್ದರು.

ಗಾಯವಾಗಿದ್ದರಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಪೊಲೀಸರಿಗೆ ಮನವಿ ಮಾಡಿದ ನಂತರ ಪನ್ವೇಲ್‌ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಅಲ್ಲಿ ವೈದ್ಯರು ಬೇರೆ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದಾಗ ಪೊಲೀಸರು ಠಾಣೆಗೆ ಕರೆತಂದಿದ್ದು ಅಲ್ಲಿ ಪಾಟೀಲ್‌ ಹಲ್ಲೆ ನಡೆಸಿ, ಉಗಿದು, ನಿಂದನೆಗೈದು ಬೂಟು ನೆಕ್ಕುವಂತೆ ಮಾಡಿದ್ದರು ಎಂದು ವಿಕಾಸ್‌ ಆರೋಪಿಸಿದ್ದಾನೆ.

ಜನವರಿ 7 ರಂದು ಮುಂಜಾನೆ 3 ಗಂಟೆಗೆ ಪೊಲೀಸರು ತನ್ನನ್ನು ಎಂಜಿಎಂ ಆಸ್ಪತ್ರೆಗೆ ದಾಖಳಿಸಿ ಅಲ್ಲಿಂದ ತೆರಳಿದ್ದರು ಎಂದು ಆತ ಹೇಳಿದ್ದಾನೆ. ಅಲ್ಲಿ ಮೂರು ದಿನ ಚಿಕಿತ್ಸೆ ಪಡೆದ ನಂತರ ಆತ ಹಿರಿಯಾಧಿಕಾರಿಗಳಿಗೆ ದೂರು ನೀಡಿದ್ದರೂ  ಎಫ್‌ಐಆರ್‌ ದಾಖಲಾಗದೇ ಇದ್ದುದರಿಂದ ನವಿ ಮುಂಬೈ ಪೊಲೀಸ್‌ ಆಯುಕ್ತರಿಗೆ ದೂರಿದ್ದಾಗಿ ಆತ ಹೇಳಿದ್ದಾನೆ.

ಆರೋಪಿ ಪೊಲೀಸ್‌ ಅಧಿಕಾರಿ ಪಾಟೀಲ್‌ ಅನಾರೋಗ್ಯ ರಜೆ ಪಡೆದಿದ್ಧಾರೆಂದು ಠಾಣೆಯ ಸಿಬ್ಬಂದಿ ಹೇಳಿದ್ಧಾರೆ. ಪ್ರಕರಣವನ್ನು ಸಹಾಯಕ ಪೊಲೀಸ್‌ ಆಯುಕ್ತರು ತನಿಖೆ ನಡೆಸುತ್ತಿದ್ದಾರೆಂಬ ಮಾಹಿತಿಯೂ ಇದೆ.

​ಇದನ್ನು ಓದಿ:  ಬಾಲಕನಿಗೆ ಲೈಂಗಿಕ ಕಿರುಕುಳ, ಕೊಲೆ: ವಿದ್ಯಾರ್ಥಿಯ ಬಂಧನ

share
Next Story
X