Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಐಬಿ ಸತ್ಯ ಪರಿಶೀಲನೆ ತಿದ್ದುಪಡಿ:...

ಪಿಐಬಿ ಸತ್ಯ ಪರಿಶೀಲನೆ ತಿದ್ದುಪಡಿ: ಮರುಮಾಹಿತಿ ಸಲ್ಲಿಸಲು ಗಡುವು ಫೆ.20ಕ್ಕೆ ವಿಸ್ತರಣೆ‌

26 Jan 2023 8:04 PM IST
share
ಪಿಐಬಿ ಸತ್ಯ ಪರಿಶೀಲನೆ ತಿದ್ದುಪಡಿ: ಮರುಮಾಹಿತಿ ಸಲ್ಲಿಸಲು ಗಡುವು ಫೆ.20ಕ್ಕೆ ವಿಸ್ತರಣೆ‌

ಹೊಸದಿಲ್ಲಿ,ಜ.26: ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು Press Information Bureau (PIB) ಅಥವಾ ಸತ್ಯ ಪರಿಶೀಲನೆಗೆ ಕೇಂದ್ರ ಸರಕಾರದಿಂದ ಅಧಿಕಾರ ಪಡೆದಿರುವ ಯಾವುದೇ ಇತರ ಸಂಸ್ಥೆಯು ಸುಳ್ಳು ಎಂದು ಗುರುತಿಸಿದ ಯಾವುದೇ ವಿಷಯವನ್ನು ಆನ್‌ಲೈನ್ ವೇದಿಕೆಗಳು ತೆಗೆದುಹಾಕುವುದನ್ನು ಕಡ್ಡಾಯಗೊಳಿಸಿರುವ ಪ್ರಸ್ತಾವದ ಕುರಿತು ಮರುಮಾಹಿತಿಗಳನ್ನು ಸಲ್ಲಿಸಲು ಗಡುವನ್ನು ಬುಧವಾರ ಜ.25ರಿಂದ ಫೆ.20ಕ್ಕೆ ವಿಸ್ತರಿಸಿದೆ.

ಸಚಿವಾಲಯವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿಯ ಕರಡು ಪ್ರಸ್ತಾವವನ್ನು ಜ.17ರಂದು ಮಂಡಿಸಿತ್ತು. ಪ್ರಸ್ತಾವವನ್ನು ವಿರೋಧಿಸಿದ್ದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (Editors Guild of India) ,ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಷನ್ (DIGIPUB News India Foundation) ಸೇರಿದಂತೆ ಹಲವಾರು ಮಾಧ್ಯಮ ಸಂಘಟನೆಗಳು ಅದನ್ನು ಹಿಂದೆಗೆದುಕೊಳ್ಳುವಂತೆ ಕೇಂದ್ರವನ್ನು ಆಗ್ರಹಿಸಿದ್ದವು.

ಪ್ರಸ್ತಾವಿತ ಬದಲಾವಣೆಯನ್ನು ಜಾರಿಗೊಳಿಸಿದರೆ ಅದು ಅಂತರ್ಜಾಲದಲ್ಲಿ ಸುದ್ದಿ ವರದಿಗಾರಿಕೆ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ತೀವ್ರ ಹಾನಿಯನ್ನುಂಟು ಮಾಡುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಮಂಗಳವಾರ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರು,ಪ್ರಸ್ತಾವವನ್ನು ಜಾರಿಗೊಳಿಸುವ ಮುನ್ನ ಕೇಂದ್ರವು ಸಂಬಂಧಿಸಿದವರೊಂದಿಗೆ ಚರ್ಚೆಗಳನ್ನು ನಡೆಸಲಿದೆ ಎಂದು ತಿಳಿಸಿದ್ದರು.

ಆನ್ಲೈನ್ ಗೇಮಿಂಗ್ಗೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನ ನಿಯಮಗಳು,2021ಕ್ಕೆ ಮಾಡಲಾಗಿರುವ ತಿದ್ದುಪಡಿ ಕುರಿತು ಮರುಮಾಹಿತಿ ಸಲ್ಲಿಕೆಗೆ ಗಡುವನ್ನು ವಿಸ್ತರಿಸಲಾಗಿಲ್ಲ ಎಂದೂ ಸಚಿವಾಲಯವು ಬುಧವಾರ ಸ್ಪಷ್ಟಪಡಿಸಿದೆ.

ಸರಕಾರವು ಆನ್ಲೈನ್ ಗೇಮಿಂಗ್‌ ಅನ್ನು ನಿಯಂತ್ರಿಸಲು ಕರಡು ನಿಯಮಗಳನ್ನು ಜ.2ರಂದು ಬಿಡುಗಡೆಗೊಳಿಸಿತ್ತು ಮತ್ತು ಸಂಬಂಧಿಸಿದವರು ತಮ್ಮ ಅಭಿಪ್ರಾಯಗಳನ್ನು ಜ.17ರೊಳಗೆ ಸಲ್ಲಿಸಬೇಕಿತ್ತು. ಆದರೆ ಅದೇ ದಿನ ಸರಕಾರವು ಸುಳ್ಳುಸುದ್ದಿಗಳಿಗೆ ಸಂಬಂಧಿಸಿದ ತಿದ್ದುಪಡಿಯನ್ನು ಹೊರಡಿಸಿತ್ತು. ಬಳಿಕ ಸಂಬಂಧಿಸಿದವರು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಜ.25ರ ಗಡುವನ್ನು ನೀಡಲಾಗಿತ್ತು.

ಇದನ್ನು ಓದಿ: ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಗಳು ಗಣರಾಜ್ಯೋತ್ಸವ ಆಚರಣೆಗಳನ್ನು ಮಸುಕಾಗಿಸಿದೆ: ಯುರೋಪಿಯನ್‌ ಯೂನಿಯನ್‌ ಸದಸ್ಯೆ

share
Next Story
X