Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಎಲ್ಲ 46 ಮಾನಸಿಕ ಆರೋಗ್ಯ...

ದೇಶದ ಎಲ್ಲ 46 ಮಾನಸಿಕ ಆರೋಗ್ಯ ಸಂಸ್ಥೆಗಳು ಶೋಚನೀಯ ಸ್ಥಿತಿಯಲ್ಲಿವೆ: NHRC

26 Jan 2023 9:19 PM IST
share
ದೇಶದ ಎಲ್ಲ 46 ಮಾನಸಿಕ ಆರೋಗ್ಯ ಸಂಸ್ಥೆಗಳು ಶೋಚನೀಯ ಸ್ಥಿತಿಯಲ್ಲಿವೆ: NHRC

ಹೊಸದಿಲ್ಲಿ,ಜ.26: ದೇಶದಲ್ಲಿಯ ಎಲ್ಲ 46 ಮಾನಸಿಕ ಆರೋಗ್ಯ ಸಂಸ್ಥೆಗಳು ‘ಅಮಾನವೀಯ ಮತ್ತು ಶೋಚನೀಯ ’ಸ್ಥಿತಿಯಲ್ಲಿವೆ ಎಂದು ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC )ವು, ಇದು ಸಂಬಂಧಿಸಿದ ಅಧಿಕಾರಿಗಳ ಕಳಪೆ ನಿರ್ವಹಣೆಯನ್ನು ಸೂಚಿಸುತ್ತಿದೆ ಎಂದು ಬೆಟ್ಟು ಮಾಡಿದೆ.

ತನ್ನ ಅವಲೋಕನಗಳು ಗ್ವಾಲಿಯರ್, ಆಗ್ರಾ ಮತ್ತು ರಾಂಚಿಯಲ್ಲಿನ ನಾಲ್ಕು ಸರಕಾರಿ ಆಸ್ಪತ್ರೆಗಳಿಗೆ ತನ್ನ ಪೂರ್ಣ ಆಯೋಗದ ಭೇಟಿಗಳು ಮತ್ತು ಉಳಿದ 42 ಆಸ್ಪತ್ರೆಗಳಿಗೆ ದೇಶದ ವಿವಿಧ ಭಾಗಗಳಲ್ಲಿಯ ತನ್ನ ವಿಶೇಷ ವರದಿಗಾರರ ಭೇಟಿಗಳನ್ನು ಆಧರಿಸಿದೆ ಎಂದು ಆಯೋಗವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ತಳಮಟ್ಟದಲ್ಲಿಯ ಪರಿಸ್ಥಿತಿ ಮತ್ತು 2017ರ ಮಾನಸಿಕ ಆರೋಗ್ಯ ರಕ್ಷಣೆ ಕಾಯ್ದೆಯ ಅನುಷ್ಠಾನದ ಸ್ಥಿತಿಗತಿಯ ಮೌಲ್ಯಮಾಪನಕ್ಕಾಗಿ ಈ ಭೇಟಿಗಳನ್ನು ನೀಡಲಾಗಿತ್ತು ಎಂದು ಅದು ಹೇಳಿದೆ.

ಆಸ್ಪತ್ರೆಗಳು ವೈದ್ಯರು ಮತ್ತು ಸಿಬ್ಬಂದಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿವೆ ಹಾಗೂ ಗುಣಮುಖರಾದ ರೋಗಿಗಳನ್ನು ಕಾನೂನುಬಾಹಿರವಾಗಿ ಆಸ್ಪತ್ರೆಗಳಲ್ಲಿ ಇಟ್ಟುಕೊಳ್ಳಲಾಗುತ್ತಿದೆ ಎಂದು ಹೇಳಿರುವ ಆಯೋಗವು, ಚೇತರಿಸಿಕೊಂಡ ರೋಗಿಗಳನ್ನು ಆಸ್ಪತ್ರೆಯಲ್ಲಿ ಇಟ್ಟುಕೊಳ್ಳುವುದು ಅಸಾಂವಿಧಾನಿಕವಾಗಿದೆ ಎಂದಿದೆ. ದೇಶಾದ್ಯಂತದ ಮಾನಸಿಕ ಆರೋಗ್ಯ ಕೇಂದ್ರಗಳ ಅಮಾನವೀಯ ಮತ್ತು ಶೋಚನೀಯ ಸ್ಥಿತಿಗಳು ಮತ್ತು ವಿಷಾದನೀಯ ವ್ಯವಹಾರಗಳು ಮಾನಸಿಕ ರೋಗಿಗಳ ಮಾನವ ಹಕ್ಕುಗಳ ಉಲ್ಲಂಘನೆಯಾಗಿವೆ ಎಂದು ಅದು ಬೆಟ್ಟು ಮಾಡಿದೆ.

ಆಯೋಗವು ಆರು ವಾರಗಳಲ್ಲಿ ಕ್ರಮಾನುಷ್ಠಾನ ವರದಿಗಳನ್ನು ಸಲ್ಲಿಸುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ,ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳು,ಮಹಾನಗರಗಳಲ್ಲಿಯ ಪೊಲೀಸ್ ಆಯುಕ್ತರು ಮತ್ತು 46 ಮಾನಸಿಕ ಆರೋಗ್ಯ ಕೇಂದ್ರಗಳ ನಿರ್ದೇಶಕರಿಗೆ ನೋಟಿಸ್ಗಳನ್ನು ಹೊರಡಿಸಿದೆ.

ಇದನ್ನು ಓದಿ: ಲಕ್ನೋ ಕಟ್ಟಡ ದುರಂತ: ಆರು ವರ್ಷದ ಬಾಲಕನ ಪ್ರಾಣ ಉಳಿಸಲು ನೆರವಾದ ʼಕಾರ್ಟೂನ್‌ ಶೋʼ!

share
Next Story
X